ರೆಸಾರ್ಟ್‌ ಮೊರೆ ಹೋದ ಬಿಜೆಪಿ ಶಾಸಕರು


Team Udayavani, Jul 13, 2019, 3:08 AM IST

bjp-logo

ಬೆಂಗಳೂರು: ಅನಿರೀಕ್ಷಿತವೆಂಬಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಬಹುಮತ ಸಾಬೀತಿಗೆ ಅವಕಾಶ ಕೋರುವ ಬಗ್ಗೆ ಪ್ರಸ್ತಾಪಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿಯು ಕಾರ್ಯತಂತ್ರ ಬದಲಾಯಿಸಿ ತನ್ನ ಶಾಸಕರನ್ನು ರೆಸಾರ್ಟ್‌ನಲ್ಲಿರಿಸಿ ಒಗ್ಗಟ್ಟು ಕಾಯ್ದುಕೊಳ್ಳಲು ಮುಂದಾಗಿದೆ. ಶುಕ್ರವಾರ ಸಂಜೆ ವಿಧಾನಸೌಧದಿಂದ ಎರಡು ಬಸ್‌ಗಳಲ್ಲಿ ಹೊರಟ ಬಿಜೆಪಿ ಶಾಸಕರು ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ “ರಮಡಾ’ ಹೋಟೆಲ್‌ಗೆ ತೆರಳಿದ್ದು, ಸೋಮವಾರ ಬೆಳಗ್ಗೆ ಹೋಟೆಲ್‌ನಿಂದಲೇ ಅಧಿವೇಶನಕ್ಕೆ ಬರಲಿದ್ದಾರೆ.

ಅಧಿವೇಶನ ಆರಂಭಕ್ಕೂ ಮುನ್ನ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸುವ ಚಿಂತನೆ ಬಗ್ಗೆ ಚರ್ಚೆ ನಡೆದಿರಲಿಲ್ಲ. ಆದರೆ ಮುಖ್ಯಮಂತ್ರಿಗಳು ಬಹುಮತ ಸಾಬೀತಿಗೆ ಅವಕಾಶ ಕೋರುವ ಬಗ್ಗೆ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಕಚೇರಿಯಲ್ಲೇ ಹಿರಿಯ ನಾಯಕರೊಂದಿಗೆ ಚರ್ಚಿಸಿ ಶಾಸಕರನ್ನು ರೆಸಾರ್ಟ್‌ನಲ್ಲಿ ಇರಿಸಲು ನಿರ್ಧರಿಸಿದರು ಎಂದು ಮೂಲಗಳು ಹೇಳಿವೆ.

ಸಂಖ್ಯಾಬಲ ಕಳೆದುಕೊಂಡಿದ್ದರೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಬಹುಮತ ಸಾಬೀತಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಎಚ್ಚರ ವಹಿಸಿದೆ. ಹಳೆಯ ಸ್ನೇಹ, ಬಾಂಧವ್ಯ, ರಾಜಕೀಯ ನಂಟು ಇತರೆ ನೆಪದಲ್ಲಿ ಬಿಜೆಪಿ ಶಾಸಕರನ್ನು ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಸಂಪರ್ಕಿಸಿ ಸೆಳೆಯಬಹುದು ಎಂಬ ಭೀತಿಯೂ ಪಕ್ಷದ ನಾಯಕರನ್ನು ಕಾಡುತ್ತಿದೆ. ಅನುಮಾನವಿರುವ ಶಾಸಕರನ್ನಷ್ಟೇ ರೆಸಾರ್ಟ್‌ನಲ್ಲಿ ಇರಿಸಿದರೆ ತಪ್ಪು ಸಂದೇಶ ರವಾನೆಯಾಗಲಿದೆ ಎಂಬ ಕಾರಣಕ್ಕೆ ಎಲ್ಲ ಶಾಸಕರನ್ನೂ ಹೋಟೆಲ್‌ನಲ್ಲಿ ಇರಿಸಲು ಬಿಜೆಪಿ ನಿರ್ಧರಿಸಿತು ಎಂದು ತಿಳಿಸಿವೆ.

ಅದರಂತೆ ಸಂಜೆ 6 ಗಂಟೆ ಹೊತ್ತಿಗೆ ಎರಡು ಬಸ್‌ಗಳಲ್ಲಿ 70ಕ್ಕೂ ಹೆಚ್ಚು ಶಾಸಕರು ರೆಸಾರ್ಟ್‌ನತ್ತ ಹೊರಟರು. ಯಲಹಂಕದಿಂದ ರೆಸಾರ್ಟ್‌ವರೆಗೆ ಶಾಸಕರಿದ್ದ ಬಸ್‌ಗಳಿಗೆ ಪೊಲೀಸರು ಭದ್ರತೆ ಒದಗಿಸಿದರು. ಶನಿವಾರ ಹಾಗೂ ಭಾನುವಾರ ಹೋಟೆಲ್‌ನಲ್ಲೇ ವಾಸ್ತವ್ಯ ಹೂಡಲಿರುವ ಶಾಸಕರು ಸೋಮವಾರ ವಿಧಾನಸೌಧಕ್ಕೆ ಬರಲಿದ್ದಾರೆ.

ಶಾಸಕರು ರೆಸಾರ್ಟ್‌ಗೆ ತೆರಳುವ ಮುನ್ನ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಅತೃಪ್ತ ಶಾಸಕರ ರಾಜೀನಾಮೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ ಸಮಂಜಸವಾದ ತೀರ್ಪು ನೀಡಿದೆ. ಗುರುವಾರ ಸ್ಪೀಕರ್‌ ಭೇಟಿಯಾಗಿ ರಾಜೀನಾಮೆ ಸಲ್ಲಿಸಿ ಹೋದ ಶಾಸಕರಿಗೆ ಇದರಿಂದ ನೈತಿಕ ಶಕ್ತಿ ಬಂದಂತಾಗಿದೆ. ಮುಂಬೈನಲ್ಲಿರುವ ಶಾಸಕರನ್ನು ನಮ್ಮ ಸ್ನೇಹಿತರು ಸಂಪರ್ಕಿಸಿದಾಗ ಸುಪ್ರೀಂ ಕೋರ್ಟ್‌ ಆದೇಶ ಸಮಾಧಾನ ತಂದಿದೆ ಎಂದು ಹೇಳಿದ್ದಾರೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ ಆದೇಶದಿಂದಾಗಿ ಸ್ಪೀಕರ್‌ 10 ಮಂದಿಯನ್ನು ಅನರ್ಹಗೊಳಿಸುವಂತಿಲ್ಲ ಹಾಗೂ ಆ ವಿಚಾರ ಕುರಿತು ಚರ್ಚೆ ನಡೆಸುವಂತಿಲ್ಲ. ವಿಪ್‌ ಜಾರಿ ಮಾಡಿದರೂ ಅದು ಅನ್ವಯವಾಗುವುದಿಲ್ಲ. ರಾಜೀನಾಮೆ ಕುರಿತು ವಿಚಾರಣೆ ಕೂಡ ನಡೆಸುವಂತಿಲ್ಲ. ಸುಪ್ರೀಂ ಕೋರ್ಟ್‌ ಮಂಗಳವಾರ ನೀಡುವ ಆದೇಶವನ್ನು ಕಾದು ನೋಡಲಾಗುವುದು. ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚಿಸುವ ಇಂಗಿತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಂದಿನ ನಡೆಯನ್ನು ನಿರ್ಧರಿಸಲಾಗಿದೆ.

ವಿಶ್ವಾಸ ಮತ ಯಾಚನೆಯನ್ನು ನಾವು ಎದುರಿಸುವ ಪ್ರಶ್ನೆಯೇ ಇಲ್ಲ. ಶಾಸಕರೆಲ್ಲಾ ಒಟ್ಟಿಗೆ ಇರುವುದಾಗಿ ಹೇಳಿದ್ದರಿಂದ ಒಟ್ಟಿಗೆ ಇರಲು ಸೂಚಿಸಿದ್ದೇನೆ. ಅದರಂತೆ ರೆಸಾರ್ಟ್‌ಗೆ ಹೋಗುತ್ತಿದ್ದಾರೆ ಎಂದು ತಿಳಿಸಿದರು. ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಮುಖ್ಯಮಂತ್ರಿಗಳು ಅಗತ್ಯಬಿದ್ದರೆ ಬಹುಮತ ಸಾಬೀತುಪಡಿಸಲು ಅವಕಾಶ ಕೋರುವುದಾಗಿ ಹೇಳಿರುವುದು ಸರಿಯಲ್ಲ. ಅವರಿಗೆ ಧೈರ್ಯವಿದ್ದರೆ ಇಂದೇ ಬಹುಮತ ಸಾಬೀತಿಗೆ ಅವಕಾಶ ಮಾಡಿಕೊಡಿ ಎಂದು ಕೇಳಬೇಕಿತ್ತು.

ಸರ್ಕಾರಕ್ಕೆ ಬಹುಮತವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಅವರಿಗೊಂದು ಸವಾಲು ಹಾಕುತ್ತೇನೆ. ಅವರ ಶಾಸಕರನ್ನು ಕರೆದು ಒಂದು ಸಭೆ ಮಾಡಲಿ. ಆ ಮೇಲೆ ಅವರು ಬಹುಮತದ ಬಗ್ಗೆ ಯೋಚಿಸಲಿ. ಸರ್ಕಾರಕ್ಕೆ ಬಹುಮತ ಇಲ್ಲದಿರುವ ಬಗ್ಗೆ ಸೋಮವಾರ ಸದನದಲ್ಲಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ನ ಶುಕ್ರವಾರದ ಆದೇಶದಿಂದ ಮೈತ್ರಿ ಸರ್ಕಾರ ನಿರಾಳವಾಗಿದೆ ಎನ್ನಲಾಗುತ್ತಿದೆ. ಸುಪ್ರೀಂ ಕೋರ್ಟ್‌ಗೆ ಯಾರು ಬೇಕಾದರೂ ಹೋಗಬಹುದು. ಹಾಗಿದ್ದರೂ ಸ್ಪೀಕರ್‌ ರಾಜೀನಾಮೆ ನೀಡಿದ ಶಾಸಕರನ್ನು ಸುಪ್ರೀಂ ಕೋರ್ಟ್‌ಗೆ ಯಾಕೆ ಹೋಗಿದ್ದೀರಿ ಎಂದು ಕೇಳಿದ್ದಾರಂತೆ. ಇದು ಒಂದು ರೀತಿಯಲ್ಲಿ ಧಮ್ಕಿ ಹಾಕಿದ್ದಾರೆ ಎನಿಸುತ್ತದೆ ಎಂದು ತಿಳಿಸಿದರು.

ಬಿಜೆಪಿ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ!: ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚನೆಗೆ ಮುಂದಾದರೆ ನಾವೂ ಸಿದ್ಧರಿದ್ದೇವೆ. ಕಳೆದ ಒಂದು ತಿಂಗಳಿನಿಂದ ಮೈತ್ರಿ ಪಕ್ಷಗಳ ಕೆಲವರು ನಮ್ಮ ಶಾಸಕರನ್ನು ಸಂಪರ್ಕ ಮಾಡುತ್ತಿದ್ದಾರೆ. ವಿಶ್ವಾಸ ಮತ ಯಾಚನೆ ವೇಳೆಗೆ ನಮ್ಮ ಎಲ್ಲ ಶಾಸಕರು ಸರಿಯಾದ ಸಮಯಕ್ಕೆ ಹಾಜರಿರಬೇಕು. ಸಮಯ ಪಾಲನೆಗಾಗಿ ಒಟ್ಟಿಗೆ ಇರಲು ರೆಸಾರ್ಟ್‌ಗೆ ಹೋಗುತ್ತಿದ್ದೇವೆ. ಪಕ್ಷೇತರ ಶಾಸಕರ ಬೆಂಬಲವೂ ನಮಗಿದೆ. ನಾನು ಮುಂಬೈಗೆ ಹೋಗಿದ್ದು ಪಕ್ಷೇತರರ ಭೇಟಿಗೆ ಹೊರತು ಬೇರೆ ಯಾರನ್ನೂ ಭೇಟಿಯಾಗಲು ಹೋಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿದರು.

ದಿಢೀರ್‌ ನಿರ್ಧಾರ: ಪಕ್ಷದ ಶಾಸಕರನ್ನು ರೆಸಾರ್ಟ್‌ನಲ್ಲಿರಿಸುವ ಉದ್ದೇಶವಿರಲಿಲ್ಲ. ಮುಖ್ಯಮಂತ್ರಿಗಳ ಅನಿರೀಕ್ಷಿತ ನಡೆಯಿಂದಾಗಿ ಪಕ್ಷದ ಶಾಸಕರನ್ನೆಲ್ಲಾ ಒಟ್ಟಿಗೆ ಇರಿಸಿ ಒಗ್ಗಟ್ಟು ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ. 75ಕ್ಕೂ ಹೆಚ್ಚು ಶಾಸಕರು ಬಸ್‌ನಲ್ಲಿ ಬಂದಿದ್ದಾರೆ. ಹಿರಿಯ ನಾಯಕರನ್ನು ಹೊರತುಪಡಿಸಿ ಉಳಿದ ಶಾಸಕರು ರೆಸಾರ್ಟ್‌ನಲ್ಲಿ ಇರಲಿದ್ದಾರೆ ಎಂದು ರಾಜ್ಯ ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.