ಬೀರೇಶ್ವರ ದೇವಸ್ಥಾನ ಜಾಗ ಕಬಳಿಕೆ ಆರೋಪ ಸುಳ್ಳು

ಶ್ರೀ ಬೀರೇಶ್ವರ ದೇವಸ್ಥಾನ ಪುರಾತನವಾದದ್ದಲ್ಲ-1958ರ ನಂತರ ಕಟ್ಟಿಸಿದ್ದು ಮುಜರಾಯಿ ಇಲಾಖೆ ದೇವಾಲಯ ಇದು

Team Udayavani, Jul 12, 2019, 4:39 PM IST

12-JUly-39

ದಾವಣಗೆರೆ: ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ ಪದಾಧಿಕಾರಿಗಳ ಸುದ್ದಿಗೋಷ್ಠಿ.

ದಾವಣಗೆರೆ: ಹಳೆ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಶ್ರೀ ಬೀರೇಶ್ವರ ದೇವಸ್ಥಾನದ ಜಾಗವನ್ನು ಮಾಜಿ ಶಾಸಕ ಕೆ. ಮಲ್ಲಪ್ಪ ಕಬಳಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಪೂಜಾರ ವಂಶಸ್ಥರು ಮಾಡಿರುವಂತಹ ಆರೋಪ ಸತ್ಯಕ್ಕೆ ದೂರವಾದ ವಿಚಾರ ಎಂದು ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಕೆಂಗೋ ಹನುಮಂತಪ್ಪ ತಿಳಿಸಿದ್ದಾರೆ.

ಮಾಜಿ ಶಾಸಕ ಕೆ.ಮಲ್ಲಪ್ಪ ಅವರು ಅಭಿವೃದ್ಧಿ ಟ್ರಸ್ಟ್‌ ಮಾಡದೇ ಹೋಗಿದ್ದರೆ ಇಷ್ಟೊತ್ತಿಗೆ ದೇವಸ್ಥಾನದ ಜಾಗ ಯಾರ ಯಾರೋ ಪಾಲಾಗುತ್ತಿತ್ತು. ಅವರು ಟ್ರಸ್ಟ್‌ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಳಿಗೆಗಳ ಬಾಡಿಗೆಯನ್ನೂ ಯಾರೂ ಸಹ ದುರುಪಯೋಗಪಡಿಸಿಕೊಂಡಿಲ್ಲ. ಪೂಜಾರ್‌ ವಂಶಸ್ಥರ ಆರೋಪದಲ್ಲಿ ಯಾವುದೇ ಹುರುಳು ಇಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪೂಜಾರ್‌ ವಂಶಸ್ಥರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿರುವಂತೆ ತಲ ತಲಾಂತರದಿಂದ ಪೂಜಾರಿಕೆ ಮಾಡಿಕೊಂಡು ಬರುತ್ತಿಲ್ಲ. 1958ರ ಈಚೆಗೆ ದೇವಸ್ಥಾನ ಕಟ್ಟಿಸಿದ ಮೇಲೆಯೇ ಮಾಜಿ ಶಾಸಕ ಕೆ. ಮಲ್ಲಪ್ಪ ಅವರೇ ಪೂಜಾರ್‌ ವಂಶಸ್ಥರಿಗೆ ದೇವಸ್ಥಾನದ ಪೂಜೆ, ದೇವಸ್ಥಾನ ಹಿಂಭಾಗದಲ್ಲೇ ಮನೆ ಕಟ್ಟಿಕೊಂಡು ಜೀವನ ಮಾಡಿಕೊಂಡು ಹೋಗುವ ಅವಕಾಶ ಮಾಡಿಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಜಾಗ ಕಬಳಿಸುವ ಯತ್ನ ನಡೆಸಿಲ್ಲ. ಯಾರು ಸಹಾಯ ಮಾಡಿದ್ದಾರೋ ಅವರ ಮೇಲೆಯೇ ಆರೋಪ ಮಾಡುವುದು ಅತ್ಯಂತ ಖಂಡನೀಯ. ಇಡೀ ಸಮಾಜ ಕೆ. ಮಲ್ಲಪ್ಪ ವಿರುದ್ಧ ಮಾಡಿರುವ ಆರೋಪವನ್ನು ಖಂಡಿಸುತ್ತದೆ ಎಂದು ತಿಳಿಸಿದರು.

ಪೂಜಾರ್‌ ವಂಶಸ್ಥರಿಗೆ ದೇವಸ್ಥಾನದ ಪೂಜೆ ಮಾಡಿಕೊಂಡು ಹೋಗಲು ಮಾತ್ರವೇ ಅವಕಾಶ ಇದೆ. ಮೇಲಾಗಿ ಶ್ರೀ ಬೀರೇಶ್ವರ ದೇವಸ್ಥಾನ ಮುಜುರಾಯಿ ಇಲಾಖೆಗೆ ಸೇರಿರುವಾಗ ಜಾಗ ನಮ್ಮದು ಎಂದು ಹೇಳಲಿಕ್ಕೂ ಬರುವುದೇ ಇಲ್ಲ. ಹಾಗೇನಾದರೂ ಇದ್ದರೆ ಕಾನೂನು ಮೂಲಕ ಪಡೆದುಕೊಳ್ಳಲಿಕ್ಕೆ ಯಾರೂ ಬೇಡ ಅನ್ನುವುದಿಲ್ಲ. ಈಗಿರುವ ಪೂಜಾರಿ ಅವರನ್ನ ವಜಾ ಮಾಡಬೇಕು ಎಂದು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್‌ ಅವರಿಗೆ ಮನವಿ ಸಹ ಮಾಡಲಾಗಿದೆ. ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

2012ರಲ್ಲಿ ಶ್ರೀ ಬೀರೇಶ್ವರ ದೇವಸ್ಥಾನದ ಜಾಗ ಉಳಿಸಿಕೊಳ್ಳಲು ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ ಮಾಡಿಕೊಂಡು ಹೋರಾಟ ಮಾಡಿದ ಸಂದರ್ಭ ಒಳಗೊಂಡಂತೆ ಒಮ್ಮೆಯೂ ಪೂಜಾರ್‌ ವಂಶಸ್ಥರು ಜಾಗ ನಮ್ಮದು ಎಂದು ಹೇಳಿಲ್ಲ. ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ನವರನ್ನೂ ಕೇಳಿಲ್ಲ. ನಾವು ಸಹ ಅವರಿಗೆ ಮನೆ ಬಿಡುವಂತೆಯೂ ಹೇಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೂಜಾರ್‌ ಅಜ್ಜಪ್ಪ ಮಾತನಾಡಿ, ಈಗ ಶ್ರೀ ಬೀರೇಶ್ವರ ದೇವಸ್ಥಾನ ಪೂಜೆ ಮಾಡುತ್ತಿರುವವರು ಹಿಂದಿನಿಂದಲೂ ಪೂಜೆ ಮಾಡಿಕೊಂಡು ಬಂದಿಲ್ಲ. ನಮ್ಮ ಮನೆತನದವರು ದುರ್ಗಾಂಬಿಕಾ ದೇವಸ್ಥಾನದ ಬಳಿ ಇರುವ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದೆವು. ಈಗ ಇರುವಂತೆ ಶ್ರೀ ಬೀರೇಶ್ವರ ದೇವಸ್ಥಾನ ಇರಲಿಲ್ಲ. ಮಣ್ಣಿನ ಗುಡ್ಡೆಯಂತೆ ದೇವಸ್ಥಾನ ಇತ್ತು. ದೂರದಿಂದ ಬಂದು ಪೂಜೆ ಮಾಡುವುದು ಆಗುವುದಿಲ್ಲ. ಹಾಗಾಗಿ ನೀವೇ ಪೂಜೆ ಮಾಡಿಕೊಂಡು ಹೋಗಿ ಎಂದು ಅವಕಾಶ ಮಾಡಿಕೊಡಲಾಗಿದೆಯೇ ಹೊರತು ಅವರು ಹೇಳಿಕೊಂಡಿರುವಂತೆ ನೂರಾರು ವರ್ಷಗಳಿಂದ ಪೂಜೆ ಮಾಡಿಕೊಂಡು ಬಂದಿಲ್ಲ. ಈಗ ಪೂಜೆ ಮಾಡುತ್ತಿರುವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಶ್ರೀ ಬೀರೇಶ್ವರ ದೇವಸ್ಥಾನ ಜಾಗದ ಅಭಿವೃದ್ಧಿ ಟ್ರಸ್ಟ್‌ನ ಬಳ್ಳಾರಿ ಷಣ್ಮುಖಪ್ಪ, ಜೆ.ಕೆ. ಕೊಟ್ರಬಸಪ್ಪ, ಪೈಲ್ವಾನ್‌ ಸಂಗಪ್ಪ, ಗೌಡ್ರ ಚನ್ನಬಸಪ್ಪ, ಬಿ.ಎಚ್. ಪರಶುರಾಮಪ್ಪ, ಎಸ್‌.ಎಸ್‌. ಗಿರೀಶ್‌, ಮಾಜಿ ಮೇಯರ್‌ಗಳಾದ ಎಚ್.ಬಿ. ಗೋಣೆಪ್ಪ, ಎಚ್.ಎನ್‌. ಗುರುನಾಥ್‌, ನಗರಸಭೆ ಮಾಜಿ ಸದಸ್ಯ ಎನ್‌.ಜೆ. ನಿಂಗಪ್ಪ, ಕುಂಬಳೂರು ವಿರುಪಾಕ್ಷಪ್ಪ, ಜಮ್ನಳ್ಳಿ ನಾಗರಾಜ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.