ಅಲ್ಲಲ್ಲಿ ಬಿದ್ದಿರುವ ತ್ಯಾಜ್ಯ ರಾಶಿ: ಮಾರಕ ರೋಗಗಳ ಭೀತಿ

ತಲಪಾಡಿಯಿಂದ ಕಾಸರಗೋಡು ವರೆಗಿನ ಹೆದ್ದಾರಿ

Team Udayavani, Jul 12, 2019, 5:48 AM IST

tyajjya

ಕಾಸರಗೋಡು: ರಸ್ತೆ ಬದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಿಕ್ಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ಪ್ರವೃತ್ತಿ ಇನ್ನೂ ಮುಂದುವರಿದಿದ್ದು, ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯುತ್ತಿರು ವುದರಿಂದ ಮಾರಕ ರೋಗಗಳ ಸಹಿತ ಹಲವಾರು ಸಮಸ್ಯೆಗಳನ್ನು ಹುಟ್ಟು ಹಾಕುತ್ತದೆ. ತ್ಯಾಜ್ಯ ವಿಲೇವಾರಿಯ ಬಗ್ಗೆ ಸಾಕಷ್ಟು ಜಾಗೃತಿ, ಅಭಿಯಾನಗಳು ನಡೆಯುತ್ತಿದ್ದರೂ ಇದರಿಂದ ಈ ಬಗ್ಗೆ ಜಾಗೃತಿ ಮೂಡಿದ್ದು ಕಡಿಮೆ ಎಂದರೂ ತಪ್ಪಾಗಲಾರದೇನೋ..! ತ್ಯಾಜ್ಯ ವಿಲೇವಾರಿಗೆ ಸರಕಾರ ಎಷ್ಟೆಲ್ಲ ಯೋಜನೆಗಳನ್ನು ಜಾರಿಗೊಳಿಸಿದರೂ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದರೂ ತ್ಯಾಜ್ಯ ಸಮಸ್ಯೆ ಪರಿಹರಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಅಷ್ಟೇ ಸತ್ಯ. ತಲಪಾಡಿಯಿಂದ ಆರಂಭಿಸಿ ಕಾಸರಗೋಡಿನ ವರೆಗೆ ರಾಷ್ಟ್ರೀಯ ಹೆದ್ದಾರಿಯ ಬದಿಗಳಲ್ಲಿ ರಾಶಿ ಬಿದ್ದಿರುವ ತ್ಯಾಜ್ಯ ರಾಶಿ ನಾವೆಷ್ಟು ಜಾಗೃತರಾಗಿದ್ದೇವೆ ಎಂಬುದನ್ನು ಅಣಕಿಸುವಂತಿದೆ.

ಮುಂಗಾರು ನಿಧಾನವಾಗಿ ಆರಂಭಗೊಳ್ಳುತ್ತಿರುವಂತೆ ವ್ಯಾಪಕ ಪ್ರಮಾಣದಲ್ಲಿ ತ್ಯಾಜ್ಯಗಳ ದುಷ್ಪರಿಣಾಮ ಜನಜೀವನವನ್ನು ಬಾಧಿಸತೊಡಗಿದ್ದು, ಪ್ರಜ್ಞಾವಂತ ಜನ ಆಕ್ರೋಶಗೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪೈಕಿ ಮಂಗಲ್ಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಉಪ್ಪಳ ಪೇಟೆ ಮುಂಚೂಣಿಯಲ್ಲಿದೆ. ಜನಸಾಂದ್ರತೆಯ ದೃಷ್ಟಿಯಿಂದಲೂ ಉಪ್ಪಳ ಅತೀ ಹೆಚ್ಚು ಜನನಿಬಿಡ ಪ್ರದೇಶವಾಗಿದ್ದು, ವ್ಯಾಪಾರ ವಹಿವಾಟು ಸಹಿತ ಅತಿ ಹೆಚ್ಚಿನ ನಾಗರಿಕರು ಒಟ್ಟು ಸೇರುವ ಪ್ರದೇಶವಾಗಿ ಬೆಳೆಯುತ್ತಿದೆ. ಆದರೆ ಇದರ ಜತೆಗೆ ನೈರ್ಮಲ್ಯದಂತಹ ಚಟುವಟಿಕೆಗಳಲ್ಲಿ ಅತೀ ಹಿಂದುಳಿದು ಭಯದ ವಾತಾವರಣಕ್ಕೆ ಕಾರಣವಾಗಿದೆ.

ಪ್ರಸ್ತುತ ಉಪ್ಪಳ ರೈಲು ನಿಲ್ದಾಣ ಪರಿಸರದಲ್ಲಿರುವ ರೈಲ್ವೇ ವಿದ್ಯುತ್‌ ಸಬ್‌ ಸ್ಟೇಶನ್‌ ಬಳಿ ಬೃಹತ್‌ ಪ್ರಮಾಣದಲ್ಲಿ ತ್ಯಾಜ್ಯಗಳನ್ನು ತಂದು ಸುರಿದಿರುವುದರ ಪರಿಣಾಮ ಮಳೆ ನೀರಿನಿಂದ ಕೊಳೆತು ಇದೀಗ ದುರ್ವಾಸನೆ ಬೀರತೊಡಗಿದೆ. ನೂರಾರು ಜನರು ಓಡಾಡುವ ಪರಿಸರದಲ್ಲಿ ತ್ಯಾಜ್ಯಗಳ ಕೊಳೆಯುವಿಕೆಯಿಂದ ಉಂಟಾದ ದುರ್ವಾಸನೆಯ ಕಾರಣ ಮೂಗುಮುಚ್ಚಿ ನಡೆದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಶಾಲಾ ಮಕ್ಕಳು ಓಡಾಡುವ ಈ ಪರಿಸರದಲ್ಲಿ ತ್ಯಾಜ್ಯಗಳ ರಾಶಿಯಿಂದ ಹೊರಬಿದ್ದ ಕಬ್ಬಿಣದ ಚೂರು, ಗಾಜುಗಳಿಂದ ಘಾಸಿಗೊಂಡು ಈಗಾಗಲೇ ಹತ್ತಕ್ಕಿಂತಲೂ ಹೆಚ್ಚು ಮಕ್ಕಳು ಚಿಕಿತ್ಸೆ ಪಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಸಾಂಕ್ರಾಮಿಕ ಕಾಯಿಲೆ ಭೀತಿ

ಉಪ್ಪಳ ಪರಿಸರದಲ್ಲಿ ಈಗಾಗಲೇ ಹಲವೆಡೆ ಸಾಂಕ್ರಾಮಿಕ ಕಾಯಿಲೆಗಳು ಕಂಡುಬಂದಿದ್ದು, ಕಳೆದೊಂದು ವಾರದಲ್ಲಿ ಕೆಮ್ಮು, ಜ್ವರ, ತುರಿಕೆಗಳಿಗೆಂದು ಮಂಗಲ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 150 ಮಂದಿ ಚಿಕಿತ್ಸೆಗೆ ಆಗಮಿಸಿರುವುದಾಗಿ ತಿಳಿದುಬಂದಿದೆ. ಮಿಕ್ಕುಳಿದಂತೆ ಖಾಸಗಿ ಲೆಕ್ಕಾಚಾರಗಳು ಲಭ್ಯವಾಗದಿರುವುದರಿಂದ ಇದು 500ಕ್ಕಿಂತಲೂ ಹೆಚ್ಚು ಮಂದಿಗಳಲ್ಲಿ ಕಂಡುಬಂದಿರ ಬಹುದೆಂದು ಅಂದಾಜಿಸಲಾಗಿದೆ. ಜತೆಗೆ ಮಲೇರಿಯಾ, ಡೆಂಗ್ಯೂ, ಪಿತ್ತಕಾಮಾಲೆ, ಇಲಿಜ್ವರಗಳ ಭೀತಿ ಎದುರಾ ಗಿದ್ದು, ಕೆಲವರಲ್ಲಿ ಇದರ ಲಕ್ಷಣ ಕಂಡುಬಂದಿದೆ.
ಎರಡನೇ ಮಾಲಿನ್ಯ ಪ್ಲಾಂಟ್

ಮಾಲಿನ್ಯ ಸಂಸ್ಕರಣೆಗಾಗಿ ಜಾರಿಗೊಳಿಸಿರುವ ಮಾಲಿನ್ಯ ಸಂಸ್ಕರಣಾ ಪ್ಲಾಂಟ್‌ಗಳ ಪೈಕಿ ರಾಜ್ಯದ ಎರಡು ಗ್ರಾಮ ಪಂಚಾಯತ್‌ಗಳ ಪೈಕಿ ಮಂಗಲ್ಪಾಡಿ ಗ್ರಾಮ ಪಂಚಾಯತ್‌ ಕೂಡ ಒಂದೆಂಬುದು ವಿಶೇಷ. ಆದರೆ ಮಾಲಿನ್ಯ ಸಂಸ್ಕರಣ ಪ್ಲಾಂಟ್ ಇದ್ದರೂ ಉಪ್ಪಳದಲ್ಲಿರುವಷ್ಟು ಮಾಲಿನ್ಯ ರಾಶಿ ಜಿಲ್ಲೆಯ ಇತರೆಡೆಗಳಲ್ಲಿ ಕಾಣಿಸದೆಂಬುದೂ ಆಶ್ಚರ್ಯಕರವಾದ ಸತ್ಯವೂ ಹೌದು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.