ಬಸ್ ಪಲ್ಟಿ: 20 ಮಂದಿಗೆ ಗಾಯ
ಸ್ಕೂಟರ್ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಮಿನಿ ಬಸ್
Team Udayavani, Jul 14, 2019, 2:20 PM IST
ತಾಲೂಕಿನ ಜಯಪುರ ಬಳಿ ರಸ್ತೆ ಬದಿಗೆ ಉರುಳಿದ ಬಸ್.
ರಾಮನಗರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಶನಿವಾರ ಬೆಳಗ್ಗೆ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ದ್ವಿ ಚಕ್ರ ವಾಹನ ಚಲಾಯಿಸುತ್ತಿದ್ದ ಹೊಸೂರು ಗ್ರಾಮದ ಬಿ.ಎಂ.ಶ್ವೇತಾ ಹಾಗೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗ್ರಾಮೆಂರ್ಟ್ಸ್ ವೊಂದರ ಮಹಿಳಾ ನೌಕರರು ಗಾಯಗೊಂಡ್ದಿದಾರೆ.
ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ: ಗಾಯಗೊಂಡ ನೌಕರರನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೆ.ಬ್ಯಾಡರಹಳ್ಳಿಯ ಸವಿತಾ, ಶಾರದಮ್ಮ, ಉಜಿನಿಯ ಸೀತಮ್ಮ, ಸುಮಿತ್ರಾ, ಚಿಕ್ಕಬ್ಯಾಡರಹಳ್ಳಿಯ ಸುಮಿತ್ರಮ್ಮ, ಜಯಮ್ಮ, ಜ್ಯೋತಿ, ಲಕ್ಷ್ಮೀ, ಜೈಶೀಲಾ, ಲೀಲಾವತಿ, ಲಕ್ಷ್ಮೀದೇವಿ, ರಾಮನಗರ ತಾಲೂಕಿನ ಕ್ಯಾಸಾಪುರ ಗ್ರಾಮದ ಲಕ್ಷ್ಮೀ, ಸುನಿತಾ, ಮಂಗಳಗೌರಿ, ಚೌಡೇಶ್ವರಿ ಹಳ್ಳಿಯ ರೂಪಾ, ಶೈಲಜಾ, ಪ್ರಭಾವತಿ, ಸುಮಾ, ಹಿಪ್ಪೆ ಮರದದೊಡ್ಡಿ ಗ್ರಾಮದ ಅನಿತಾ, ಚಾಮನಹಳ್ಳಿಯ ರತ್ನ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಬಿ.ಎಂ.ಶ್ವೇತಾ, ಜ್ಯೋತಿ ಸೇರಿದಂತೆ ಐದಾರು ಮಹಿಳೆಯರಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತಕ್ಕೆ ವೇಗದ ಚಾಲನೆಯೇ ಕಾರಣ: ರಾಮನಗರದ ಬಸವನಪುರದಲ್ಲಿನ ಮಧುರಾ ಗಾರ್ಮೆಂಟ್ಸ್ನ ಮಹಿಳಾ ನೌಕರರು ಮಿನಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಇಲ್ಲಿನ ಖಾಸಗಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಎಂ.ಶ್ವೇತಾ ಹೊಸೂರು ಗ್ರಾಮದಿಂದ ಶಾಲೆಗೆ ತಮ್ಮ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಜಯಪುರ ಗೇಟ್ ಬಳಿ ಹೋಗುತ್ತಿದ್ದಾಗ ಅದೇ ವೇಳೆ ಹಿಂಬದಿಯಿಂದ ಬಂದ ಬಸ್ಸು ಡಿಕ್ಕಿ ಹೊಡೆದಿದೆ.
ಚಾಲಕನ ನಿಯಂತ್ರ ಕಳೆದುಕೊಂಡ ಬಸ್ಸು ಸ್ಕೂಟರ್ ಸಮೇತ ರಸ್ತೆ ಬದಿಗೆ ಉರುಳಿದೆ. ಬಸ್ಸಿನಲ್ಲಿದ್ದ 20 ಮಂದಿ ಮಹಿಳೆಯರ ಪೈಕಿ, ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸ್ಕೂಟರ್ ಚಾಲಕಿಗೂ ಪೆಟ್ಟಾಗಿದೆ. ಬಸ್ ಉರುಳಿದ್ದನ್ನು ಗಮನಿಸಿದ ಸ್ಥಳೀಯರು ಹರಸಾಹಸ ಪಟ್ಟು, ಪ್ರಯಾಣಿಕರನ್ನು ರಕ್ಷಿಸಿ ಆಟೋ ಇತರೆ ಖಾಸಗಿ ವಾಹನಗಳಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ಚಾಲಕನ ವೇಗದ ಚಾಲನೆಯೇ ಕಾರಣ ಎಂದು ದೂರುಗಳು ಕೇಳಿ ಬಂದಿವೆ.
ನಾಗರಿಕರ ಅಸಮಾಧಾನ: ಎರಡನೇ ಶನಿವಾರ ಎಂಬ ಕಾರಣಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಒಬ್ಬರು ವೈದ್ಯರು ಮತ್ತು ಇಬ್ಬರು ಸಹಾಯಕರಿಯರು ಮಾತ್ರ ಇದ್ದರು. ಹೀಗಾಗಿ ಗಾಯಾಳುಗಳ ಪೈಕಿ ಕೆಲವರು ಪ್ರಥಮ ಚಿಕಿತ್ಸೆಯ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆಗೆ ಆಟೋಗಳಲ್ಲೇ ಪ್ರಯಾಣಿಸಿ ದಾಖಲಾದರು ಎಂದು ಸಾರ್ವಜನಿಕರು ಆರೊಪಿಸಿದ್ದಾರೆ.
ಮಾಲೀಕರೇ ಚಿಕಿತ್ಸಾ ವೆಚ್ಚ ನೀಡಲಿ: ಗಾರ್ಮೆಂಟ್ಸ್ ಮಾಲೀಕರು ನಿಗದಿಪಡಿಸಿದ್ದ ಬಸ್ಸಿನಲ್ಲೇ ಮಹಿಳಾ ನೌಕರರು ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ ಗಾಮೆಂರ್ಟ್ಸ್ ಮಾಲೀಕರೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಮಾಹಿತಿ ಪಡೆದು ಗಾರ್ಮೆಂಟ್ಸ್ನ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿ ಗಾಯಾಳುಗಳ ಮಾಹಿತಿ ಸಂಗ್ರಹಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ