ಈ ಬಾರಿಯೂ ನಡೆಯದ ಚಾಮರಾಜೇಶ್ವರ ರಥೋತ್ಸವ


Team Udayavani, Jul 13, 2019, 3:00 AM IST

ee-bariyu

ಚಾಮರಾಜನಗರ: ಪ್ರತಿವರ್ಷ ಆಷಾಢ ಮಾಸದ ಪೂರ್ವಾಷಾಢ ನಕ್ಷತ್ರದ ದಿನ ನಗರದ ಐತಿಹಾಸಿಕ ಚಾಮರಾಜೇಶ್ವರ ರಥೋತ್ಸವ ನಡೆಯುತ್ತಿತ್ತು. ಅದರಂತೆ ಗುರುವಾರ (ಜು.26) ದಂದು ಈ ಬಾರಿಯ ರಥೋತ್ಸವ ನಡೆಯಬೇಕಿತ್ತು. ನೂತನ ರಥ ನಿರ್ಮಾಣವಾಗದ ಕಾರಣ ಸತತ ಎರಡನೇ ವರ್ಷ ರಥೋತ್ಸವ ನಡೆಯುತ್ತಿಲ್ಲ. ಇದು ಭಕ್ತಾದಿಗಳಿಗೆ ಹಾಗೂ ನವದಂಪತಿಗೆ ನಿರಾಸೆ ಮೂಡಿಸಿದೆ.

ಹೊಸ ರಥ ನಿರ್ಮಿಸಲು ಮನಸ್ಸು ಮಾಡಿರಲಿಲ್ಲ: 2017ರ ಫೆ.19ರ ನಡುರಾತ್ರಿ ಸಮಯದಲ್ಲಿ ಕಿಡಿಗೇಡಿಯೊಬ್ಬ ನಗರದ ಚಾಮರಾಜೇಶ್ವರ ರಥಕ್ಕೆ ಬೆಂಕಿ ಹಚ್ಚಿ ರಥ ಭಾಗಶಃ ಸುಟ್ಟುಹೋಗಿತ್ತು. ಸುಟ್ಟುಹೋಗುವ ಮುಂಚೆ 180 ವರ್ಷಗಳಷ್ಟು ಹಳೆಯದಾದ ರಥ ಶಿಥಿಲವಾಗಿತ್ತು. ಹೊಸ ರಥ ನಿರ್ಮಾಣ ಮಾಡಬೇಕೆಂದು ಭಕ್ತಾದಿಗಳು ಒತ್ತಾಯಿಸುತ್ತಲೇ ಇದ್ದರು. ಆದರೂ ಜನಪ್ರತಿನಿಧಿಗಳು ಅಧಿಕಾರಿಗಳು ಹೊರ ರಥ ನಿರ್ಮಿಸಲು ಮನಸ್ಸು ಮಾಡಿರಲಿಲ್ಲ.

ನೂತನ ರಥಕ್ಕೆ ಒತ್ತಾಯ: ರಥ ಭಾಗಶಃ ಸುಟ್ಟು ಹೋದ ಬಳಿಕ, ಸುಟ್ಟಿರುವ ರಥವನ್ನು ಬಳಸುವುದು ಅಪಶಕುನ ಎಂದು ಅರ್ಚಕ ವೃಂದ ತಿಳಿಸಿತು. ಮೊದಲೇ ರಥ ಶಿಥಿಲವಾಗಿತ್ತು. ನೂತನ ರಥ ನಿರ್ಮಾಣಕ್ಕೆ ಭಕ್ತಾದಿಗಳು ಒತ್ತಾಯಿಸಿದ್ದರು. ರಥವಿಲ್ಲದ ಕಾರಣ 2017ರ ಆಷಾಢ ರಥ ನಡೆಯಲಿಲ್ಲ. ಆ ಸಂದರ್ಭದಲ್ಲಿ ಮುಂದಿನ ವರ್ಷವಾದರೂ ಹೊಸ ರಥ ನಿರ್ಮಾಣವಾಗಿ ರಥೋತ್ಸವ ನಡೆಯಬಹುದೆಂದು ಜನರು ನಿರೀಕ್ಷಿಸಿದ್ದರು.

ಜನತೆ ನಿರೀಕ್ಷೆ ಹುಸಿ: ಆದರೆ, ಜನತೆಯ ನಿರೀಕ್ಷೆ ಹುಸಿಯಾಗಿದೆ. ಈ ಬಾರಿಯೂ ರಥೋತ್ಸವ ನಡೆಯದಂತಾಗಿದೆ. ನೂತನ ರಥ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅಷ್ಟಾಗಿ ಆಸಕ್ತಿ ವಹಿಸದ್ದೇ ಕಾರಣ ಎಂದು ಭಕ್ತಾದಿಗಳು ದೂರುತ್ತಿದ್ದಾರೆ. ಆದರೆ ದೇವಾಲಯದ ಆಡಳಿತ ನಿರ್ವಹಿಸುವ ಅಧಿಕಾರಿಗಳು ಇನ್ನೊಂದು ಕಾರಣ ನೀಡುತ್ತಿದ್ದಾರೆ.

ಪ್ರಸ್ತುತ ಚಾಮರಾಜೇಶ್ವರ ದೇವಸ್ಥಾನದ ನವೀಕರಣ ಕಾಮಗಾರಿ ನಡೆಯುತ್ತಿದ್ದು, ದೇವಾಲಯಕ್ಕೆ ಸಂಪ್ರೋಕ್ಷಣೆಯಾಗದೇ ರಥೋತ್ಸವ ನಡೆಸುವಂತಿಲ್ಲ. ಸಂಪ್ರೋಕ್ಷಣೆಯಾಗಿದ್ದರೆ ಚಿಕ್ಕರಥವನ್ನು ಬಳಸಿಕೊಂಡಾದರೂ ರಥೋತ್ಸವ ನಡೆಸಬಹುದಿತ್ತು ಎಂಬುದು ಅವರ ಅಭಿಪ್ರಾಯ. ಆದರೆ ಸಂಪ್ರೋಕ್ಷಣೆ ನಡೆಯದಿದ್ದರೂ ದೇವಾಲಯದಲ್ಲಿ ದೈನಿಕ ಪೂಜಾ ವಿಧಿ ವಿಧಾನಗಳು ಅದೇ ಗುಡಿಯೊಳಗೆ ನಡೆಯುತ್ತಲೇ ಇವೆ. ಹಾಗಾಗಿ ರಥೋತ್ಸವ ಮಾಡದಿರಲು ಇದು ಕಾರಣವಲ್ಲ ಎನ್ನುತ್ತಾರೆ ಭಕ್ತಾದಿಗಳು.

ಕಾರಣಾಂತರಗಳಿಂದ ಟೆಂಡರ್‌ ರದ್ದು: ಕಳೆದ ವರ್ಷವೇ ನೂತನ ರಥ ನಿರ್ಮಾಣಕ್ಕೆ 1.20 ಕೋಟಿ ರೂ.ಗಳ ಅನುದಾನವನ್ನು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ನೀಡಿತ್ತು. ಜಿಲ್ಲಾಡಳಿತ ಈ ಅನುದಾನವನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರ ಮಾಡಿತು. ಲೋಕೋಪಯೋಗಿ ಇಲಾಖೆ ನೂತನ ರಥ ನಿರ್ಮಾಣ ಮಾಡಲು ಟೆಂಡರ್‌ ಕರೆದಿತ್ತು. ಆದರೆ ಕಾರಣಾಂತರಗಳಿಂದ ಟೆಂಡರ್‌ ರದ್ದಾಗಿತ್ತು. ಅದಾದ ನಂತರ ಮರುಟೆಂಡರ್‌ ಕರೆದು ನೂತನ ರಥ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆ ಕೆಲಸವಿನ್ನೂ ಆಗಿಲ್ಲ.

ನವ ದಂಪತಿಗಳಿಗೆ, ಭಕ್ತಾದಿಗಳಿಗೆ ನಿರಾಸೆ: ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ ನವ ದಂಪತಿಗಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಆಷಾಢ ಮಾಸದಲ್ಲಿ ರಥೋತ್ಸವ ನಡೆಯುವುದು ವಿರಳಾತಿ ವಿರಳ. ಆದರೆ ಈ ಜಾತ್ರೆ ಆಷಾಢ ಮಾಸದ ಪೂರ್ವಾಷಾಢ ನಕ್ಷತ್ರದಂದೇ ನಡೆಯುತ್ತದೆ. ಹೀಗಾಗಿ, ಮದುವೆಯಾದ ಬಳಿಕ ಆಷಾಢದಲ್ಲಿ ಬೇರ್ಪಟ್ಟ ನವದಂಪತಿಗಳು ಈ ಜಾತ್ರೆಗೆ ಆಗಮಿಸಿ, ರಥಕ್ಕೆ ಹಣ್ಣು ಜವನ ಎಸೆಯುತ್ತಾರೆ. ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸುತ್ತಾರೆ.

ಹಳೆ ಮೈಸೂರು ಭಾಗ ಮಾತ್ರವಲ್ಲದೇ ಪಕ್ಕದ ತಮಿಳುನಾಡಿನಿಂದಲೂ ಈ ಜಾತ್ರೆಗೆ ಭಕ್ತಾದಿಗಳು, ನವದಂಪತಿಗಳು ಭಾಗವಹಿಸುತ್ತಾರೆ. ಆಷಾಢ ಮಾಸದಲ್ಲಿ ತವರಿಗೆ ಬಂದ ಪತ್ನಿಯನ್ನು ಜಾತ್ರೆಯಲ್ಲಿ ಭೇಟಿಯಾಗುವ ಅವಕಾಶ ಪತಿಗೆ ದೊರೆಯುತ್ತದೆ. ಹೀಗಾಗಿ ಜಾತ್ರೆಯಲ್ಲಿ ಈ ಭಾಗದ ನೂತನ ದಂಪತಿಗಳು ಭೇಟಿಯಾಗಿ ಸಂಭ್ರಮಿಸುತ್ತಾರೆ.

ಸತತ 2ನೇ ವರ್ಷವೂ ರಥೋತ್ಸವವಿಲ್ಲ: ಆದರೆ ರಥ ನಿರ್ಮಾಣವಾಗದೇ ರಥೋತ್ಸವ ರದ್ದಾಗಿರುವುದು ನವದಂಪತಿಗಳ ನಿರಾಸೆಗೆ ಕಾರಣವಾಗಿದೆ. ಅಲ್ಲದೇ ಚಾಮರಾಜೇಶ್ವರನ ಭಕ್ತಾದಿಗಳು, ನಗರದ ಜನತೆ ವರ್ಷಕ್ಕೊಮ್ಮೆ ನಡೆಯುತ್ತಿದ್ದ ಸಂಭ್ರಮದ ಜಾತ್ರೆ ಸತತ ಎರಡನೇ ವರ್ಷವೂ ಇಲ್ಲದಿರುವುದರಿಂದ ಬೇಸರಗೊಂಡಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿ ಅಣೆಕಟ್ಟುಗಳು ಭರ್ತಿಯಾಗಿ ಸಮೃದ್ಧಿ ನೆಲೆಸಿರುವುದರಿಂದ ರಥೋತ್ಸವ ನಡೆದಿದ್ದರೆ ಚೆನ್ನಾಗಿರುತ್ತಿತ್ತು ಎಂಬುದು ಜನತೆಯ ಅನಿಸಿಕೆಯಾಗಿದೆ.

ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಪ್ರಗತಿಯಲ್ಲಿದೆ. ದೇವಾಲಯಕ್ಕೆ ಸಂಪ್ರೋಕ್ಷಣೆ ನಡೆಯಬೇಕಾಗಿದೆ. ಹಾಗಾಗಿ ರಥೋತ್ಸವ ನಡೆಯುತ್ತಿಲ್ಲ. ನೂತನ ರಥ ನಿರ್ಮಾಣಕ್ಕೆ ಇನ್ನೊಂದು ವಾರದಲ್ಲಿ ಮತ್ತೆ ಟೆಂಡರ್‌ ಕರೆಯಲಾಗುತ್ತದೆ.
-ಮಂಜೇಶ್‌, ಕಾರ್ಯನಿರ್ವಾಹಕ ಅಧಿಕಾರಿ, ಚಾಮರಾಜೇಶ್ವರ ದೇವಾಲಯ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.