ಒಳಚರಂಡಿ ಕಾಮಗಾರಿ ಕಳಪೆ-ಆಕ್ರೋಶ

•ಬೇಸಿಗೆಯಲ್ಲಿ ಧೂಳಿನ ಕಾಟ, ಮಳೆಗಾಲದಲ್ಲಿ ರಸ್ತೆಯೇ ಹಾಳು•ತೇಪೆ ಹಚ್ಚುವ ಕಾರ್ಯ ಶುರು

Team Udayavani, Jul 13, 2019, 11:42 AM IST

uk-tdy-1..

ಕುಮಟಾ: ಬಗ್ಗೋಣದಲ್ಲಿ ಕುಸಿದ ಒಳಚರಂಡಿ ಕಾಲುವೆಗೆ ಕಲ್ಲುಮಣ್ಣು ಮುಚ್ಚಲಾಯಿತು. ಒಳಚರಂಡಿ ಚೇಂಬರ್‌ಗಳಲ್ಲಿ ಉಕ್ಕುತ್ತಿರುವ ನೀರು.

ಕುಮಟಾ: ತಾಲೂಕಿನ ಬಗ್ಗೋಣದಲ್ಲಿ ಈ ಹಿಂದೆ ನಿರ್ಮಿಸಿದ ಒಳಚರಂಡಿ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು, ಇದರಿಂದ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ. ಅಷ್ಟಲ್ಲದೇ, ಒಳಚರಂಡಿ ಸಮಸ್ಯೆಯಿಂದ ಸಾರಿಗೆ ಬಸ್‌ ಕೂಡಾ ಬರುವುದು ನಿಂತಿದೆ. ಆದರೆ ಸಬಂಧಪಟ್ಟ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಅಕ್ಕಿ ಮಿಲ್ಗೆ ಗುರುವಾರ ಸಾಯಂಕಾಲ ಬಂದಿದ್ದ ಲಾರಿಯೊಂದು ಒಳಚರಂಡಿ ಕಾಲುವೆಯಲ್ಲಿ ಸಿಲುಕಿಕೊಂಡಿತ್ತು. ಇದನ್ನು ಮೇಲೆಬ್ಬಿಸಲು ಬಂದ ಟೋವಿಂಗ್‌ ಕ್ರೇನ್‌ ಕೂಡಾ ಸಿಲುಕಿಕೊಂಡಿತ್ತು. ಇದರಿಂದ ಜನವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ರಾತ್ರಿ ಕಷ್ಟಪಟ್ಟು ಕಾಲುವೆಯಲ್ಲಿ ಸಿಲುಕಿಕೊಂಡ ವಾಹನಗಳನ್ನು ಎತ್ತಲಾಯಿತಾದರೂ ಶುಕ್ರವಾರ ಬೆಳಗ್ಗೆ ಮತ್ತದೇ ಸ್ಥಳದಲ್ಲಿ ತಂಪುಪಾನೀಯದ ವಾಹನ ಹುಗಿದುಹೋಗಿ ಜನ ಪರದಾಡುವಂತಾಗಿದೆ.

ಒಳಚರಂಡಿ ಕಾಮಗಾರಿ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಯೋಜನೆ ನಮಗೆ ಬೇಕಾಗಿಯೇ ಇರಲಿಲ್ಲ. ಕಾಮಗಾರಿ ಅತ್ಯಂತ ಕಳಪೆಯಾಗಿದ್ದು, ಚೇಂಬರ್‌ಗಳಲ್ಲಿ ಈಗ ನೀರು ಉಕ್ಕುತ್ತಿದೆ. ಮುಂದೆ ಚರಂಡಿಯಲ್ಲಿನ ಹೊಲಸು ಉಕ್ಕಲಿದೆ. ಬೇಸಿಗೆಯಲ್ಲಿ ಧೂಳಿನ ಕಾಟ, ಮಳೆಗಾಲದಲ್ಲಿ ರಸ್ತೆಯೇ ಹಾಳು. ಕುಮಟಾ ಪಟ್ಟಣದ ಭಾಗದಲ್ಲಿ ಒಳಚರಂಡಿ ಕೆಲಸ ಮಾಡುವಾಗ ಧೂಳು ಬಾರದಂತೆ ದಿನಕ್ಕೆ 5-6 ಬಾರಿ ನೀರು ಹೊಡೆದಿದ್ದರು. ಆದರೆ ಬಗ್ಗೋಣದಲ್ಲಿ ಒಮ್ಮೆಯೂ ಧೂಳಿಗಾಗಿ ನೀರು ಹಾಕಿಲ್ಲ. ಕಾಂಕ್ರೀಟ್ ಕೆಲಸಕ್ಕೂ ಕ್ಯೂರಿಂಗ್‌ ಮಾಡಿಲ್ಲ. ನಮಗೆ ಇಂಥ ಕೆಟ್ಟ ಕಳಪೆ ಒಳಚರಂಡಿ ಯೋಜನೆ ಬೇಡವೇ ಬೇಡ ಎಂದು ಸ್ಥಳೀಯರಾದ ನಾಗೇಶ ನಾಯ್ಕ, ಮೋಹನ ನಾಯ್ಕ, ಜಗದೀಶ ನಾಯ್ಕ, ಗಣಪತಿ ಮುಕ್ರಿ, ರಾಮಾ ಮುಕ್ರಿ, ಸುಬ್ರಾಯ ಮುಕ್ರಿ, ನಾರಾಯಣ ನಾಯ್ಕ, ಕೃಷ್ಣ ಗೌಡ, ಮಾರುತಿ ನಾಯ್ಕ, ಈಶ್ವರ ನಾಯ್ಕ, ದತ್ತಾತ್ರಯ ನಾಯ್ಕ, ಸುರೇಶ ಸೇರಿದಂತೆ ಇನ್ನಿತರರು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂತಹ ಅವೈಜ್ಞಾನಿಕ ಒಳಚರಂಡಿ ಕಾಲುವೆ ಅವಾಂತರಕ್ಕೆ ಬಗ್ಗೋಣದಿಂದ ಊರಕೇರಿವರೆಗಿನ ಜನ ಬೆಲೆ ತೆರುವಂತಾಗಿದೆ. ಒಂದಿಲ್ಲೊಂದು ಕಡೆ ಕುಸಿಯುತ್ತಿರುವ ಒಳಚರಂಡಿ ಕಾಲುವೆಯಲ್ಲಿ ದೊಡ್ಡ ವಾಹನಗಳು ಮಾತ್ರವಲ್ಲದೇ ದ್ವಿಚಕ್ರ ವಾಹನಿಗರೂ ಕೂಡಾ ಬಿದ್ದು ಪೆಟ್ಟು ಮಾಡಿಕೊಳ್ಳುವುದು ದಿನನಿತ್ಯದ ದೃಶ್ಯವಾಗಿದೆ. ಮಳೆಗಾಲ ಮುಗಿಯುವವರೆಗೂ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂಬುದು ಸ್ಥಳೀಯರ ಅಳಲು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.