ಮೈದುಂಬಿದ ಕೃಷ್ಣೆ, ರೈತರಲ್ಲಿ ಆಶಾಭಾವ

•ಕೃಷ್ಣಾ ನದಿಗೆ ಬರುತ್ತಿದೆ ಭಾರಿ ಪ್ರಮಾಣದ ನೀರು•ಎದುರಾಗಿದೆ ಪ್ರವಾಹ ಭೀತಿ•ಸಂಚಾರಕ್ಕೆ ತೊಂದರೆ

Team Udayavani, Jul 14, 2019, 9:42 AM IST

bk-tdy-2..

ಬೀಳಗಿ: ಗುಳಬಾಳ ಹತ್ತಿರ ತುಂಬಿ ಹರಿಯುತ್ತಿರುವ ಕೃಷ್ಣೆ.

ಬೀಳಗಿ: ಮಹಾರಾಷ್ಟ್ರ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಕೃಷ್ಣಾನದಿ ತುಂಬಿಕೊಂಡು ಹರಿಯುತ್ತಿದೆ. ಮೈದುಂಬಿಕೊಳ್ಳುತ್ತಿರುವ ಕೃಷ್ಣೆಯ ಕಂಡು ಇನ್ನೇನು ಏತ ನೀರಾವರಿ ಕಾಲುವೆಗೆ ನೀರು ಹರಿಯಲಿದೆ ಎಂಬ ಆಶಾಭಾವನೆ ರೈತರಲ್ಲಿ ಮೂಡಿದೆ.

ಅಂತರ್ಜಲ ವೃದ್ಧಿ: ಅಂತರ್ಜಲ ಮಟ್ಟ ಪಾತಾಳಕ್ಕಿಳಿದು ಕೊಳವೆಬಾವಿ, ಬಾವಿ, ಕೆರೆ-ಕಟ್ಟೆಗಳು ಬರಿದಾಗಿದ್ದವು. ಕೃಷ್ಣೆಯಲ್ಲಿ ಮತ್ತೆ ನೀರು ತುಂಬಿಕೊಂಡು ಬಂದಿರುವ ಕಾರಣ, ಅಂತರ್ಜಲ ವೃದ್ಧಿಯ ಆಶಾಭಾವನೆ ಮೊಳಕೆಯೊಡೆದಿದೆ. ದಿನದಿಂದ ದಿನಕ್ಕೆ ಆಲಮಟ್ಟಿ ಜಲಾನಯನ ಪ್ರದೇಶದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಕೃಷ್ಣೆಯ ನದಿಪಾತ್ರದಲ್ಲಿ ಎಲ್ಲ ಏತ ನೀರಾವರಿ ಜಾಕವೆಲ್ ಹತ್ತಿರ ಭರಪುರ ನೀರು ಬಂದಿದೆ.

80ಟಿಎಂಸಿ ಸಂಗ್ರಹ: ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ 516.7 ಇದೆ. ಜು. 2ರ ರಾತ್ರಿಯಿಂದ ಇದುವರೆಗೆ ಸುಮಾರು 60 ಟಿಎಂಸಿ ನೀರು ಹರಿದು ಬಂದಿದೆ. ಮೊದಲಿನ ಸಂಗ್ರಹ ಹಿಡಿದು ಜಲಾಶಯದಲ್ಲಿ ಈಗಾಗಲೆ ಒಟ್ಟು 80 ಟಿಎಂಸಿ ನೀರು ಸಂಗ್ರಹವಿದೆ. ಜೀವಜಲ 63 ಟಿಎಂಸಿ ಇದೆ ಎಂದು ಕೆಬಿಜಿಎನ್‌ಎಲ್ ಮುಖ್ಯ ಅಭಿಯಂತರ ಆರ್‌.ಪಿ.ಕುಲಕರ್ಣಿ ತಿಳಿಸಿದ್ದಾರೆ.

ನೀರಿಗಾಗಿ ಕಾಯುತ್ತಿದ್ದಾರೆ: ಏತ ನೀರಾವರಿ ಕಾಲುವೆಗೆ ನೀರು ಹರಿದ ತಕ್ಷಣವೇ ಬಿತ್ತನೆ ಮಾಡಬೇಕೆಂದು ರೈತರು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಈಗಾಗಲೇ ಬಿತ್ತನೆ ಮಾಡಿದವರೂ ಕೂಡ ಕಾಲುವೆ ನೀರನ್ನು ಅವಲಂಬಿಸಿದ್ದಾರೆ. ಹೀಗಾಗಿ ತಾಲೂಕಿನ ತೆಗ್ಗಿ-ಸಿದ್ದಾಪುರ, ರೊಳ್ಳಿ, ಲಿಂಗಾಪುರ ಎಸ್‌ಕೆ ಸೇರಿದಂತೆ ತಾಲೂಕಿನ ಹಲವು ಏತ ನೀರಾವರಿ ಕಾಲುವೆಗೆ ನೀರು ಹರಿಸುವುದು ಶೀಘ್ರಗತಿಯಲ್ಲಿ ನಡೆಯಬೇಕಿದೆ.

ಕೃಷ್ಣಾ ನದಿಗೆ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಾರಣ, ಜು. 15 ರೊಳಗೆ ತಾಲೂಕಿನ ತೆಗ್ಗಿ-ಸಿದ್ದಾಪುರ, ಸೊನ್ನ, ರೊಳ್ಳಿ, ಕಳಸಕೊಪ್ಪ ಸೇರಿದಂತೆ ಎಲ್ಲ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ಕೂಡಲೇ ನೀರು ಹರಿಸಲು ಕ್ರಮ ಕೈಗೊಳ್ಳಬೇಕೆಂದು ಕೆಬಿಜಿಎನ್‌ಎಲ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ.ಏತ ನೀರಾವರಿ ಕಾಲುವೆಗೆ ನೀರು ಬಿಡಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.•ಮುರುಗೇಶ ನಿರಾಣಿ, ಶಾಸಕರು, ಬೀಳಗಿ

ಕೆಬಿಜಿಎನ್‌ಎಲ್ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜಲಾಶಯದ ನೀರಿನ ಸಂಗ್ರಹ ಹಾಗೂ ಕುಡಿಯಲು, ಕೆರೆ ತುಂಬಲು ಹಾಗೂ ನೀರಾವರಿಗೆ ಎಷ್ಟೆಷ್ಟು ನೀರು ತೆಗೆದಿರಿಸಬೇಕೆನ್ನುವುದು ಕುರಿತು ಚರ್ಚೆ, ನಿರ್ಧಾರವಾಗಬೇಕು. ಈ ಎಲ್ಲ ಪ್ರಕ್ರಿಯೆಗೆ ವಿಳಂಬವಾಗುತ್ತದೆ. ಆದರೂ, ಏತ ನೀರಾವರಿ ಯೋಜನೆಗಳಿಗೆ ಎಷ್ಟು ಪ್ರಮಾಣ ನೀರು ಬಿಡಬೇಕಾಗುತ್ತದೆ ಎನ್ನುವ ಕುರಿತು ನೀರಾವರಿ ಸಲಹಾ ಸಮಿತಿ ಗಮನಕ್ಕೆ ನೀಡುವ ಮೂಲಕ ಕೂಡಲೇ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು.•ಆರ್‌.ಪಿ.ಕುಲಕರ್ಣಿ, ಕೆಬಿಜಿಎನ್‌ಎಲ್ ಮುಖ್ಯ ಅಭಿಯಂತರರು

 

•ರವೀಂದ್ರ ಕಣವಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.