ಅಡ್ಡಾದಿಡ್ಡಿ ವಾಹನ ನಿಲುಗಡೆಗೆ ಟ್ರಾಫಿಕ್‌ ಜಾಮ್‌

ಪೊಲೀಸರ ನಿರ್ಲಕ್ಷ್ಯದಿಂದ ಸಂಚಾರ ದಟ್ಟಣೆ • ವಾಹನ ಸವಾರರು, ಪಾದಚಾರಿಗಳ ಪರದಾಟ • ಸಾರ್ವಜನಿಕರ ಆಕ್ರೋಶ

Team Udayavani, Jul 12, 2019, 12:13 PM IST

mysuru-tdy-1..

ಕೆ.ಆರ್‌.ನಗರದಲ್ಲಿ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಪರದಾಡುತ್ತಿರುವುದು.

ಕೆ.ಆರ್‌.ನಗರ: ಪೊಲೀಸರ ನಿರ್ಲಕ್ಷ್ಯದಿಂದ ಪಟ್ಟಣದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನಗಳು ಮತ್ತು ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತಾಗಿದೆ. ನಗರದ ವಾಣಿ ವಿಲಾಸ ರಸ್ತೆ, ಚಂದ್ರಮೌಳೇಶ್ವರ ರಸ್ತೆ, ಬಜಾರ್‌ ರಸ್ತೆ ಹಾಗೂ 7ನೇ ರಸ್ತೆಗಳಲ್ಲಿ ಬೈಕ್‌ ಮಾಲೀಕರು ರಸ್ತೆಯ ಎರಡೂ ಬದಿಗಳಲ್ಲಿ ನಿಲುಗಡೆ ಮಾಡುತ್ತಿದ್ದು, ಇದರಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ.

ರಸ್ತೆ 2 ಬದಿಯೂ ನಿಲುಗಡೆ: ಚಂದ್ರಮೌಳೇಶ್ವರ ರಸ್ತೆಯಲ್ಲಿರುವ ನವನಗರ ಅರ್ಬನ್‌ ಬ್ಯಾಂಕ್‌ ಮತ್ತು ಹೋಟೆಲ್ಗಳಿಗೆ ಬರುವಂತಹ ಗ್ರಾಹಕರು ರಸ್ತೆಯ ಎರಡೂ ಬದಿಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕಿಂಗ್‌ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಸೂರಿಗೆ ತೆರಳುವಂತಹ ಕೆಲವು ನೌಕರರು ತಮ್ಮ ಬೈಕ್‌ಗಳನ್ನು ಇದೇ ರಸ್ತೆಯಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪಾರ್ಕಿಂಗ್‌ ಮಾಡುತ್ತಿದ್ದು, ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.

ರಸ್ತೆಯಲ್ಲೇ ಮರಳು, ಜಲ್ಲಿ: ಅಲ್ಲದೇ ಪುರಸಭೆ ಮಾಜಿ ಸದಸ್ಯ ಎನ್‌.ಶಿವಕುಮಾರ್‌ ಸೇರಿದಂತೆ ಹಲವು ಮಂದಿ ತಮ್ಮ ಕಟ್ಟಡದ ನಿರ್ಮಾಣ ಮತ್ತು ದುರಸ್ತಿಗಾಗಿ ರಸ್ತೆಯಲ್ಲಿಯೇ ಹಲವು ದಿನಗಳಿಂದ ಮರಳು ಮತ್ತು ಜಲ್ಲಿಯನ್ನು ಸುರಿದು ರಾಶಿ ಹಾಕಿರುವುದರಿಂದ ಸಾರ್ವಜನಿಕರು ಮತ್ತು ವಾಹನಗಳ ಓಡಾಡಲು ಹರಸಾಹಸ ಪಡಬೇಕಾಗಿದೆ.

ಪಾರ್ಕಿಂಗ್‌ ಇಲ್ಲ: 7ನೇ ರಸ್ತೆಯಲ್ಲಿ ಕರ್ನಾಟಕ ಬ್ಯಾಂಕ್‌, ಎರಡು ಕಲ್ಯಾಣ ಮಂಟಪಗಳು, ಆಸ್ಪತ್ರೆ ಸೇರಿದಂತೆ ಟೀ ಹೋಟೆಲ್ಗಳು ಇರುವುದರಿಂದ ಸಾರ್ವಜನಿಕರ ದಟ್ಟಣೆ ಹೆಚ್ಚಾಗಿದೆ. ವಾಹನಗಳನ್ನು ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಜೊತೆಗೆ ಕಲ್ಯಾಣ ಮಂಟಪಗಳ ಮಾಲೀಕರು ವಾಹನಗಳ ನಿಲುಗಡೆಗೆ ಪಾರ್ಕಿಂಗ್‌ ವ್ಯವಸ್ಥೆ ಮಾಡದೇ ಇರುವುದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗಿದ್ದು, ಪೊಲೀಸರು ಇತ್ತ ಗಮನಹರಿಸುತ್ತಿಲ್ಲ ಎಂಬುದು ಸಾರ್ವಜನಿಕರು ದೂರುತ್ತಿದ್ದಾರೆ.

ತಳ್ಳುವ ಗಾಡಿಗಳು: ಬಜಾರ್‌ ರಸ್ತೆಯ ಎರಡೂ ಬದಿಗಳಲ್ಲಿ ವಾಣಿಜ್ಯ ಮಳಿಗೆಗಳಿದ್ದು, ರಸ್ತೆ ಬದಿಯಲ್ಲಿ ತರಕಾರಿ ಅಂಗಡಿಗಳು ಮತ್ತು ಹಣ್ಣು ಮತ್ತಿತರ ಸರಕು ಸಾಮಗ್ರಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ತಳ್ಳುವ ಗಾಡಿಗಳನ್ನು ನಿಲ್ಲಿಸುವುದರಿಂದ ರಸ್ತೆಯು 40 ಅಡಿಗೂ ಹೆಚ್ಚು ಅಗಲವಾಗಿದ್ದರೂ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ. ಹಬ್ಬ ಹರಿದಿನಗಳಲ್ಲಂತೂ ಸಾರ್ವಜನಿಕರು ಮತ್ತು ವಾಹನಗಳು ಓಡಾಡಲು ಸಾಧ್ಯವೇ ಇಲ್ಲ. ಈ ಮೊದಲು ಇದ್ದಂತಹ ಪೊಲೀಸರು ಸುಗಮ ಸಂಚಾರಕ್ಕಾಗಿ ಹಲವು ಕಾನೂನನ್ನು ಜಾರಿಗೆ ತಂದಿದ್ದರು. ಇಂದು ಅವುಗಳು ಸರಿಯಾದ ರೀತಿಯಲ್ಲಿ ಪಾಲನೆಯಾಗುತ್ತಿಲ್ಲ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ. ಡಿ.ಚೆನ್ನಣ್ಣನವರ್‌ ಅವಧಿಯಲ್ಲಿ ಸುಗಮ ಸಂಚಾರಕ್ಕೆ ಹಲವು ರೀತಿಯ ನಿಯಮಗಳನ್ನು ರೂಪಿಸುವುದರ ಜತೆಗೆ ಪಟ್ಟಣದಲ್ಲಿ 2 ಪೊಲೀಸ್‌ ಚೌಕಿ ನಿರ್ಮಿಸ ಲಾಗಿತ್ತು. ಆದರೆ ಸರಿಯಾಗಿ ಪಾಲನೆಯಾಗು ತ್ತಿಲ್ಲ. ಸಿಸಿ ಕ್ಯಾಮರಾ ಅಳವಡಿಸುವುದರ ಜತೆಗೆ ಹೈವೇ ಪೆಟ್ರೋಲ್ ವಾಹನವನ್ನು ಪೊಲೀಸ್‌ ಇಲಾಖೆಗೆ ನೀಡಿ ಟ್ರಾಫಿಕ್‌ ಸಮಸ್ಯೆ ಇಲ್ಲದಂತೆ ಮಾಡುತ್ತೇವೆ ಎಂದು ನೀಡಿದ ಭರವಸೆ ಹಾಗೆಯೇ ಉಳಿದಿದೆ.

ಕ್ರಮ ಕೈಗೊಳ್ಳಿ: ಪೊಲೀಸ್‌ ಇಲಾಖೆಯವರು ಬಸ್‌ ನಿಲ್ದಾಣ, ಗರುಡಗಂಭದ ವೃತ್ತ, ಪುರಸಭೆ ವೃತ್ತ ಮತ್ತು ಪೊಲೀಸ್‌ ಠಾಣೆಯ ಎದುರು ವಾಹನಗಳನ್ನು ಅಡ್ಡ ಹಾಕಿ ದೂರು ದಾಖಲು ಮಾಡುವುದರ ಜತೆಗೆ ಮರಳು ಸಾಗಣೆದಾರರನ್ನು ಹಿಡಿದು ದೂರು ದಾಖಲಿಸುವುದರಲ್ಲಿ ನಿರತರಾಗಿದ್ದು, ಟ್ರಾಫಿಕ್‌ ಸಮಸ್ಯೆ ಬಗೆಹರಿಸಲು ಗಮನಹರಿಸುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಟ್ಟುನಿಟ್ಟನ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ವಾಹನ ಸವಾರರು ಹಾಗೂ ಪಾದಚಾರಿಗಳು ಆಗ್ರಹಿಸಿದ್ದಾರೆ.

ಪೊಲೀಸ್‌ ವಸತಿ ಗೃಹ ಬಳಿ ಮರಳು ಶೇಖರಣೆ:

ಅಕ್ರಮವಾಗಿ ಮರಳು ಸಾಗಣೆ ಮಾಡಿದವರಿಂದ ವಶಪಡಿಸಿಕೊಂಡ ಮರಳನ್ನು ನಿಯಮಾನುಸಾರ ಸರ್ಕಾರ ಲೋಕೋಪಯೋಗಿ ಇಲಾಖೆಯ ವತಿಯಿಂದ ತೆರೆದಿರುವ ಯಾರ್ಡ್‌ಗೆ ಹಸ್ತಾಂತರಿಸಬೇಕು. ಆದರೆ, ಈ ಮರಳನ್ನು ಪೊಲೀಸ್‌ ವಸತಿ ಗೃಹದಲ್ಲಿ ಸಂಗ್ರಹಣೆ ಮಾಡಿರುವುದು ಹಲವು ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪೊಲೀಸ್‌ ಇಲಾಖೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ.
● ಗೇರದಡ ನಾಗಣ್ಣ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.