ರೆಸಾರ್ಟ್ನಲ್ಲಿ ದೇಹದಂಡನೆ: ಭೂರಿ ಭೋಜನ
Team Udayavani, Jul 14, 2019, 3:06 AM IST
ದೇವನಹಳ್ಳಿ: ಪ್ರಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ನಲ್ಲಿ ತಂಗಿರುವ ಜೆಡಿಎಸ್ ಶಾಸಕರು ಶನಿವಾರ ಬೆಳಗ್ಗೆ ದೋಸೆ, ಇಡ್ಲಿ, ವಡೆ, ರೈಸ್ಬಾತ್ ಸವಿದರು. ಮಧ್ಯಾಹ್ನ ಮುದ್ದೆ, ನುಗ್ಗೆಕಾಯಿ ಸಾಂಬಾರಿನ ಊಟ ಸೇವಿಸಿದರು. ರೆಸಾರ್ಟ್ನ ಹೊರಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಹೊರಗಿನವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
ಶಾಸಕರ ದೇಹ ದಂಡನೆ: ಈ ಮಧ್ಯೆ, ರೆಸಾರ್ಟ್ನಲ್ಲಿ ತಂಗಿರುವ ಸಚಿವರು, ಶಾಸಕರು ಶನಿವಾರ ಬೆಳಗ್ಗೆ ವಾಯುವಿಹಾರ ಮಾಡಿದರು. ಕೆಲವರು ಯೋಗಾಸನ ಮಾಡಿದರೆ, ಇನ್ನೂ ಕೆಲವರು ಜಿಮ್ನಲ್ಲಿ ವ್ಯಾಯಾಮ ಮಾಡಿದರು.
ರಾಜಕೀಯ ಕುರಿತೇ ಚರ್ಚೆ: ಒಂದು ವಾರದಿಂದ ರೆಸಾರ್ಟ್ನಲ್ಲೇ ತಂಗಿರುವ ಶಾಸಕರು, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಅಲ್ಲದೇ ತಮ್ಮ ಆಪ್ತರು, ಸ್ನೇಹಿತರಿಂದಲೂ ಮಾಹಿತಿ ಪಡೆದುಕೊಳ್ಳುತ್ತಿದ್ದರು.
ಸಾಂತ್ವನ ಹೇಳಿದ ಶಾಸಕ: ಸ್ಥಳೀಯ ಶಾಸಕ ಎಲ್.ಎನ್.ನಾರಾಯಣ ಸ್ವಾಮಿ ಅವರು ತಾಲೂಕಿನ ಈಹೊಸೂರು ಗ್ರಾಮದಲ್ಲಿ ಮೃತರೊಬ್ಬರ ಕುಟುಂಬದವರನ್ನು ಭೇಟಿಯಾಗಿ, ಸಾಂತ್ವನ ಹೇಳಿದರು. ಬಳಿಕ ರೆಸಾರ್ಟ್ಗೆ ಹಿಂದಿರುಗಿದರು.
ಸಿಎಂ ಹೊಗಳಿದ ಜೆಡಿಎಸ್ ರಾಜ್ಯಾಧ್ಯಕ್ಷ: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಮುಖ್ಯಮಂತ್ರಿಗಳು ಹೇಳಿರುವುದು ಅವರ ಧೈರ್ಯ ಹಾಗೂ ನಾಯಕತ್ವ ಗುಣವನ್ನು ತೋರಿಸುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ರೆಸಾರ್ಟ್ ಬಳಿ ಶನಿವಾರ ಪ್ರತಿಕ್ರಿಯಿಸಿದ ಅವರು, ಅಸಮಾಧಾನದಿಂದ ರಾಜೀನಾಮೆ ನೀಡಿ ಮುಂಬೈ ಸೇರಿರುವ ಶಾಸಕರು ವಾಪಸ್ಸಾಗಲಿದ್ದಾರೆ ಎಂಬ ವಿಶ್ವಾಸವಿದೆ. ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ನೀಡಿದ್ದ ಎಂ.ಟಿ.ಬಿ.ನಾಗರಾಜ್ ಅವರನ್ನು ಭೇಟಿಯಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಜೆಡಿಎಸ್ ಶಾಸಕರೆಲ್ಲಾ ರೆಸಾರ್ಟ್ನಲ್ಲಿ ಒಗ್ಗಟ್ಟಾಗಿ ಇದ್ದೇವೆ ಎಂದು ತಿಳಿಸಿದರು.
ಸ್ಥಳೀಯ ಜೆಡಿಎಸ್ ಶಾಸಕ ಎಲ್.ಎನ್.ನಾರಾಯಣ ಸ್ವಾಮಿ ಮಾತನಾಡಿ, ಜೆಡಿಎಸ್ನ ಎಲ್ಲಾ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಮುಖ್ಯಮಂತ್ರಿಗಳ ಕೈ ಬಲಪಡಿಸುವುದೇ ನಮ್ಮೆಲ್ಲರ ಗುರಿ. ಯಾರೊಬ್ಬರೂ ಯಾವುದೇ ಆಮಿಷಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಶಾಸಕರೆಲ್ಲಾ ಸೋಮವಾರ ಒಟ್ಟಿಗೆ ಅಧಿವೇಶನಕ್ಕೆ ತೆರಳಲಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ