ಸಾಮಾಜಿಕ ಜಾಲತಾಣ ವ್ಯಾಮೋಹ ಬಿಡಲು ವಿದ್ಯಾರ್ಥಿಗಳಿಗೆ ಕರೆ


Team Udayavani, Jul 13, 2019, 5:28 AM IST

Z-NCC-1

ಮಡಿಕೇರಿ: ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೇಲಿನ ಒಲವನ್ನು ಬಿಟ್ಟು ಶೈಕ್ಷಣಿಕ ಗುರಿ ಸಾಧಿಸಲು ಪುಸ್ತಕದ ಕಡೆ ಹೆಚ್ಚಿನ ಗಮನ ಹರಿಸಬೇಕು ಮತ್ತು ಶಿಸ್ತುಬದ್ಧ ಜೀವನ ನಡೆಸಬೇಕೆಂದು ಎನ್‌ಸಿಸಿ ಕಮಾಂಡಿಂಗ್‌ ಆಫೀಸರ್‌ ಕರ್ನಲ್‌ ವಿ.ಎಂ.ನಾಯಕ್‌ ಕರೆ ನೀಡಿದ್ದಾರೆ.

ನಗರದ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಎನ್‌ಸಿಸಿ ಸಹಯೋಗದಲ್ಲಿ ಕಾಲೇಜ್‌ನಲ್ಲಿ ನಡೆದ “”ಎನ್‌ಸಿಸಿ ಸೇರ್ಪಡೆ” ದಿಕ್ಸೂಚಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎನ್‌ಸಿಸಿ ತನ್ನದೇ ಆದ ಮೌಲ್ಯ ಹಾಗೂ ಮಹತ್ವವನ್ನು ಹೊಂದಿದ್ದು, ಇದರಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಇತರರಿಗಿಂತ ಭಿನ್ನವಾಗಿರುತ್ತಾರೆ. ಕೇವಲ ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಶಿಸ್ತನ್ನು ಅಳವಡಿಸಿಕೊಳ್ಳದೆ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದ‌ರು.

ಎನ್‌ಸಿಸಿ ಬೆಳೆದು ಬಂದ ಹಾದಿ ಹಾಗೂ ಅದರ ಕಾರ್ಯವೈಖರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಕರ್ನಲ್‌ ನಾಯಕ್‌, ಎನ್‌ಸಿಸಿ ಯಲ್ಲಿ ವಿಫ‌ುಲ ಅವಕಾಶಗಳಿದ್ದು, ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್‌ನ ಪ್ರಾಂಶುಪಾಲ ಡಾ.ಟಿ.ಡಿ.ತಿಮ್ಮಯ್ಯ ಅವರು ಎನ್‌ಸಿಸಿ ವಿದ್ಯಾರ್ಥಿಗಳು ತಮ್ಮ ಶಿಸ್ತುಬದ್ಧ ಜೀವನ ಶೈಲಿಯ ಮೂಲಕವೇ ಇತರರಿಗೆ ಮಾದರಿಯಾಗಬೇಕೆಂದರು.

ಸಾಮಾಜಿಕ ಕಳಕಳಿ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವ ಎನ್‌ಸಿಸಿ, ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯವನ್ನು ತಿಳಿಸಿಕೊಡುವಲ್ಲಿ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎನ್‌ಸಿಸಿ ಅಧಿಕಾರಿ ಮೇಜರ್‌ ಡಾ.ಬಿ.ರಾಘವ ಮಾತನಾಡಿ, ಎನ್‌ಸಿಸಿ ಗೆ ತನ್ನದೇ ಆದ ಇತಿಹಾಸವಿದ್ದು, ಬಹಳಷ್ಟು ವಿದ್ಯಾರ್ಥಿಗಳು ಇದರಲ್ಲಿ ತೊಡಗಿಸಿಕೊಂಡು ಶಿಸ್ತು ಮತ್ತು ಸಂಯಮವನ್ನು ಬೆಳೆಸಿಕೊಂಡಿದ್ದಾರೆ.

ನಾಯಕತ್ವದ ಗುಣವನ್ನು ನೀಡುವ ಶಕ್ತಿಯನ್ನು ಹೊಂದಿರುವ ಎನ್‌ಸಿಸಿ ಧೈರ್ಯ, ಏಕತೆ ಮತ್ತು ಶಿಸ್ತುಬದ್ಧ ಜೀವನಕ್ಕೆ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.