ಸವಾಲು ಎದುರಿಸಿ ಸರ್ಕಾರ ಉಳಿಸಿಕೊಳ್ಳಲು ತೀರ್ಮಾನ


Team Udayavani, Jul 12, 2019, 5:00 AM IST

11BNP-(10)

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲೂ ಸರ್ಕಾರಕ್ಕೆ ಎದುರಾಗಿರುವ ಸಂಕಟದ ಬಗ್ಗೆ ಚರ್ಚೆ ನಡೆದು, ಸವಾಲು ಎದುರಿಸಿ ಸರ್ಕಾರ ಉಳಿಸಿಕೊಳ್ಳುವ ತೀರ್ಮಾನ ಮಾಡಲಾಯಿತು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಚಿವರಿಗೆ ಧೈರ್ಯ ತುಂಬಿ, ಇದು ಕೊನೆಯ ಸಂಪುಟ ಸಭೆಯಲ್ಲ. ಇನ್ನೂ ಹಲವು ಸಂಪುಟ ಸಭೆ ನಡೆಯಲಿವೆ. ಸರ್ಕಾರ ಹೇಗೆ
ಉಳಿಯುತ್ತದೆ ಎಂಬ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ. ನನಗೆ ಬಿಡಿ ಎಂದು
ಹೇಳಿದರು ಎಂದು ಹೇಳಲಾಗಿದೆ.

ಬಿಜೆಪಿಯ ಕೇಂದ್ರದ ನಾಯಕರೇ ಈ ಬಾರಿ ಶತಾಯ ಗತಾಯ ಸರ್ಕಾರ ಪತನಕ್ಕೆ ಎಲ್ಲ ರೀತಿಯ ಕಾರ್ಯತಂತ್ರದೊಂದಿಗೆ ಇಳಿದಿದ್ದಾರೆ.

ಈ ಬಾರಿ ಇದನ್ನು ವಿಫ‌ಲಗೊಳಿಸಿದರೆ ಮತ್ತೆ ಅವರು ಪ್ರಯತ್ನಕ್ಕೆ ಮುಂದಾಗುವುದಿಲ್ಲ. ಹೀಗಾಗಿ, ಎಲ್ಲ ರೀತಿಯಲ್ಲೂ ನಾವು ಪ್ರಯತ್ನ ಪಡೋಣ. ಮತ್ತೆ ಶಾಸಕರ್ಯಾರೂ ರಾಜೀನಾಮೆ ಕೊಡದಂತೆ ನೋಡಿಕೊಳ್ಳೋಣ ಎಂದು ಮುಖ್ಯಮಂತ್ರಿಯವರು ಹೇಳಿದರು.

ಕುಮಾರಕೃಪ ಅತಿಥಿ ಗೃಹದಲ್ಲಿ ಕಾಂಗ್ರೆಸ್‌ ನಾಯಕರ ಜತೆ ನಡೆದ ಮಾತುಕತೆ, ಎರಡು ದಿನಗಳಿಂದ ಶಾಸಕರ ಮನವೊಲಿಕೆಗೆ ನಡೆಸುತ್ತಿರುವ ಪ್ರಯತ್ನ ದ ಬಗ್ಗೆ ಸಂಪುಟ
ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ ಅವರು, ಆತಂಕಪಡುವ ಅಗತ್ಯವಿಲ್ಲ. ಅಧಿವೇಶನದಲ್ಲಿ ಸಮರ್ಥವಾಗಿ ಪ್ರತಿಪಕ್ಷವನ್ನು ಎದುರಿಸೋಣ ಎಂದು ಧೈರ್ಯ ತುಂಬಿದರು ಎಂದು ಮೂಲಗಳು ತಿಳಿಸಿವೆ.

ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಸಂಪುಟ ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆಯಾಯಿತು.

ಬಿಜೆಪಿಯವರದು ಇದು ಮೊದಲನೇ ಪ್ರಯತ್ನವೇನಲ್ಲ. ಆರನೆಯದೋ, ಏಳನೆಯದೋ ಪ್ರಯತ್ನ.ಕೇಂದ್ರ ಸರ್ಕಾರವನ್ನು ಉಪಯೋಗಿಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸಿದೆ. ಈ ಬಾರಿ ಹಿಂದಿಗಿಂತ ಸ್ಥಿತಿ ಗಂಭೀರವಾಗಿದೆ ಎಂಬುದು ಗೊತ್ತು. ಆದರೂ ನಾವೆಲ್ಲರೂ ಸವಾಲು ಎದುರಿಸಿ ಸರ್ಕಾರ ಉಳಿಸಿಕೊಳ್ಳುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.

ಬಿಜೆಪಿ ಅವಿಶ್ವಾಸ ಮಂಡಿಸಲಿ: ಶುಕ್ರವಾರದ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಬಹುಮತ ಸಾಬೀತು ಮಾಡ್ತಾರಾ ಎಂಬ ಪ್ರಶ್ನೆಗೆ, ಅನಿವಾರ್ಯವಾದರೆ ಮಾಡುತ್ತೇವೆ. ಆದರೆ, ನಮಗಿಂತ ಆತುರ ಬಿಜೆಪಿಯವರಿಗೆ ಇರುವುದರಿಂದ ಅವರು ಬೇಕಾದರೆ ಅವಿಶ್ವಾಸ ನಿರ್ಣಯ ಮಂಡಿಸಲಿ, ನಾವು ಬಹುಮತ ಸಾಬೀತು ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯಪಾಲರು ಬಹುಮತ ಸಾಬೀತಿಗೆ ಸೂಚಿಸಿದರೆ ಎಂಬ ಪ್ರಶ್ನೆಗೆ, ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಅಧಿಕಾರ ಹೊಂದಿದ್ದಾರೆ. ಅವರು ನೀಡುವ ಆದೇಶ ಪಾಲಿಸಲಾಗುವುದು ಎಂದು ಹೇಳಿದರು. ಅಧಿವೇಶನದಲ್ಲಿ ಹಣಕಾಸು ವಿಧೇಯಕಕ್ಕೆ ಆನುಮತಿ ಪಡೆಯಲಿದ್ದೇವೆ.

ಬಿಜೆಪಿಯೂ ಚರ್ಚೆಗೆ ಬರಲಿ, ವಿಧೇಯಕ ಮತಕ್ಕೆ ಹಾಕಲು ಬಿಜೆಪಿ ಒತ್ತಾಯಿಸಿದರೂ ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.