ಶವ ಸಂಸ್ಕಾರಕ್ಕೆ ಜಾಗ ಒದಗಿಸಿ
Team Udayavani, Jul 13, 2019, 10:43 AM IST
ಗದಗ: ಹಾತಲಗೇರಿಯಲ್ಲಿ ಸ್ಮಶಾನ ಕೊರತೆಯಿಂದಾಗಿ ಗ್ರಾಪಂ ಕಚೇರಿ ಎದುರು ಶವ ಸಂಸ್ಕಾರಕ್ಕೆ ಮುಂದಾಗುವ ಮೂಲಕ ಗ್ರಾಮಸ್ಥರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಗದಗ: ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಮೃತರ ಕುಟಂಬಸ್ಥರು ತಾಲೂಕಿನ ಹಾತಲಗೇರಿ ಗ್ರಾಪಂ ಕಚೇರಿ ಎದುರು ಶವ ಸಂಸ್ಕಾರಕ್ಕೆ ಮುಂದಾಗುವ ಮೂಲಕ ಶುಕ್ರವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಗ್ರಾಮದ ಅಂಬೇಡ್ಕರ್ ನಗರದ ನಿವಾಸಿ ಚಂದ್ರಪ್ಪ ಡಾವಣೆಗೆರೆ (65) ಎಂಬುವವರು ಗುರುವಾರ ರಾತ್ರಿ ನಿಧನರಾಗಿದ್ದರು. ಆದರೆ, ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು ಇಲ್ಲದ ಕಾರಣ ಆಕ್ರೋಶಗೊಂಡ ಮೃತರ ಸಂಬಂಧಿಕರು ಗ್ರಾ.ಪಂ ಎದುರು ಶವ ಸಂಸ್ಕಾರಕ್ಕೆ ಮುಂದಾದರು. ಶವ ಸಂಸ್ಕಾರಕ್ಕಾಗಿ ಕಟ್ಟಿಗೆಗಳನ್ನು ಜೋಡಿಸಿದ್ದರಿಂದ ಗ್ರಾ.ಪಂ ಸಿಬ್ಬಂದಿ ಹಾಗೂ ಮೃತರ ಸಂಬಂಧಿಕರು ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಗ್ರಾ.ಪಂ ಕಚೇರಿ ಎದುರು ಅಂತ್ಯಕ್ರಿಯೆ ನೆರವೇರಿಸಲು ಅಡ್ಡಿಪಡಿಸುವುದಾದರೆ, ರುದ್ರಭೂಮಿ ತೋರಿಸುವಂತೆ ಸಾರ್ವಜನಿಕರು ಪಟ್ಟು ಹಿಡಿದರು. ಇದರಿಂದಾಗಿ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ಮುಂದುವರಿಯಿತು.
ತಹಶೀಲ್ದಾರ್ಗೆ ಗ್ರಾಮಸ್ಥರ ತರಾಟೆ: ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಕಳೆದ ಎರಡು ತಲೆ ಮಾರುಗಳಿಂದ ಗ್ರಾಮದ ದೇವಪ್ಪ ಮುರ್ಲಾಪುರ ಎಂಬುವವರ ಕುಟುಂಬಸ್ಥರು ತಮ್ಮ 3 ಎಕರೆ ಜಮೀನಿನ ಒಂದಿಷ್ಟು ಭಾಗವನ್ನು ಶವಗಳ ದಹನಕ್ಕೆಂದು ಬಿಟ್ಟುಕೊಟ್ಟಿದ್ದರು. ಇತ್ತೀಚೆಗೆ ಕುಟುಂಬಸ್ಥರು ಪಾಲು ಆಗಿದ್ದರಿಂದ ತಮಗೆ ಜಮೀನು ಸಾಲುತ್ತಿಲ್ಲವೆನ್ನುತ್ತಿದ್ದಾರೆ. ಶವ ಸಂಸ್ಕಾರಕ್ಕೆ ಅವಕಾಶ ನೀಡುತ್ತಿಲ್ಲ. ಇತ್ತ ಗ್ರಾಮದಲ್ಲಿ ರುದ್ರಭೂಮಿಯೂ ಇದೇ, ಮೃತರ ಅಂತ್ಯಕ್ರಿಯೆ ನೆರವೇರಿಸಲು ಪರದಾಡುವಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಗ್ರಾಪಂ ಎದುರೇ ಶವ ದಹಿಸುವುದಾಗಿ ಪಟ್ಟು ಹಿಡಿದರು.
ಈ ವೇಳೆ ಮೃತರ ಸಂಬಂಧಿಕರನ್ನು ಸಮಾಧಾನ ಪಡಿಸಿದ ತಹಶೀಲ್ದಾರ್ ಗ್ರಾಮಸ್ಥರ ಅನುಕೂಲಕ್ಕಾಗಿ ಶವ ಸಂಸ್ಕಾರಕ್ಕೆ ಜಮೀನು ಬಿಟ್ಟುಕೊಟ್ಟಿದ್ದ ಹರ್ಲಾಪುರ ಕುಟುಂಬದವರ ಜಮೀನು ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಅವರು ದುಬಾರಿ ಬೆಲೆ ಕಟ್ಟಿದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲ. ಇದೀಗ ಮತ್ತೂಂದು ಜಮೀನು ಗುರುತಿಸಲಾಗಿದ್ದು, ಸದ್ಯದಲ್ಲೇ ಅಂತಿಮಗೊಳ್ಳಲಿದೆ. ಮೂರು ತಿಂಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯಲಿದ್ದು, ಅಲ್ಲಿವರೆಗೆ ಸಹಕರಿಸುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ, ಸಮೀಪದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯುವಂತೆ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆ ಪರಿಹರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?