ರೈಲ್ವೆ ನಿಲ್ದಾಣಕ್ಕೆ 2ನೇ ಪ್ರವೇಶ ದ್ವಾರ

•ಶೇ.70 ಕಾಮಗಾರಿ ಪೂರ್ಣ•ದಟ್ಟಣೆ ತಗ್ಗಿಸಲು ಯೋಜನೆ•ಸೆಪ್ಟೆಂಬರ್‌ ಅಂತ್ಯಕ್ಕೆ ಸೇವೆಗೆ ಲಭ್ಯ

Team Udayavani, Jul 13, 2019, 9:23 AM IST

hubali-tdy-3

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರ ಬಳಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ಹಾಗೂ ಕೇಶ್ವಾಪುರ ಮತ್ತು ಗದಗ ರಸ್ತೆಯ ಭಾಗದ ಪ್ರಯಾಣಿಕರು ರೈಲ್ವೆ ನಿಲ್ದಾಣಕ್ಕೆ ಹೋಗಿಬರಲು ಅನುಕೂಲವಾಗಲು ಗದಗ ರಸ್ತೆಯ ನೈಋತ್ಯ ರೈಲ್ವೆ ಕೇಂದ್ರೀಯ ರೈಲ್ವೆ ಆಸ್ಪತ್ರೆ ಎದುರು ಎರಡನೇ ಪ್ರವೇಶ ದ್ವಾರ ನಿರ್ಮಿಸಲಾಗುತ್ತಿದ್ದು, ಸೆಪ್ಟೆಂಬರ್‌ದಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ.

ಕೇಶ್ವಾಪುರ ಪ್ರದೇಶ ಮತ್ತು ಗದಗ ರಸ್ತೆ ಭಾಗದ ಪ್ರಯಾಣಿಕರು ರೈಲ್ವೆ ನಿಲ್ದಾಣಕ್ಕೆ ನೇರವಾಗಿ ತೆರಳಲು ಸುಮಾರು 3.35 ಕೋಟಿ ರೂ. ವೆಚ್ಚದಲ್ಲಿ ಅಂದಾಜು 200 ಮೀಟರ್‌ ಉದ್ದದ ಪಾದಚಾರಿ ಮೇಲ್ಸೇತುವೆ ಮಾರ್ಗ ನಿರ್ಮಿಸಲಾಗುತ್ತಿದೆ. ಈ ಕಾಮಗಾರಿಯನ್ನು ಹುಬ್ಬಳ್ಳಿಯ ದುರ್ಗಾ ವೆಲ್ಡಿಂಗ್‌ ವರ್ಕ್ಸ್ ಕಂಪನಿ ಗುತ್ತಿಗೆ ಪಡೆದಿದೆ. ಈ ಪಾದಚಾರಿ ಮೇಲ್ಸೇತುವೆ ಮಾರ್ಗ ರೈಲ್ವೆ ನಿಲ್ದಾಣದ 5ನೇ ಪ್ಲಾಟ್ಫಾರ್ಮ್ಗೆ ನೇರವಾಗಿ ಸಂಪರ್ಕ ಕಲ್ಪಿಸುತ್ತದೆ.

ದಟ್ಟಣೆ ತಗ್ಗಿಸಲು ಕ್ರಮ: ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವೇಶದ್ವಾರ ಬಳಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿದೆ. ಅಲ್ಲದೆ ಕೇಶ್ವಾಪುರ ಮತ್ತು ಗದಗ ರಸ್ತೆಯ ಪ್ರದೇಶದ ಜನರು ಈಗಿರುವ ಪ್ರವೇಶ ದ್ವಾರಕ್ಕೆ ಬರಲು ಸುಮಾರು ಅರ್ಧ ಕಿಮೀ ಸುತ್ತುವರಿದುಕೊಂಡು ನಿಲ್ದಾಣಕ್ಕೆ ಬರಬೇಕಾಗಿದೆ. ಈ ವೇಳೆ ಸಂಚಾರ ದಟ್ಟಣೆ ಹಾಗೂ ಪ್ರಯಾಣಿಕರ ದಟ್ಟಣೆಯಿಂದಾಗಿ ಹಲವು ಬಾರಿ ಪ್ರಯಾಣಿಕರು ರೈಲು ತಪ್ಪಿಸಿಕೊಂಡು ಪ್ರಯಾಣ ಮೊಟಕುಗೊಳಿಸಿದ ಇಲ್ಲವೆ ಬಸ್‌ ಮೂಲಕ ಪ್ರಯಾಣಿಸಿದ್ದು ಉಂಟು.

ಗದಗ ರಸ್ತೆ ಹಾಗೂ ಕೇಶ್ವಾಪುರ ಭಾಗದ ಜನರು ಗದಗ ರಸ್ತೆಯ ಕಡೆ ಪ್ರವೇಶದ್ವಾರ ನಿರ್ಮಿಸಿ ಸಂಚಾರ ದಟ್ಟಣೆ ತಾಪತ್ರಯ ತಪ್ಪಿಸಬೇಕೆಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರು, ಹುಬ್ಬಳ್ಳಿ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಹಾಗೂ ಧಾರವಾಡ ಸಂಸದರಿಗೆ ಹಲವು ಬಾರಿ ಮನವಿ ಕೂಡ ಮಾಡಿದ್ದರು. ಈಗ ಗದಗ ರಸ್ತೆಯ ರೈಲ್ವೆ ಇಲಾಖೆಯ ಕೇಂದ್ರೀಯ ಆಸ್ಪತ್ರೆ ಎದುರು ಎರಡನೇ ಪ್ರವೇಶ ದ್ವಾರ ನಿರ್ಮಾಣವಾಗುತ್ತಿದೆ.

ಪಾರ್ಕಿಂಗ್‌-ವಿಶ್ರಾಂತಿ ಸೌಲಭ್ಯ: ನೂತನವಾಗಿ ನಿರ್ಮಾಣವಾಗುತ್ತಿರುವ 2ನೇ ಪ್ರವೇಶ ದ್ವಾರ ಬಳಿಯೇ ಅಂದಾಜು 100 ಚದುರಡಿಯ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇಲ್ಲಿ ಟಿಕೆಟ್ ಕೌಂಟರ್‌, ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ವಿಶ್ರಾಂತಿ ಕೊಠಡಿ ಆರಂಭಿಸಲಾಗುತ್ತದೆ. ಪ್ರಯಾಣಿಕರು ಇಲ್ಲಿಂದಲೇ ತಾವು ಪ್ರಯಾಣಿಸಲಿರುವ ಸ್ಥಳಕ್ಕೆ ಟಿಕೆಟ್ ಪಡೆದುಕೊಳ್ಳಬಹುದು. ಎರಡನೇ ಪ್ರವೇಶ ದ್ವಾರದಲ್ಲಿ ವಾಹನಗಳು ಆಗಮಿಸಲು ಮತ್ತು ತೆರಳಲು ಪ್ರತ್ಯೇಕವಾಗಿ ದ್ವಾರ ನಿರ್ಮಿಸಲಾಗಿದೆ. ಪ್ರವೇಶ ದ್ವಾರದ ಎರಡು ಬದಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು ನಿಲ್ಲಲು ಸ್ಥಳಾವಕಾಶ ಕಲ್ಪಿಸಲಾಗಿದೆ.

 

•ಶಿವಶಂಕರ ಕಂಠಿ

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.