ಪಿಒಪಿ ಗಣೇಶ ಮೂರ್ತಿ ತಯಾರಿಸದಿರಲು ಸೂಚನೆ


Team Udayavani, Jul 12, 2019, 2:25 PM IST

bg-tdy-5..

ಗೋಕಾಕ: ಕೊಣ್ಣೂರ ಪುರಸಭೆ ಸಭಾ ಭವನದಲ್ಲಿ ಮೂರ್ತಿಕಾರರ ಪೂರ್ವಭಾವಿ ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಮಾತನಾಡಿದರು.

ಗೋಕಾಕ: ರಸಾಯನಿಕ ಮಿಶ್ರಿತ ಬಣ್ಣದ ಗಣಪನ ಮೂರ್ತಿ ಹಾಗೂ ಪಿಒಪಿ ನಿರ್ಮಿತ ಗಣಪ ಮೂರ್ತಿಗಳನ್ನು ತಯಾರಿಸಿದರೇ ಪರಿಸರ ಸಂರಕ್ಷಣೆ ಕಾಯ್ದೆ-1976ರ ಅನ್ವಯ ಶಿಕ್ಷೆ ವಿಧಿಸಲಾಗುವುದು ಎಂದು ಕೊಣ್ಣೂರ ಪುರಸಭೆಯ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಹೇಳಿದರು.

ಗುರುವಾರ ತಾಲೂಕಿನ ಕೊಣ್ಣೂರ ಪುರಸಭೆಯ ಸಭಾಭವನದಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಹಾಗೂ ರಾಸಾಯಿನಿಕ ಬಣ್ಣದಿಂದ ಸಿದ್ದಪಡಿಸಿದ ಗಣೇಶ ಮೂರ್ತಿ ತಯಾರಿಸದಂತೆ ಗಣೇಶ ಮೂರ್ತಿಕಾರರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಗಣೇಶ ಮೂರ್ತಿಕಾರರು ಪರಿಸರ ಗಣೇಶ ಮೂರ್ತಿ ತಯಾರಿಸಿ ಸರ್ಕಾರದ ಆದೇಶ ಪಾಲನೆ ಮಾಡಬೇಕು. ಇದಕ್ಕೆ ಮೂರ್ತಿ ತಯಾರಕರು ಮತ್ತು ಮೂರ್ತಿಗಳ ಬಳಕೆದಾರರು ಸಹಕರಿಸಬೇಕು. ತಪ್ಪಿದಲ್ಲಿ ಪುರಸಭೆಯಿಂದ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಗೋಕಾಕ ನಗರಸಭೆ ಪರಿಸರ ಅಭಿಯಂತ ಮಂಜುನಾಥ ಗಜಾಕೋಶ ಮಾತನಾಡಿ, ಪಿ.ಒಪಿ. ಮತ್ತು ಹಾನಿಕಾರಕ ರಸಾಯನಗಳಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಕುಡಿಯುವ ಜಲಮೂಲಗಳಲ್ಲಿ ವಿಸರ್ಜನೆ ಮಾಡಿದಲ್ಲಿ ನೀರು ಮಾಲಿನ್ಯಗೊಳ್ಳುತ್ತದೆ. ಆದ್ದರಿಂದ ಗಣಪತಿ ಉತ್ಸವವನ್ನು ಮಣ್ಣಿನ ಮತ್ತು ಬಣ್ಣ ರಹಿತ ವಿಗ್ರಹಗಳನ್ನು ಪ್ರತಿಷ್ಠಾಪಿಸುದರೊಂದಿಗೆ ಮುಂದಿನ ಪೀಳಿಗೆಗೆ ಒಳ್ಳೆಯ ನೀರು ಮತ್ತು ಪರಿಸರವನ್ನು ನೀಡಬೇಕು ಎಂದರು.

ಈ ವೇಳೆ ಗಣೇಶ ಮೂರ್ತಿಕಾರರು ಮಾತನಾಡಿ, ನಮ್ಮ ಉದ್ಯೋಗ ಗುಡಿ ಕೈಗಾರಿಕೆಯಾಗಿದ್ದು ರಾಜ್ಯದಲ್ಲಿಯೇ ಮಾದರಿ ಮೂರ್ತಿಗಳ ತಯಾರಿಕೆ ನಮ್ಮ ಕೊಣ್ಣೂರಿನಲ್ಲಿ ಆಗುತ್ತಿವೆ. ಮೂರ್ತಿ ತಯಾರಿಕೆ ಸಂಘಗಳಿದ್ದು, ಸಹಾಯಧನದ ಅವಶ್ಯಕತೆಯಿದೆ. ನಮಗೆ ಸರಕಾರದ ಸಹಾಯಧನ ನೀಡಿಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಪುರಸಭೆ ಸದಸ್ಯರಾದ ವಿನೋದ ಕರನಿಂಗ, ಮಾರುತಿ ಪೂಜೇರಿ, ಆರ್‌.ಎಸ್‌. ಕಡಲಗಿ, ಇಮ್ರಾನ ಜಮಾದಾರ, ರಾಮಲಿಂಗ ಮಗದುಮ್‌, ಬಿ.ಬಿ. ಹುಕ್ಕೇರಿ, ಸಾವಂತ ತಳವಾರ, ಸಾಯರಾಬಾನು ಜಮಾದಾರ, ರಜಿಯಾಬೇಗಂ ಹೊರಕೇರಿ, ಮಂಗಲಾ ತೇಲಿ, ಸಿಬ್ಬಂದಿಗಳಾದ ಬಿ.ಡಿ ಕುಮರೇಶಿ, ವೈ.ಎನ್‌. ಚಲವಾದಿ ಹಾಗೂ ಗಣಪತಿ ಮೂರ್ತಿಕಾರರು, ಸರ್ವ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.