ಜೀವ ಉಳಿಸುವ ‘ವಾಟ್ಸ್‌ಆ್ಯಪ್‌ ಗ್ರೂಪ್‌’

ಸಕಾಲಕ್ಕೆ ರಕ್ತ ಒದಗಿಸುವಲ್ಲಿ ನೆರವು •ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೊಂಡಿಯಂತೆ ಕಾರ್ಯ ನಿರ್ವಹಣೆ

Team Udayavani, Jul 14, 2019, 10:44 AM IST

14-JULY-9

ರಾಯಚೂರು: ನಗರದ ಬ್ಲಿಡ್‌ ಬ್ಯಾಂಕ್‌ನಲ್ಲಿ ರಕ್ತ ನೀಡಿದ ಗಬ್ಬೂರು ಗ್ರಾಪಂ ಜನಪ್ರತಿನಿಧಿಗಳು.

ಸಿದ್ಧಯ್ಯಸ್ವಾಮಿ ಕುಕನೂರು
ರಾಯಚೂರು:
ಒಂದು ತೊಟ್ಟು ರಕ್ತ ಜೀವ ಉಳಿಸಬಲ್ಲುದು. ಇಂತಹ ರಕ್ತದ ಅಗತ್ಯತೆಯನ್ನು ಮನವರಿಕೆ ಮಾಡುವುದರೊಂದಿಗೆ ಜೀವ ಉಳಿಸುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡಿವೆ ‘ವಾಟ್ಸ್‌ಆ್ಯಪ್‌ ಗ್ರೂಪ್‌’ಗಳು.

ಜಿಲ್ಲೆಯಲ್ಲಿ ನಿತ್ಯ ಒಂದಿಲ್ಲೊಂದು ಕಡೆ ರಕ್ತದ ಅಗತ್ಯತೆ ಏರ್ಪಡುತ್ತಲೇ ಇರುತ್ತದೆ. ಕೆಲವೊಮ್ಮೆ ರಕ್ತದ ಅಗತ್ಯತೆ ಹೆಚ್ಚಾಗಿರುತ್ತದೆ. ಸಕಾಲಕ್ಕೆ ರಕ್ತ ಸಿಗದಿದ್ದರೆ ಜೀವಕ್ಕೆ ಹಾನಿಯಾದ ನಿದರ್ಶನಗಳಿಗೇನೂ ಕಡಿಮೆಯಿಲ್ಲ. ಅಂಥ ವೇಳೆ ಜಾತಿ -ಧರ್ಮ-ಕುಲ ಭೇದ ಮೀರಿ ರಕ್ತದಾನ ಮಾಡಿ ಜೀವ ಉಳಿಸುತ್ತಿರುವ ಅನೇಕರು ತಮಗರಿವಿಲ್ಲದೇ ದೊಡ್ಡ ಸೇವೆ ನೀಡುತ್ತಿದ್ದು, ಇದಕ್ಕೆಲ್ಲ ‘ವಾಟ್ಸ್‌ಆ್ಯಪ್‌ ಗ್ರೂಪ್‌’ಗಳು ಕೊಂಡಿಯಂತೆ ಕೆಲಸ ಮಾಡುತ್ತಿವೆ.

ಅನೇಕ ಗ್ರೂಪ್‌ಗ್ಳಲ್ಲಿ ರಕ್ತದ ಅಗತ್ಯ ಇರುವವರು ಒಂದು ಸಂದೇಶ ಹಾಕಿದರೆ ಆ ಸಂದೇಶ ಕೆಲವೆಡೆ ಹರಿದಾಡಿ ಸಮೀಪದಲ್ಲಿರುವ ಯಾರಾದರೂ ಸ್ಪಂದಿಸುತ್ತಿದ್ದಾರೆ. ವಾಟ್ಸ್‌ಆ್ಯಪ್‌ ಸಂದೇಶ ನೋಡಿಯೇ ಬ್ಲಿಡ್‌ ಬ್ಯಾಂಕ್‌ಗೆ ತೆರಳಿ ರಕ್ತ ನೀಡಿದ್ದಾರೆ. ಅವರ ಸೇವೆ ಮೆಚ್ಚಿ ಬ್ಲಿಡ್‌ ಬ್ಯಾಂಕ್‌ ಶ್ಲಾಘನೀಯ ಪತ್ರ ನೀಡಿದೆ. ಇದು ಕೇವಲ ಒಂದು ಉದಾಹರಣೆಯಷ್ಟೇ. ನಿತ್ಯ ಒಂದಿಲ್ಲೊಂದು ಕಡೆ ಅಪರಿಚಿತರು ರಕ್ತದಾನ ಮಾಡಿ ಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದಾರೆ.

ಕೊಟ್ಟು ಪಡೆಯುವ ಪದ್ಧತಿ: ರಕ್ತದ ಅಗತ್ಯತೆ ಹೆಚ್ಚಲು ಮುಖ್ಯ ಕಾರಣ ಸಂಗ್ರಹ ಕೊರತೆ. ಎಲ್ಲ ಬ್ಯಾಂಕ್‌ಗಳಲ್ಲಿ ಹಣ ನೀಡಿ ರಕ್ತ ಪಡೆಯಬೇಕು. ಇಲ್ಲವೇ ಪರ್ಯಾಯವಾಗಿ ರಕ್ತ ನೀಡಿ ನಮಗೆ ಬೇಕಾದ ಗ್ರೂಪ್‌ ರಕ್ತ ಪಡೆಯಬೇಕು. ಕೆಲವೊಮ್ಮೆ ಓ ನೆಗೆಟಿವ್‌ನಂಥ ಅಪರೂಪದ ರಕ್ತ ಸಿಗುವುದು ತುಂಬಾ ವಿರಳ. ಅಂಥ ಕಡೆ ಹಣ ನೀಡಿದರೂ ಸಿಗುವುದು ಕಷ್ಟ. ಆಗ ನಮ್ಮ ರಕ್ತ ನೀಡಿ ಪರ್ಯಾಯ ರಕ್ತ ಪಡೆಯಬೇಕಿದೆ. ಇದು ಎಲ್ಲ ಆಸ್ಪತ್ರೆ ಬ್ಯಾಂಕ್‌ಗಳಲ್ಲಿ ನಡೆಯುತ್ತಿದೆ. ಇನ್ನು ಡೆಂಘೀ ಜ್ವರದಿಂದ ಬಳಲುವ ರೋಗಿಗಳಿಗೆ ಪ್ಲೇಟ್ಲೆಟ್ಸ್‌ ದಿಢೀರ್‌ ಕುಸಿತ ಕಾಣುವ ಸಾಧ್ಯತೆ ಇರುತ್ತದೆ. ಆ ಕ್ಷಣಕ್ಕೆ ತುರ್ತಾಗಿ ರಕ್ತ ಏರಿಸುವ ಸನ್ನಿವೇಶ ನಿರ್ಮಾಣವಾಗುತ್ತದೆ. ಅಂಥ ಕಡೆ ರಕ್ತದ ಅಗತ್ಯತೆ ತೀವ್ರವಾಗಿರುತ್ತದೆ ಎನ್ನುತ್ತಾರೆ ಬ್ಲಿಡ್‌ ಬ್ಯಾಂಕ್‌ ಸಿಬ್ಬಂದಿ.

ಯಾವುದೋ ಕೆಲಸದ ನಿಮಿತ್ತ ರಾಯಚೂರಿಗೆ ಆಗಮಿಸಿದ್ದೆವು. ವಾಟ್ಸ್‌ಆ್ಯಪ್‌ನಲ್ಲಿ ಓ ಪಾಸಿಟಿವ್‌ ರಕ್ತ ಬೇಕಿದೆ ಎಂಬ ಮಾಹಿತಿ ನೋಡಿ ನಗರದ ರಾಯಚೂರು ಬ್ಲಿಡ್‌ ಬ್ಯಾಂಕ್‌ನಲ್ಲಿ ರಕ್ತದಾನ ಮಾಡಿದೆವು. ರಕ್ತದಾನದಿಂದ ಮತ್ತೂಬ್ಬರ ಜೀವ ಉಳಿಯುತ್ತದೆ ಎಂದರೆ ಅದಕ್ಕಿಂತ ಒಳ್ಳೆಯ ಕೆಲಸ ಏನಿದೆ.
ಚನ್ನಬಸಯ್ಯ ಮಠಪತಿ,
ಗಬ್ಬೂರು ಗ್ರಾಪಂ ಅಧ್ಯಕ್ಷ

ಈಚೆಗೆ ಯುವಕರು ಮೊಬೈಲ್ ಸಂದೇಶ ನೋಡಿ ರಕ್ತದಾನ ಮಾಡಲು ಮುಂದೆ ಬರುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಶನಿವಾರ ಕೂಡ ತುರ್ತು ಅಗತ್ಯ ಎಂದು ಒಂದು ಸಂದೇಶ ಹಾಕಿದ್ದಕ್ಕೆ ನಾಲ್ವರು ಬಂದು ರಕ್ತದಾನ ಮಾಡಿದರು. ಅವರಿಗೆ ಅಭಿನಂದನೆ ಪತ್ರ ನೀಡಿ ಗೌರವಿಸಲಾಯಿತು. ರಕ್ತದಾನ ಮಹತ್ವ ಇನ್ನೂ ಹೆಚ್ಚಿನ ಮಟ್ಟದಲ್ಲಿ ಆಗಬೇಕು.
ವೀರರಾಜು,
ಮುಖ್ಯಸ್ಥ, ರಾಯಚೂರು ಬ್ಲಿಡ್‌ ಬ್ಯಾಂಕ್‌

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.