ಜನಸಂಖ್ಯೆ ಹೆಚ್ಚಳದಿಂದ ಜಟಿಲ ಸಮಸ್ಯೆ

ಕೆಲವೇ ವರ್ಷಗಳಲ್ಲಿ ಚೀನಾ ಹಿಂದಿಕ್ಕಲಿದೆ ಭಾರತ•ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

Team Udayavani, Jul 13, 2019, 1:02 PM IST

13-July-24

ಬೀದರ: ಕರ್ನಾಟಕ ಕಾಲೇಜಿನಲ್ಲಿ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಜರುಗಿತು.

ಬೀದರ: ದೇಶದಲ್ಲಿ ಜನಸಂಖ್ಯೆ ಹೆಚ್ಚಾದಂತೆ ಬಡತನ, ನಿರುದ್ಯೋಗ, ಭಿಕ್ಷಾಟನೆ ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗುತ್ತಿದ್ದು, ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಭಾರತೀಯ ಕುಟುಂಬ ಕಲ್ಯಾಣ ಯೋಜನೆ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಹೇಳಿದರು.

ನಗರದ ಕರ್ನಾಟಕ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದದಲ್ಲಿ ಅವರು ಮಾತನಾಡಿದರು.

ಜನಸಂಖ್ಯಾ ದಿನ ಆಚರಿಸುವುದು ಸಂತೋಷದ ವಿಷಯವಲ್ಲ. ಜನಸಂಖ್ಯೆ ಹೆಚ್ಚಳದಿಂದ ಆಗಬಹುದಾಗ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತಾಗಬೇಕು. ಜನಸಂಖ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಯುವ ಜನರಿಗೆ ಸೂಕ್ತ ಮಾಹಿತಿ ನೀಡುವ ಕಾರ್ಯಕೂಡ ನಡೆಯಬೇಕು. ಜನ ಜಾಗೃತಿಯ ಆಂದೋಲನ ನಡೆದಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಜನಸಂಖ್ಯೆ ನಿಂಯತ್ರಣ ಸಾಧ್ಯವಾಗಬಹುದು ಎಂದು ಹೇಳಿದರು.

ಜನ ಸಂಖ್ಯೆ ನಿಯಂತ್ರಣ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ತಾಯಿಯರಿಗೆ ಬಹುಮಾನ ನೀಡುವುದು. ಧನಸಹಾಯ ನೀಡುವುದು ಹಾಗೂ ಆದರ್ಶ ಮಾತೆಯರು ಎಂಬ ಬಿರುದು ನೀಡುವುದರ ಮೂಲಕ ಜನಸಂಖ್ಯಾ ನಿಯಂತ್ರಣ ಮಾಡಲು ಪ್ರಯತ್ನಿಸಿದ್ದೇವೆ. ಇಂದು ಎಫ್‌ಪಿಎಐ ದೇಶದಾದ್ಯಂತ 41 ಶಾಖೆಗಳನ್ನು ಹೊಂದಿದೆ. ಇಂದಿನ ಯುವಕರು ಈ ಶಾಖೆಯ ಸದುಪಯೋಗ ಪಡೆದುಕೊಂಡು ಜನಸಂಖ್ಯಾ ನಿಯಂತ್ರಿಸಲು ಪ್ರಯತ್ನಿಸಬೇಕು. ಹಾಗೂ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಡಾ| ಕಲ್ಪನಾ ದೇಶಪಾಂಡೆ ಮಾತನಾಡಿ, ಜನಸಂಖ್ಯೆ ನಿಯಂತ್ರಿಸುವ ಸಲುವಾಗಿ ಹೆಣ್ಣು ಭ್ರೂಣಹತ್ಯೆಗಳು ನಡೆಯುತ್ತಿವೆ. ನಮ್ಮ ದೇಶದ ಭೂಮಿ ದುಪ್ಪಟ್ಟು ಆಗಲಿಲ್ಲ. ಸಂಪನ್ಮೂಲ ದುಪ್ಪಟ್ಟಾಗಲಿಲ್ಲ. ಆದರೆ ಜನಸಂಖ್ಯೆ ಮಾತ್ರ ಎರಡರಷ್ಟು ಮೂರರಷ್ಟು ಹೆಚ್ಚಾಗುತ್ತಲೇ ಇದೆ. ಈ ಕುರಿತು ನಮ್ಮ ಮನಸ್ಥಿತಿ ಬದಲಾಗಬೇಕಿದೆ. ಇಂದಿಗೂ ಕೂಡ ಪ್ರತೀ ಒಂದು ನಿಮಿಷಕ್ಕೆ ನಮ್ಮ ದೇಶದಲ್ಲಿ ಸುಮಾರು 40 ಮಕ್ಕಳು ಜನಿಸುತ್ತಿವೆ. ಇದು ಹೀಗೇ ಮುಂದುವರಿದರೆ ಕೆಲವೇ ವರ್ಷಗಳಲ್ಲಿ ಭಾರತ ದೇಶ ಚೀನಾ ದೇಶವನ್ನು ಹಿಂದಿಕ್ಕಲಿದೆ. ಅಲ್ಲದೆ ಭಾರತದ ಆರ್ಥಿಕ ಸ್ಥಿತಿ ಅಧೋಗತಿಗಿಳಿಯಲಿದೆ. ದೇಶದಲ್ಲಿ ಹಸಿವಿನಿಂದ ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಆಗಬಹುದು ಎಂದು ಹೇಳಿದರು.

ವಿನಾಯಕ ಕುಲಕರ್ಣಿ, ಶ್ರೀನಿವಾಸ ಬಿರಾದಾರ ಜನಸಂಖ್ಯೆ ನಿಯಂತ್ರಣ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ| ವೈಜನಾಥ ಚಿಕ್ಕಬಸೆ, ಸಮಾಜಶಾಸ್ತ್ರದ ಮುಖ್ಯಸ್ಥ ಗಾಯತ್ರಿ ನೇಳ್ಗೆ, ರೈಚಲರಾಣಿ, ಸಮಾಜಶಾಸ್ತ್ರದ ಉಪನ್ಯಾಸಕ ಜ್ಯೋತಿ ಕರ್ಪೂರ, ಮಧುಸೂಧನ ಕುಲಕರ್ಣಿ, ಡಾ| ಸುರೇಖಾ ಬಿರಾದಾರ, ಡಿ.ವಿ. ಕಂಬಾರ, ಗೀತಾ ಪೋಸ್ತೆ, ಲಕ್ಷ್ಮೀ ಕುಂಬಾರ, ಸಂಗೀತಾ ಮಾನಾ, ಶಾರ್ಲೆಟ್ ಮೇಡಮ್‌ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.