ಎನ್ಸಿಸಿ ನಾಯಕತ್ವ ಶಿಬಿರ ಆರಂಭ
Team Udayavani, Jul 14, 2019, 3:21 PM IST
ಹುಬ್ಬಳ್ಳಿ: ಕೆಎಲ್ಇ ತಾಂತ್ರಿಕ ವಿವಿಯಲ್ಲಿ ಎನ್ಸಿಸಿ ನಾಯಕತ್ವ ಶಿಬಿರಕ್ಕೆ ಚಾಲನೆ ನೀಡಿ ಕರ್ನಲ್ ಜೆ.ಜೆ. ಅಬ್ರಹಾಂ ಮಾತನಾಡಿದರು.
ಹುಬ್ಬಳ್ಳಿ: ಎನ್ಸಿಸಿ ವಿದ್ಯಾರ್ಥಿಗಳು ಸಕ್ರಿಯವಾಗಿ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಸಂದೇಹಗಳನ್ನು ನಿವಾರಣೆ ಮಾಡಿಕೊಂಡು, ವ್ಯಕ್ತಿತ್ವ ವಿಕಸನ ಕೈಗೊಂಡಲ್ಲಿ ಶಿಬಿರ ಆಯೋಜನೆ ಸಾರ್ಥಕವಾಗುತ್ತದೆ ಎಂದು 28 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಗ್ರೂಪ್ ಕಮಾಂಡರ್ ಕರ್ನಲ್ ಜೆ.ಜೆ. ಅಬ್ರಹಾಂ ಹೇಳಿದರು.
ಕೆಎಲ್ಇ ತಾಂತ್ರಿಕ ವಿವಿ ಬಯೋಟೆಕ್ ಸಭಾಂಗಣದಲ್ಲಿ 10 ದಿನಗಳ ಎನ್ಸಿಸಿ ನಾಯಕತ್ವ ತರಬೇತಿ ಶಿಬಿರಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೆಡೆಟ್ಗಳು ವ್ಯಕ್ತಿತ್ವ ವಿಕಸನದ ಕುರಿತು ಮನಸಿನಲ್ಲಿ ಮೂಡುವ ಪ್ರಶ್ನೆಗಳಿಗೆ ಉತ್ತರ ಪಡೆದುಕೊಳ್ಳಬೇಕು. ಪ್ರಶ್ನೆ ಕೇಳುವ ಪರಿಪಾಠ ಬೆಳೆಸಿಕೊಳ್ಳಬೇಕು. ಪ್ರಶ್ನೆ ಕೇಳುವುದಕ್ಕೆ ಹಿಂಜರಿದರೆ ಅದರಿಂದ ನಮಗೆ ನಷ್ಟವೇ ಹೊರತು ಬೇರೆಯವರಿಗಲ್ಲ ಎಂದರು.
ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ಉದ್ಯಮ, ನಾಯಕತ್ವ ಕುರಿತು ವಿವಿಧ ಉಪನ್ಯಾಸಗಳನ್ನು ಸಂಘಟಕರು ವ್ಯವಸ್ಥಿತವಾಗಿ ನಿಯೋಜಿಸಿದ್ದಾರೆ. ಕೆಡೆಟ್ಗಳು ಪ್ರತಿಯೊಂದು ಉಪನ್ಯಾಸವನ್ನು ಆಸಕ್ತಿಯಿಂದ ಕೇಳಬೇಕು. ಜೀವನಕ್ಕೆ ಅನುಕೂಲವಾಗುವ, ಭವಿಷ್ಯ ರೂಪಿಸುವ ಅಂಶಗಳನ್ನು ಶಿಬಿರದಿಂದ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಎನ್ಸಿಸಿ ಎಂದರೆ ಕೇವಲ ಸೈನ್ಯಕ್ಕೆ ಸೇರುವುದಕ್ಕಷ್ಟೇ ಅಲ್ಲ. ಸೈನ್ಯಕ್ಕೆ ಸೇರಲೇಬೇಕೆಂದು ನಾವು ಒತ್ತಡವನ್ನೂ ಹೇರುವುದಿಲ್ಲ. ಇಲ್ಲಿ ಶಿಸ್ತು ಕಲಿಸಿಕೊಡಲಾಗುತ್ತದೆ. ಶಿಬಿರದಲ್ಲಿ ಪಾಲ್ಗೊಂಡ 400 ಕೆಡೆಟ್ಗಳು ಶಿಸ್ತುಬದ್ಧ ವರ್ತನೆಯಿಂದ ಆಯೋಜಕರ ಶ್ರಮವನ್ನು ಸಾರ್ಥಕಪಡಿಸಬೇಕು ಎಂದರು. ಮುಖ್ಯ ತರಬೇತಿ ಅಧಿಕಾರಿ ಡೇನಿಯಲ್ ಅಬ್ರಹಾಂ, ಲೆಫ್ಟಿನೆಂಟ್ ಎ.ಡಿ. ಕಾಮತ, ಲೆಫ್ಟಿನೆಂಟ್ ಕರ್ನಲ್ ಎ. ವಿವೇಕಾನಂದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ