2ನೇ ವರ್ಷದತ್ತ ತ್ಯಾಜ್ಯ ಮುಕ್ತ ಮಾದರಿ ಗ್ರಾಮ ವಂಡ್ಸೆ

ಗೊಬ್ಬರದಿಂದ ತಿಂಗಳಿಗೆ 20 ಸಾವಿರ ರೂ. ಆದಾಯ

Team Udayavani, Jul 13, 2019, 5:39 AM IST

1107KLRE1-A

ವಿಶೇಷ ವರದಿ- ಕೊಲ್ಲೂರು: ಸ್ವಚ್ಛ ಗ್ರಾಮ ಪರಿಕಲ್ಪನೆಯಲ್ಲಿ ವಂಡ್ಸೆ ಗ್ರಾ.ಪಂ. ಸ್ಥಾಪಿಸಿರುವ ಘನ, ದ್ರವ ತ್ಯಾಜ್ಯ ವಿಲೇವಾರಿ ಘಟಕ ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು, ರಾಜ್ಯಕ್ಕೆ ಮಾದರಿಯಾಗಿದೆ.

ತಿಂಗಳಿಗೆ 20 ಸಾ. ರೂ. ಲಾಭ
ಮುಂದಿನ ಸೆಪ್ಟಂಬರ್‌ಗೆ 2 ವರ್ಷ ತುಂಬುತ್ತಿರುವ ಘಟಕದಲ್ಲಿ ಹಸಿ ಹಾಗೂ ಒಣ ಕಸಗಳನ್ನು ಪ್ರತ್ಯೇಕವಾಗಿ ವಿಲೇವಾರಿಗೊಳಿಸಿ, ಅವುಗಳನ್ನು ನಾನಾ ರೀತಿಯಲ್ಲಿ ಬಳಸಲಾಗುತ್ತಿದೆ. ಇದರಿಂದ 20 ಸಾವಿರ ರೂ. ಲಾಭವೂ ಸಾಧ್ಯವಾಗಿದೆ.

ಮಾದರಿ ಕಾರ್ಯ
ಎಸ್‌.ಎಲ್‌.ಆರ್‌.ಎಂ. ಸಂಘ ವಂಡ್ಸೆ ಹೆಸರಿನಲ್ಲಿ ಸಂಘ ನೋಂದಣಿಯಾಗಿ 1 ವರ್ಷ ಪೂರೈಸಿದೆ. ಇದರಲ್ಲಿ ಮೇಲ್ವಿಚಾರಕಿ, ವಾಹನ ಚಾಲಕ, ಕಾರ್ಮಿಕರು ಸಹಿತ 8 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಮಾಸಿಕ ಸಂಬಳ ಸಹಿತ ರೂ. 95000 ಸಾವಿರ ಖರ್ಚು ವೆಚ್ಚವಿದೆ. ಇವೆಲ್ಲವನ್ನೂ ನಿಭಾಯಿಸಿ 2019ರ ಜನವರಿಯಿಂದ ಈವರೆಗೆ ಪ್ರತೀ ತಿಂಗಳು ರೂ. 15000 ದಿಂದ 20000 ದಷ್ಟು ಲಾಭ ಪಡೆದಿದೆ. ಲಾಭಾಂಶವನ್ನು ಸಂಘದ ಬ್ಯಾಂಕ್‌ ಖಾತೆಯಲ್ಲಿ ಠೇವಣಿ ಇಡಲಾಗಿದೆ.

ವ್ಯವಸ್ಥಿತ ಪ್ರಯತ್ನ
ಹರವರಿ, ಕಳಿ, ಅಡಿಕೆಕೊಡ್ಲು, ನೂಜಾಡಿ, ಅಬ್ಬಿ, ಮಾವಿನಕಟ್ಟೆ, ಉದ್ದಿನಬೆಟ್ಟು, ಶಾರ್ಕೆ ಸಹಿತ ಸಮೀಪದ ಚಿತ್ತೂರು ಗ್ರಾಮದ ಮಾರಣಕಟ್ಟೆ, ಕಂಚಿನಕೊಡ್ಲು, ಹಾರ್ಮಣ್ಣು ಗ್ರಾಮಗಳನ್ನು ಆಯ್ಕೆ ಮಾಡಿ ಕಸ ಸಂಗ್ರಹಿಸಲಾಗುತ್ತಿದೆ.

ಪ್ರತಿ ಮನೆಗಳಿಂದ ರೂ. 30 ರೂ., ಸಣ್ಣ ಅಂಗಡಿಗಳಿಗೆ 150 ರೂ., ದೊಡ್ಡ ಅಂಗಡಿಗಳಿಗೆ 200 ರೂ. ರಿಂದ 300 ರೂ. ವರೆಗೆ ತ್ಯಾಜ್ಯ ಸಂಗ್ರಹದ ಶುಲ್ಕ ವಿಧಿಸಲಾಗುತ್ತದೆ. ರೆಸ್ಟೋರೆಂಟ್‌ ಹಾಗೂ ಬಾರ್‌ಗಳಿಗೆ 1 ಸಾವಿರ ರೂ., ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ 500 ರೂ. ವಿಧಿಸಲಾಗುತ್ತದೆ.

ವಂಡ್ಸೆ ಗ್ರಾಮದ 700 ಮನೆ, 150 ಅಂಗಡಿಗಳಿಗೆ 850 ಹಸಿರು ಹಾಗೂ ಕೆಂಪು ಬಕೆಟ್‌ ವ್ಯವಸ್ಥೆಗೊಳಿಸಲಾಗಿದೆ. ಚಿತ್ತೂರು ಗ್ರಾ.ಪಂ ವ್ಯಾಪ್ತಿಯಲ್ಲಿ 262 ಪ್ರತ್ಯೇಕ ಬಕೆಟ್‌ ನೀಡಲಾಗಿದೆ.

ವಿವಿಧ ರಾಜ್ಯಗಳ ತಂಡ ವೀಕ್ಷಣೆ
ಉತ್ತರ ಭಾರತ ಸಹಿತ ದಕ್ಷಿಣ ಭಾರತದ ನಾನಾ ಕಡೆಗಳಿಂದ ವಂಡ್ಸೆ ಎಸ್‌.ಎಲ್‌.ಆರ್‌.ಎಂ. ವೀಕ್ಷಣೆಗೆ ತಂಡಗಳು ಬಂದಿವೆ. ಇಲ್ಲಿನ ಕೆಲಸ ಅವರ ಮುಕ್ತ ಶ್ಲಾಘನೆಗೆ ಪಾತ್ರವಾಗಿದೆ.

ಪ್ಲಸ್‌ ಪಾಯಿಂಟ್‌
ಗ್ರಾಮಸ್ಥರ ಸಂಪೂರ್ಣ ಸಹಕಾರದೊಡನೆ ಸ್ವಚ್ಛ ಗ್ರಾ.ಪಂ ಎಂಬ ಹೆಗ್ಗಳಿಕೆಗೆ ವಂಡ್ಸೆ ಸಾಕ್ಷಿಯಾಗಿದೆ. ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಸಂಘವು ವ್ಯವಸ್ಥಿತವಾಗಿ ನಿರ್ವಹಿಸುತ್ತಿರುವುದು ಪ್ಲಸ್‌ ಪಾಯಿಂಟ್‌.
-ಉದಯ ಕುಮಾರ್‌ ಶೆಟ್ಟಿ,
ಅಧ್ಯಕ್ಷರು, ವಂಡ್ಸೆ ಗ್ರಾ.ಪಂ

ಕ್ರಮಬದ್ಧ ಕಾರ್ಯ
ಕಳೆದ ಜನವರಿಯಿಂದ ಲಾಭದಿಂದ ಸಾಗುತ್ತಿರುವ ಎಸ್‌.ಎಲ್‌.ಆರ್‌.ಎಂ. ಘಟಕವು ಕ್ರಮಬದ್ಧವಾಗಿ ಕಾರ್ಯವನ್ನು ನಡೆಸಿಕೊಂಡು ಹೋಗುತ್ತಿದೆ.
-ವಿಜಯಲಕ್ಷ್ಮೀ, ಮೇಲ್ವಿಚಾರಕಿ,
ಎಸ್‌.ಎಲ್‌.ಆರ್‌.ಎಂ. ಘಟಕ ವಂಡ್ಸೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.