ಕಠಿನ ನಿಯಮ ಹೇರಿಕೆ: ಆಟೋ ಸಂಘಟನೆಗಳಿಂದ ತೀವ್ರ ಪ್ರತಿರೋಧ

ಆಟೋ ರಿಕ್ಷಾ ಚಾಲಕ -ಮಾಲಕರ ಸಂಯುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆಗೆ ನಿರ್ಧಾರ

Team Udayavani, Jul 14, 2019, 5:00 AM IST

f-17

ನಗರ: ಶಾಲಾ ಮಕ್ಕಳನ್ನು ಕರೆದೊಯ್ಯುವ ಮತ್ತು ಬಾಡಿಗೆ ನಡೆಸುವ ರಿಕ್ಷಾಗಳ ಮೇಲೆ ಪೊಲೀಸ್‌ ಇಲಾಖೆ ಕಠಿನ ನಿಯಮಗಳನ್ನು ಹೇರಿ ಉಂಟಾಗಿರುವ ಸಮಸ್ಯೆಗಳ ವಿರುದ್ಧ ಪುತ್ತೂರಿನಲ್ಲಿ ರಿಕ್ಷಾ ಚಾಲಕ-ಮಾಲಕರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ.

ಜು. 17: ಪ್ರತಿಭಟನೆ
ಕಾನೂನು ಪಾಲನೆ, ಕಾನೂನು ರಕ್ಷಣೆ ಹೆಸರಿನಲ್ಲಿ ಪೊಲೀಸರು ಶಾಲಾ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ರಿಕ್ಷಾ ಚಾಲಕರ ಮೇಲೆ ಪ್ರಕರಣ ದಾಖಲಿಸು ವುದನ್ನು ಖಂಡಿಸಿ ಪುತ್ತೂರು ತಾಲೂಕು ಆಟೋ ರಿಕ್ಷಾ ಚಾಲಕ -ಮಾಲಕರ ಸಂಯುಕ್ತ ಹೋರಾಟ ಸಮಿತಿಯು ಜು. 17ರಂದು ಪ್ರತಿಭಟನೆ ನಡೆಸಿ ಬಳಿಕ ಪುತ್ತೂರು ಸಹಾಯಕ ಕಮಿಷನರ್‌ಗೆ ಮನವಿಯನ್ನು ನೀಡಲು ನಿರ್ಧರಿಸಲಾಗಿದೆ.

ಶುಕ್ರವಾರ ನಡೆದ ಸಮಿತಿ ಸಭೆಯಲ್ಲಿ ಎಸ್‌.ಡಿ.ಟಿ.ಯು., ಸ್ನೇಹ ಸಂಗಮ ಹಾಗೂ ಕೆ.ಆರ್‌.ಎಸ್‌. ಆಟೋ ರಿಕ್ಷಾ ಚಾಲಕರ -ಮಾಲಕರ ಸಂಘದ ಸದಸ್ಯರು ಪದಾಧಿಕಾರಿಗಳು ಈ ನಿರ್ಣಯ ಕೈಗೊಂಡರು.

ರಿಕ್ಷಾಗಳ ಮೇಲೆ ಮಾತ್ರ ಹೇರಿಕೆ
ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ್‌ ಕುಲಾಲ್‌ ಮಾತನಾಡಿ, ಸಂಚಾರಿ ನಿಯಮವನ್ನು ಹೆಚ್ಚಾಗಿ ಆಟೋ ರಿಕ್ಷಾಗಳಿಗೆ ಮಾತ್ರ ಹೇರುತ್ತಿದ್ದಾರೆ. ಎಲ್ಲರಿಗೂ ಒಂದೇ ತರಹದ ಕಾನೂನು ಮಾಡಬೇಕು. ಆಟೋ ರಿಕ್ಷಾದವರಿಗೆ ಬೇರೆ ಕಾನೂನು ಹಾಗೂ ಇನ್ನಿತರ ವಾಹನಗಳಿಗೆ ಬೇರೆ ಕಾನೂನು ಮಾಡುವುದನ್ನು ನಾವು ಖಂಡಿಸುತ್ತೇವೆ. ಖಾಸಗಿ ವಾಹನಗಳಲ್ಲಿ ಅತಿ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುವವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಳೆ ನಿಯಮವಿರಲಿ
ಪುತ್ತೂರು ಪೊಲೀಸ್‌ ಠಾಣೆಗೆ ಹೊಸ ದಾಗಿ ಆಗಮಿಸುವ ಠಾಣಾ ಧಿಕಾರಿಗಳು ಸಂಚಾರಿ ನಿಯಮ ಗಳನ್ನು ಹೊಸದಾಗಿ ಏಕಾ ಏಕಿಯಾಗಿ ಜಾರಿಗೊಳಿ ಸುವುದ ರಿಂದ ತೊಂದರೆ ಯಾಗುತ್ತಿದೆ. ಹೊಸ ನಿಯಮಗಳನ್ನು ಕೇವಲ ಆಟೋ ರಿಕ್ಷಾ ದವರಿಗೆ ಮಾತ್ರ ಮಾಡಲಾಗಿದೆ. ಅದನ್ನು ಹಿಂಪಡೆದು ಹಳೆ ನಿಯಮವನ್ನು ಪುನಃ ಜಾರಿಗೊಳಿಸುವಂತೆ ಆಗ್ರಹಿ ಸಲು ಸಮಿತಿಯು ಸಭೆಯಲ್ಲಿ ನಿರ್ಣಯವನ್ನು ಕೈಗೊಂಡಿತು.

ಎಸ್‌ಡಿಟಿಯುನ ಆಟೋ ಚಾಲಕ- ಮಾಲಕ ಸಂಘದ ಅಧ್ಯಕ್ಷ ಬಾತೀಶ್‌ ಬಡಕೋಡಿ, ಕಾರ್ಯದರ್ಶಿ ಆಸೀಫ್‌, ಕೆ.ಆರ್‌.ಎಸ್‌.ನ ಸಂಘದ ಅಧ್ಯಕ್ಷ ನಾಸಿರ್‌ ಇಡಬೆಟ್ಟು, ಸಂಯುಕ್ತ ಹೋರಾಟ ಸಮಿತಿಯ ಕಾರ್ಯದರ್ಶಿ ಇಸ್ಮಾಯಿಲ್‌, ಸ್ನೇಹ ಸಂಗಮದ ಅಧ್ಯಕ್ಷ ಸಿಲ್ವಸ್ಟರ್‌, ಕೋಶಾಧಿಕಾರಿ ಶಮೀರ್‌ ನಾಜೂಕ್‌ ಉಪಸ್ಥಿತರಿದ್ದರು.

ಸ್ನೇಹ ಸಂಗಮದ ಕಾರ್ಯದರ್ಶಿ ಚನಿಯಪ್ಪ ನಾಯ್ಕ ಸ್ವಾಗತಿಸಿ, ವಂದಿಸಿದರು.

ಸಹಾಯಕ ಆಯುಕ್ತರಿಗೆ ಬಿಎಂಎಸ್‌ನಿಂದ ಮನವಿ
ನಗರ ಜು. 12: ರಿಕ್ಷಾ ಚಾಲಕರ ಮೇಲೆ ಬಾಡಿಗೆ ಮಾಡುವಾಗ ಹೊಸ ನಿಯಮಗಳನ್ನು ಜಾರಿ ಮಾಡಿರುವುದನ್ನು ಖಂಡಿಸಿ ಪುತ್ತೂರು ಬಿ.ಎಂ.ಎಸ್‌. ಆಟೋ ರಿಕ್ಷಾ ಚಾಲಕ-ಮಾಲಕರ ಸಂಘವು ಪುತ್ತೂರು ಸಹಾಯಕ ಕಮಿಷನರ್‌ಗೆ ಶುಕ್ರವಾರ ಮನವಿ ನೀಡಿತು.

ಬಿ.ಎಂ.ಎಸ್‌. ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಭಾಸ್ಕರ್‌ ನಾಯ್ಕ ಮಾತನಾಡಿ, ಕಳೆದ ಕೆಲವು ದಿನಗಳಿಂದ ಆಟೋ ರಿಕ್ಷಾದ ಚಾಲಕರ ಮೇಲೆ ವಿವಿಧ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಇದರಿಂದಾಗಿ ಎಲ್ಲರಿಗೂ ತೊಂದರೆಗಳಾಗುತ್ತಿದೆ. ನಾವು ಗ್ರಾಮಾಂತರ ಪ್ರದೇಶಗಳಿಂದ ಜನರನ್ನು ರಿಯಾಯಿತಿ ದರದಲ್ಲಿ ಕರೆದುಕೊಂಡು ಹೋಗುತ್ತಿದ್ದೇವೆ ಹಾಗೂ ಬಡ ಮಕ್ಕಳನ್ನು ರಿಯಾಯಿತಿ ದರದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದೆವು. ಆದರೆ ಇದೀಗ ಪೊಲೀಸರು ಅನಗತ್ಯ ನಿಯಮಗಳನ್ನು ಹೇರಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದರು.

ಶಾಸಕರಿಗೂ ಮನವಿ
ಬಿ.ಎಂ.ಎಸ್‌. ಆಟೋ ರಿಕ್ಷಾ ಚಾಲಕ-ಮಾಲಕರ ಸಂಘವು ಸಹಾಯಕ ಕಮಿಷನರ್‌ ಎಚ್‌.ಕೆ. ಕೃಷ್ಣಮೂರ್ತಿ, ಪುತ್ತೂರು ಶಾಸಕರಿಗೆ, ಪುತ್ತೂರು ಡಿವೈಎಸ್ಪಿ, ಪುತ್ತೂರು ಆರ್‌ಟಿಒಗೆ, ಪುತ್ತೂರು ಎಸ್‌ಐಗೆ ಹಾಗೂ ಸಂಚಾರ ಎಸ್‌ಐಗೆ ಮನವಿಯನ್ನು ನೀಡಿದರು.

ಸಹಾಯಕ ಕಮಿಷನರ್‌ ಎಚ್‌.ಕೆ. ಕೃಷ್ಣಮೂರ್ತಿ ಮಾತನಾಡಿ, ಈ ವಿಷಯವನ್ನು ಮುಂದಿನ ಸಭೆಯಲ್ಲಿ ವಿಚಾರಣೆ ಮಾಡುತ್ತೇನೆ ಎಂದು ಸಂಘಟನೆಯವರಿಗೆ ಭರವಸೆ ನೀಡಿದರು.

ಸಂಘದ ಕಾರ್ಯದರ್ಶಿ ಮಹೇಶ್‌ ಪ್ರಭು, ಕೋಶಾಧಿಕಾರಿ ವಿಕ್ರಮ್‌ ಪರ್ಲಡ್ಕ, ಮಾಜಿ ಅಧ್ಯಕ್ಷ ರಂಜನ್‌, ಗೌರವಾಧ್ಯಕ್ಷ ಬಿ.ಕೆ. ದೇವಪ್ಪ ಗೌಡ ಹಾಗೂ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.