ಪ್ರಕಾಶ ಕಡಪಟ್ಟಿಗೆ ಗುಬ್ಬಿ ವೀರಣ್ಣ ಪ್ರಶಸ್ತಿ

•ರಂಗಭೂಮಿಯೇ ಇವರ ಉಸಿರು •ನಾಲ್ಕು ದಶಕ ರಂಗಭೂಮಿ ಸೇವೆಗೈದ ಪ್ರಕಾಶರಿಗೆ ಸರ್ಕಾರದ ಗೌರವ

Team Udayavani, Jul 12, 2019, 8:36 AM IST

bk-tdy-3..

ಪ್ರಕಾಶ ಕಡಪಟ್ಟಿ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಕಡಪಟ್ಟಿ ಗ್ರಾಮದ ಹಿರಿಯ ವೃತ್ತಿ ರಂಗಭೂಮಿ ಕಲಾವಿದ, ನಾಟಕಕಾರ ಪ್ರಕಾಶ ಕಡಪಟ್ಟಿ ಅವರಿಗೆ ರಾಜ್ಯ ಸರ್ಕಾರ ನೀಡುವ 2018ನೇ ಸಾಲಿನ ಗುಬ್ಬಿ ವೀರಣ್ಣ ಪ್ರಶಸ್ತಿ ಲಭಿಸಿದೆ.

ಬಾಲ್ಯದಲ್ಲೇ ಮುಖಕ್ಕೆ ಬಣ್ಣ ಹಚ್ಚಿಕೊಂಡು, ಸತತ ನಾಲ್ಕು ದಶಕಗಳ ಕಾಲ ಕನ್ನಡ ವೃತ್ತಿ ರಂಗಭೂಮಿಯನ್ನು ಶ್ರೀಮಂತಗೊಳಿಸಿದ ಜಿಲ್ಲೆಯ ಹಿರಿಯ ಕಲಾವಿದರನ್ನು ರಾಜ್ಯ ಸರ್ಕಾರ ಇದೀಗ ಗೌರವಿಸಿದೆ.

ಈ ಪ್ರಶಸ್ತಿಯು 5 ಲಕ್ಷ ರೂ ನಗದು ಹಾಗೂ ಪುರಸ್ಕಾರ ಒಳಗೊಂಡಿದ್ದು, ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವಾದಂತಾಗಿದೆ.

ಕಡಪಟ್ಟಿ ಗ್ರಾಮದ ವೇದಮೂರ್ತಿ ಶಂಕ್ರಯ್ಯ ಮತ್ತು ರಾಚವ್ವ ಅವರ ಪುತ್ರರಾಗಿ 1948ರಲ್ಲಿ ಜನಿಸಿದ ಪ್ರಕಾಶ ಅವರು, ಪಿಯುಸಿ ವ್ಯಾಸಂಗ ಕಲಿತು, ತಂದೆಯಿಂದ ಬಳುವಳಿಯಾಗಿ ಬಂದಿದ್ದ ರಂಗಭೂಮಿ ಕ್ಷೇತ್ರಕ್ಕೆ ಬಂದವರು. ಕಲಿಯುಗದ ಕುಬೇರ ನಾಟಕದಲ್ಲಿ ರವಿ ಪಾತ್ರಧಾರಿಯಾಗಿ ಮಿಂಚಿದ ಅವರು, ತಮ್ಮ ಕಲಿಯುಗದ ಕುಬೇರ ನಾಟಕದ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಮನ ಗೆದ್ದಿದ್ದರು. ಆದರೆ, ಕುಬೇರನಾಗಿ ಪಾತ್ರದಲ್ಲಿ ಮಿಂಚಿದ್ದ ಇವರು, ಜೀವನದ ಸಂಧ್ಯಾ ಕಾಲದಲ್ಲಿ ಆರ್ಥಿಕ ಸಂಕಷ್ಟ ಎದುರಿಸಿದ್ದರು. ಈಚೆಗೆ ಅವರ ಹುಟ್ಟೂರಿನಲ್ಲಿ ಗ್ರಾಮಸ್ಥರು, ಸ್ನೇಹಿತರು ಇವರ ಸಮಸ್ಯೆಗೆ ಸ್ಪಂದಿಸಿ, ದೇಣಿಗೆ ಎತ್ತಿ ಆರ್ಥಿಕ ಸಹಾಯ ಮಾಡಿದ್ದರು.

ಸಧ್ಯ ಧಾರವಾಡ ಜಿಲ್ಲೆಯ ಇನಾಮಹಂಚಿನಾಳದಲ್ಲಿ ತಮ್ಮ ಪುತ್ರಿಯೊಂದಿಗೆ (ಅವರೂ ನಾಟಕ ಕಲಾವಿದರು) ನೆಲೆಸಿದ್ದಾರೆ. ಹಿಂದಿ ಸಿನಿಮಾ ಹಾಡುಗಳನ್ನು ನಾಟಕದಲ್ಲಿ ತಮ್ಮ ಶೈಲಿಯಲ್ಲಿ ಅಳವಡಿಸಿ, ಪ್ರೇಕ್ಷಕರ ಮನ ಗೆಲ್ಲುತ್ತಿದ್ದ ಪ್ರಕಾಶ ಅವರು, ಡಾ|ರಾಜಕುಮಾರ ಅವರಿಂದಲೂ ಶಬ್ಟಾಶ್‌ಗಿರಿ ಪಡೆದಿದ್ದರು. ಮಾಜಿ ಸಚಿವೆ ಉಮಾಶ್ರೀ ಸೇರಿ ಹಲವಾರು ರಂಗ ಕಲಾವಿದರಿಗೆ ವೃತ್ತಿ ರಂಗಭೂಮಿಯಲ್ಲಿ ದೊಡ್ಡ ಹೆಸರು ಪಡೆಯಲು ಇವರ ನಾಟಕಗಳೇ ಕಾರಣವಾಗಿದ್ದವು.ಮುದುಕನ ಮದುವೆ, ಚಿನ್ನದ ಗೊಂಬೆ, ಸತಿ ಸಂಸಾರದ ಜ್ಯೋತಿ, ಮನೆಗೆ ತಕ್ಕ ಮಗ, ಮುತ್ತೈದೆಗೆ ಕುತ್ತೈದು, ಭೂಮಿ ತೂಕದ ಹೆಣ್ಣು ಹೀಗೆ ಹಲವು ನಾಟಕ ರಚಿಸಿ, ತಾವೂ ಅಭಿನಯಿಸಿದ್ದಾರೆ. ಇವರು ರಚಿಸಿದ ಬಂಗಾರದ ಮನುಷ್ಯ, ತವರು ಬಿಟ್ಟ ತಂಗಿ, ಮದನಮೋಹ, ಕಣ್ಣು ಕೊಟ್ಟ ತಂಗಿ, ಗರತಿ ಗೆದ್ದಳು-ಸವತಿ ಸೋತಳು, ಪಣ ತೊಟ್ಟ ಪತಿವ್ರತೆ ಸೇರಿದಂತೆ ಹಲವಾರು ನಾಟಕಗಳನ್ನು ಕಲಾಸಕ್ತರು ಇಂದಿಗೂ ಸ್ಮರಿಸುತ್ತಾರೆ.

ಜೀವನದ ಸಂಧ್ಯಾ ಕಾಲದಲ್ಲಿ ಕಷ್ಟಪಡುತ್ತಲೇ ಬದುಕಿನ ಬಂಡಿ ಸಾಗುತ್ತಿರುವ ಪ್ರಕಾಶ ಕಡಪಟ್ಟಿ ಅವರಿಗೆ ಇದೀಗ ರಾಜ್ಯ ಸರ್ಕಾರ, ಗುರುತಿಸಿ, ಉತ್ತಮ ಪ್ರಶಸ್ತಿಯೊಂದಕ್ಕೆ ಆಯ್ಕೆ ಮಾಡಿದ್ದು, ಕಡಪಟ್ಟಿ ಗ್ರಾಮಸ್ಥರು ಹಾಗೂ ಜಿಲ್ಲೆಯ ವೃತ್ತಿ ರಂಗಭೂಮಿ ಕಲಾವಿದರಿಗೆ ಸಂಭ್ರಮ ತಂದಿದೆ.

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.