ಬಿತ್ತನೆ ಶೇಂಗಾ ಪಡೆಯಲು ಪರದಾಟ

ಟೋಕನ್‌ ವಿತರಿಸಿ 20ದಿನವಾದರೂ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡ್ತಿಲ್ಲ

Team Udayavani, Jul 13, 2019, 12:02 PM IST

13-July-16

ನಾಯಕನಹಟ್ಟಿ: ಕೃಷಿ ಇಲಾಖೆ ವಿತರಿಸುವ ಬಿತ್ತನೆ ಶೇಂಗಾ ಬೀ ಪಡೆಯಲು ಇಲ್ಲಿನ ರೈತ ಸಂಪರ್ಕ ಕೇಂದ್ರದ ಎದುರು ಜಮಾಯಿಸಿದ್ದ ರೈತರು.

ನಾಯಕನಹಟ್ಟಿ: ಶೇಂಗಾ ಬಿತ್ತನೆ ಬೀಜ ಪಡೆಯಲು ರೈತರು ರಾತ್ರಿಯಿಡೀ ನಿದ್ದೆಗೆಟ್ಟು ಸರತಿ ಸಾಲಿನಲ್ಲಿ ನಿಂತು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕೃಷಿ ಇಲಾಖೆ ಒಂದು ತಿಂಗಳು ವಿಳಂಬವಾಗಿ ಬಿತ್ತನೆ ಬೀಜ ಮಾರಾಟ ಆರಂಭಿಸಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿನ ಪ್ರದೇಶದಲ್ಲಿ ಒಂದು ವಾರದಿಂದ ಸಣ್ಣ ಪ್ರಮಾಣದ ಮಳೆ ಆರಂಭವಾಗಿದೆ. ಹೀಗಾಗಿ ರೈತರು ಬಿತ್ತನೆ ಬೀಜ ಪಡೆಯುವ ಧಾವಂತದಲ್ಲಿದ್ದಾರೆ. ಬಿತ್ತನೆ ಶೇಂಗಾ ಕಾಯಿ ಪಡೆದ ನಂತರ ಸಿಪ್ಪೆಯಿಂದ ಬೀಜಗಳನ್ನು ಬೇರ್ಪಡಿಸಲು ಸಾಕಷ್ಟು ಸಮಯ ಬೇಕು. ಆದರೆ ಇಲಾಖೆ ತಡವಾಗಿ ಬಿತ್ತನೆ ಬೀಜ ವಿತರಿಸುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ.

20 ದಿನಗಳ ಹಿಂದೆ ಕೃಷಿ ಇಲಾಖೆ ದಾಖಲೆ ಪರಿಶೀಲಿಸಿ ಟೋಕನ್‌ ನೀಡಿದ್ದರೂ ಇಲ್ಲಿಯವರೆಗೂ ಬಿತ್ತನೆ ಬೀಜವನ್ನು ವಿತರಿಸಿಲ್ಲ. ಕಳೆದ 15 ದಿನಗಳಿಂದ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಅಲೆಯಬೇಕಾದ ಪರಿಸ್ಥಿತಿ ಉಂಟಾಗಿದೆ. ಕಳೆದ ವರ್ಷ ನಾಯಕನಹಟ್ಟಿ ಹೋಬಳಿಯ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬಿತ್ತನೆಯಾಗಿತ್ತು. ಹೀಗಾಗಿ ಸುಮಾರು 14 ಸಾವಿರ ರೈತರಿಗೆ ಶೇಂಗಾ ವಿತರಣೆಯಾಗಬೇಕಿದೆ.

ಪ್ರತಿ ನಿತ್ಯ 150 ರಿಂದ 200 ಜನರಿಗೆ ಮಾತ್ರ ಬಿತ್ತನೆ ಶೇಂಗಾ ಬೀಜ ವಿತರಣೆ ಮಾಡಲಾಗುತ್ತಿದೆ. ಇದೇ ಆಮೆ ವೇಗದಲ್ಲಿ ವಿತರಿಸಿದರೆ ಒಂಭತ್ತು ಗ್ರಾಪಂ ವ್ಯಾಪ್ತಿಯ ಎಲ್ಲ ರೈತರು ಬಿತ್ತನೆ ಬೀಜ ಪಡೆಯಲು ಕನಿಷ್ಠ ಒಂದು ತಿಂಗಳಾದರೂ ಬೇಕು. ಇದೀಗ ರೈತ ಸಂಪರ್ಕ ಕೇಂದ್ರಗಳಿರುವ ತಳಕು, ನಾಯಕನಹಟ್ಟಿ, ಚಳ್ಳಕೆರೆ, ಕಸಬಾ ಹಾಗೂ ಪರಶುರಾಂಪುರ ಹೋಬಳಿ ಕೇಂದ್ರಗಳಲ್ಲಿ ಮಾತ್ರ ಬಿತ್ತನೆ ಶೇಂಗಾ ವಿತರಣೆ ಮಾಡಲಾಗುತ್ತಿದೆ. ಬಿತ್ತನೆ ಬೀಜ ವಿತರಣೆಯನ್ನು ಆನ್‌ಲೈನ್‌ನಲ್ಲಿ ಮಾಡಲಾಗುತ್ತಿದೆ. ಅದಕ್ಕೆ ಪ್ರೂಟ್ಸ್‌ ತಂತ್ರಾಂಶದಲ್ಲಿ ರೈತರು ಹೆಸರನ್ನು ನೊಂದಾಯಿಸಿರಬೇಕು. ದಾಖಲೆಗಳನ್ನು ಪರಿಶೀಲನೆ ಮಾಡಿ ಬಿತ್ತನೆ ಬೀಜವನ್ನು ರಿಯಾಯತಿ ದರದಲ್ಲಿ ವಿತರಿಸಬೇಕು. ಒಂದೊಂದು ಗ್ರಾಪಂ ವ್ಯಾಪ್ತಿಯ ರೈತರಿಗೆ ಒಂದೊಂದು ದಿನ ವಿತರಿಸುವ ವ್ಯವಸ್ಥೆ ಮಾಡಿದರೆ ಸಮಸ್ಯೆಗೆ ಸ್ಪಲ್ಪ ಪರಿಹಾರ ದೊರೆಯಬಹುದು.

ಡೋಂಟ್ವರಿ, ಬಿತ್ತನೆ ಶೇಂಗಾ ಬೀಜದ ದಾಸ್ತಾನಿದೆ
ಇದೀಗ ಶೇಂಗಾ ಬಿತ್ತನೆ ಆರಂಭವಾಗಿದೆ. ಬಿತ್ತನೆ ಶೇಂಗಾದ ಸಾಕಷ್ಟು ದಾಸ್ತಾನು ಇದೆ. ಹೀಗಾಗಿ ರೈತರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಮಾರುಕಟ್ಟೆಯಲ್ಲಿ ಬಿತ್ತನೆ ಶೇಂಗಾ ಬೆಲೆ ಹೆಚ್ಚಾಗಿರುವುದರಿಂದ ಕೃಷಿ ಇಲಾಖೆಯಿಂದ ವಿತರಿಸುವ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ. ರೈತರ ಸಂಖ್ಯೆ ಜಾಸ್ತಿ ಇರುವುದರಿಂದ ಒತ್ತಡ ಕಡಿಮೆ ಮಾಡಲು ಕೃಷಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ರೈತರು ಆತಂಕಕ್ಕೆ ಒಳಗಾಗದೆ ತಾಳ್ಮೆಯಿಂದ ಬಿತ್ತನೆ ಬೀಜ ಖರೀದಿಸಬೇಕು. ಎಲ್ಲ ರೈತರಿಗೂ ಬಿತ್ತನೆ ಬೀಜ ವಿತರಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಎನ್‌. ಮಾರುತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.