ರಸ್ತೆಗಳ ಕಣ್ಣೀರ ಕಥೆ


Team Udayavani, Jul 12, 2019, 8:14 AM IST

hubali-tdy-3..

ಹುಬ್ಬಳ್ಳಿ: ಗದಗ ರಸ್ತೆ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ.

ಹುಬ್ಬಳ್ಳಿ: ನಗರದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯ. ನೀರು ಇನ್ನಿತರ ಸಂಪರ್ಕಕ್ಕೆ ಕಡಿತಗೊಂಡ ರಸ್ತೆಗಳು ಸಮರ್ಪಕ ದುರಸ್ತಿ ಇಲ್ಲದಿರುವುದು, ಗುಂಡಿ ಮುಚ್ಚಲು ಸ್ವತಃ ಪಾಲಿಕೆಯವರೇ ಮುಂದೆ ನಿಂತು ಚರಂಡಿ ತ್ಯಾಜ್ಯ ಮಣ್ಣು , ಕೆಂಪು ಮಣ್ಣು ಹಾಕಿಸಿ ರಸ್ತೆಯನ್ನು ಇನ್ನಷ್ಟು ರಾಡಿಮಯವಾಗಿಸಿದ್ದು, ವಾಹನ ಚಾಲಕರ ಪಾಡು ದೇವರಿಗೇ ಪ್ರೀತಿ ಎನ್ನುವಂತಾಗಿದೆ.

ರಸ್ತೆಗಳ ನಿರ್ಮಾಣಕ್ಕಾಗಿಯೇ ನೂರಾರು ಕೋಟಿ ಬಂದಿದೆ ಎಂಬ ಪ್ರಚಾರದ ನಡುವೆಯೂ ಅನೇಕ ರಸ್ತೆಗಳು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿವೆ. ಸಿಮೆಂಟ್ ರಸ್ತೆ ನಿರ್ಮಾಣ ಮಾಡಿದ ಕಡೆಗಳಲ್ಲಿ ಅನುಸರಿಸಿದ ಅವೈಜ್ಞಾನಿಕ ಕ್ರಮದಿಂದಾಗಿ ಹಿಂದಿನ ಸ್ಥಿತಿಗಿಂತಲೂ ಹದಗೆಟ್ಟ ಸ್ಥಿತಿ ಎದುರಾಗಿದೆ. ಇವೆಲ್ಲದರ ಮಧ್ಯೆ ಪಾಲಿಕೆ ಮಾತ್ರ ತನಗೇನು ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದೆ.

ಗುಂಡಿಗಳಿಗೆ ಕೊನೆ ಇಲ್ಲವೆ?: ನಗರದ ಪ್ರಮುಖ ಕೇಂದ್ರ ಸ್ಥಳ ಹಳೇ ಬಸ್‌ನಿಲ್ದಾಣದ ಎದುರಿನ ರಸ್ತೆ ಹದಗೆಟ್ಟು ಹೋಗಿದೆ. ಮೊದಲೇ ವಾಹನ ದಟ್ಟಣೆ ಹೆಚ್ಚಾಗಿರುವ ರಸ್ತೆಯಲ್ಲಿ ಗುಂಡಿಗಳಿದ್ದರೆ ವಾಹನ ಸಂಚಾರ ಇನ್ನಷ್ಟು ವಿಳಂಬವಾಗುತ್ತದೆ. ಕಿತ್ತೂರು ಚನ್ನಮ್ಮ ವೃತ್ತದಲ್ಲಿಯೂ ಅನೇಕ ಗುಂಡಿಗಳು ಬಿದ್ದಿದ್ದು ಸಂಚಾರಕ್ಕೆ ತೊಂದರೆ ಆಗುತ್ತಿದೆ.

ಅಂಬೇಡ್ಕರ್‌ ವೃತ್ತ ಹತ್ತಿರದ ಮಹಾಯೋಗಿ ವೇಮನ ಬೀದಿಯ ರಸ್ತೆಯಲ್ಲಿ ಮಳೆ ನೀರು ರಸ್ತೆಯ ಮೇಲೆ ಸಂಗ್ರಹವಾಗುವುದರಿಂದ ಸಮಸ್ಯೆ ಹೇಳತೀರದು. ರೈಲು ನಿಲ್ದಾಣ ಸಮೀಪದ ಅಂಡರ್‌ಬ್ರಿಡ್ಜ್ ರಸ್ತೆಯ ಮೇಲೆ ನೀರು ನಿಲ್ಲುತ್ತಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿದರೆ, ಮಳೆಗಾಲದಲ್ಲಿ ಮಳೆ ನೀರು ಕೂಡ ಇಲ್ಲಿ ಸೇರಿ ಸಮಸ್ಯೆಯನ್ನು ಇನ್ನಷ್ಟು ಉಲ್ಭಣಗೊಳಿಸುತ್ತದೆ. ಸುತ್ತಮುತ್ತಲಿನ ಅಂಗಡಿಯವರು ರಸ್ತೆಯ ಪಕ್ಕದಲ್ಲಿಯೇ ಕಸ ಸುರಿಯುವುದರಿಂದ ಸಮಸ್ಯೆ ಇನ್ನಷ್ಟು ಹೆಚ್ಚಾಗಿದೆ. ರಸ್ತೆಯ ಎರಡೂ ಬದಿಯ ಫುಟ್ಪಾತ್‌ಗಳು ಕಸ, ರಾಡಿಮಯವಾಗಿದ್ದರಿಂದ ಜನರು ಕೂಡ ಫುಟ್ಪಾತ್‌ ಬಿಟ್ಟು ರಸ್ತೆಯಲ್ಲಿಯೇ ಸಂಚರಿಸುವಂತಾಗಿದೆ. ಇದರಿಂದ ಟ್ರಾಫಿಕ್‌ಜಾಮ್‌ ಸಾಮಾನ್ಯವಾಗಿದೆ. ಇಲ್ಲಿ ಸೇವೆ ಸಲ್ಲಿಸುವ ಸಂಚಾರ ಪೋಲಿಸರು ಬೇಸತ್ತು ಹೋಗಿದ್ದಾರೆ. ರಸ್ತೆಯ ಮೇಲೆ ನೀರು ನಿಲ್ಲದೇ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕೆಂಬುದು ರಸ್ತೆಯಲ್ಲಿ ಸಂಚರಿಸುವವರ ಆಗ್ರಹವಾಗಿದೆ.

 

►ಪುಟ್ಟಪ್ಪ ಲಮಾಣಿ

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.