ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Jul 13, 2019, 4:32 PM IST
ಚನ್ನಮ್ಮ ಕಿತ್ತೂರು: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಕಿತ್ತೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಚನ್ನಮ್ಮನ ಕಿತ್ತೂರು: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಕಿತ್ತೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮೆಹಬೂಬ್ ಕಾದ್ರೊಳ್ಳಿ ಮಾತನಾಡಿ, ಪಟ್ಟಣದ ಕಿತ್ತೂರು ಬಸ್ ನಿಲ್ದಾಣದಿಂದ ಸಮೀಪದ ಕುಲವಳ್ಳಿ, ಗಂಗ್ಯಾನಟ್ಟಿ, ಸಾಗರ, ಮಾಚಿ ಹಾಗೂ ಕತ್ರಿದಡ್ಡಿ ಗ್ರಾಮಗಳಿಗೆೆ ಒಂದು ವಾರದಿಂದ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿನಿತ್ಯ ಹಳ್ಳಿಗಳಿಂದ ಪಟ್ಟಣಕ್ಕೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಂಚಾರಿಸುತ್ತಾರೆ. ಅದರಲ್ಲಿ ಶಾಲಾ-ಕಾಲೇಜುಗೆಂದು ದಿನಕ್ಕೆ 150 ವಿದ್ಯಾರ್ಥಿಗಳು ಪಟ್ಟಣಕ್ಕೆ ಬರುತ್ತಾರೆ. ಆದರೆ ಸಮರ್ಪಕ ಬಸ್ ಇಲ್ಲದರಿಂದ ವಿದ್ಯಾರ್ಥಿಗಳು ಮಳೆಯಲ್ಲಿ ಕಾಲ್ನಡಿಗೆ ಮುಖಾಂತರ ಗ್ರಾಮಕ್ಕೆ ಸಂಚರಿಸುವಂತಾಗಿದೆ. ಇಲ್ಲಿರುವ ಸಮಸ್ಯೆ ಕುರಿತು ಅನೇಕ ಬಾರಿ ಶಾಸಕರಿಗೆ, ಜಿಪಂ ಸದಸ್ಯರಿಗೆ ಹಾಗೂ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಖಾಸಿಂ ನೇಸರಗಿ, ಮೆಹಬೂಬ್ ಕಾದ್ರೊಳ್ಳಿ, ಹಸನ್ಸಾಬ್ ಕಾದ್ರೊಳ್ಳಿ, ಶರೀಫ್ ಶಿಲೇದಾರ, ಗಿರಿಮಲ್ಲ ನಾಯ್ಕರ, ಕುತುಬುದಿನ್ ದಳವಾಯಿ, ಪ್ರಕಾಶ ಪವಾರ, ಸಾನೀಯಾ ಇಮಾವನವರ, ಆಕಾಶ ಜಕ್ಕನವರ, ಗಂಗಪ್ಪ ಕೊಕ್ಕರೆ, ಕುಮಾರ ಪಟ್ಟಿಹಾಳ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ