ಆಪ್ತಮಿತ್ರನನ್ನೆ ಮಾರಿ ಮರಗುತ್ತಿರುವ ಅನ್ನದಾತ

•ಕೃಷಿ ಚಟುವಟಿಕೆಗೆ ಎತ್ತುಗಳ ಸಮಸ್ಯೆ ಎದುರಿಸುತ್ತಿರುವ ರೈತ•ಅನಿವಾರ್ಯ ದುಬಾರಿ ದರದ ಬಾಡಿಗೆ ಯಂತ್ರ ಬಳಕೆ

Team Udayavani, Jul 12, 2019, 9:33 AM IST

hv-tdy-1..

ಹಾವೇರಿ: ಸತತ ನಾಲ್ಕೈದು ವರ್ಷಗಳಿಂದ ಬರಗಾಲದ ಬವಣೆಯಲ್ಲಿ ಬೆಂದಿರುವ ಜಿಲ್ಲೆಯ ಬಹುತೇಕ ಸಣ್ಣ ರೈತರು, ಸಂಕಷ್ಟದ ಕಾಲದಲ್ಲಿ ಜೀವನಾಡಿಯಾದ ಎತ್ತುಗಳನ್ನು ಮಾರಾಟ ಮಾಡಿದ್ದು, ಈಗಷ್ಟೇ ಆರಂಭವಾಗಿರುವ ಕೃಷಿ ಚಟುವಟಿಕೆಗೆ ಎತ್ತುಗಳಿಲ್ಲದೇ ಮರಗುತ್ತಿದ್ದಾರೆ.

ಬರದ ಕಾರಣದಿಂದಾದ ಉಂಟಾದ ಆರ್ಥಿಕ ಸಂಕಷ್ಟಕ್ಕೆ ಅನೇಕ ಸಣ್ಣ ರೈತರು ಕಳೆದ ಬೇಸಿಗೆಯಲ್ಲಿಯೇ ಎತ್ತುಗಳನ್ನು ಮಾರಾಟ ಮಾಡಿದ್ದಾರೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಒದಗಿಸುವುದು ಸಹ ಕಷ್ಟವಾಗಿತ್ತು. ಜಾನುವಾರುಗಳಿಗೆ ಹಾಕಲು ಸಮರ್ಪಕ ಮೇವು ಲಭ್ಯ ಇಲ್ಲದೇ ರೈತರು ಎತ್ತುಗಳನ್ನು ಮಾರಾಟ ಮಾಡಿದ್ದಾರೆ. ಹೀಗಾಗಿ ಈಗ ಸಣ್ಣ, ಅತಿ ಸಣ್ಣ ರೈತರು ಎತ್ತುಗಳ ಸಮಸ್ಯೆ ಎದುರಿಸುವಂತಾಗಿದೆ.

ಈ ವರ್ಷ ಜುಲೈವರೆಗೂ ಮುಂಗಾರು ಮಳೆ ಬಾರದೆ ಇರುವುದರಿಂದ ಬಹುತೇಕ ರೈತರು ಬಿತ್ತನೆ ವಿಚಾರವನ್ನೇ ಕೈಬಿಟ್ಟಿದ್ದರು. ಈ ಒಂದು ವಾರದಿಂದ ಜಿಲ್ಲೆಯಲ್ಲಿ ತುಸು ಮಳೆ ಬೀಳುತ್ತಿದ್ದು ಮತ್ತೆ ರೈತರ ಮನದಲ್ಲಿ ಕೃಷಿ ಮಾಡುವ ಆಸೆ ಚಿಗುರೊಡೆದಿದೆ. ಆದರೆ, ಕೃಷಿ ಚಟುವಟಿಕೆ ನಡೆಸಲು ಈಗ ಎತ್ತುಗಳ ಸಮಸ್ಯೆ ಎದುರಾಗಿದೆ. ಹೊಸದಾಗಿ ಎತ್ತುಗಳನ್ನು ಕೊಂಡುಕೊಳ್ಳುವಷ್ಟು ಹಣ ರೈತರ ಬಳಿ ಇಲ್ಲ. ಇನ್ನು ದುಬಾರಿ ಬಾಡಿಗೆ ಕೊಟ್ಟು ಯಂತ್ರಗಳನ್ನು ಬಳಸುವ ಶಕ್ತಿಯೂ ಇಲ್ಲದಂತಾಗಿದೆ.

ಬಾಡಿಗೆಯಂತ್ರಕ್ಕೆ ಮೊರೆ: ಎತ್ತುಗಳು ಇಲ್ಲದೇ ಇರುವುದರಿಂದ ಅನೇಕರು ಮತ್ತೆ ಸಾಲ ಮಾಡಿ, ಬಂದಿರುವ ಒಂದಿಷ್ಟು ಬೆಳೆವಿಮೆ ಹಣ ಬಳಸಿ ಬಾಡಿಗೆ ಯಂತ್ರಗಳನ್ನು ಪಡೆದು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಈಗ ಬಾಡಿಗೆ ಯಂತ್ರಗಳನ್ನು ಬಳಸುವುದು ಅನೇಕ ರೈತರಿಗೆ ಅನಿವಾರ್ಯ ಆಗಿದೆ. ಮಳೆ ಬಿದ್ದಾಗ ಒಂದೇ ಸಲ ಎಲ್ಲರೂ ಕೃಷಿಯಲ್ಲಿ ತೊಡಗಿಕೊಂಡಿರುವುದರಿಂದ ಯಂತ್ರಗಳು ಸಕಾಲಕ್ಕೆ ಬಾಡಿಗೆಗೆ ಸಿಗುತ್ತಿಲ್ಲ. ಇನ್ನು ಖಾಸಗಿಯಾಗಿ ಬಾಡಿಗೆ ಯಂತ್ರಗಳನ್ನು ಪಡೆಯಬೇಕೆಂದರೆ ಹೆಚ್ಚಿನ ದರ ನೀಡಬೇಕು. ಇದು ಸಣ್ಣ ರೈತರಿಗೆ ಹೊರೆಯಾಗಿದ್ದು ರೈತರ ಸಂಕಷ್ಟಕ್ಕೆ ಕೊನೆಯ ಇಲ್ಲದಂತಾಗಿದೆ.

ಬಿತ್ತನೆಯೂ ಕಡಿಮೆ:ಈ ವರ್ಷ ಜುಲೈವರೆಗೂ ಮುಂಗಾರು ಮಳೆ ಸಮರ್ಪಕವಾಗಿ ಆಗದೆ ಇರುವುದರಿಂದ ಬಹುತೇಕ ರೈತರು ಕೃಷಿ ಚಟುವಟಿಕೆಯಿಂದಲೇ ವಿಮುಖರಾಗಿದ್ದರು. ಜಿಲ್ಲೆಯ ಕೃಷಿ ಕ್ಷೇತ್ರ 3.22 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಈವರೆಗೆ ಕೇವಲ ಶೇ. 40ರಷ್ಟು ಮಾತ್ರ ಬಿತ್ತನೆಯಾಗಿದೆ. ಮಳೆ ಕೊರತೆ ಕಾರಣದಿಂದ ವಿಳಂಬವಾಗಿ ಬಿತ್ತನೆ ಮಾಡಿದರೆ ಇಳುವರಿ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದು ಗೊತ್ತಿದ್ದರೂ ರೈತರು ಬಂದಷ್ಟಾದರೂ ಬರಲಿ ಎಂಬ ಭಾವನೆಯಿಂದ ಕಷ್ಟದಲ್ಲಿಯೂ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.