ಸ್ಮಾರ್ಟ್ ಸಿಟಿ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ
Team Udayavani, Jul 14, 2019, 3:50 PM IST
ಬೆಳಗಾವಿ: ನಗರದ ವಿವಿಧ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬೆಳಗಾವಿ: ಮಹಾನಗರ ಪಾಲಿಕೆ ನೂತನ ಆಯುಕ್ತ ಅಶೋಕ ದುಡಗುಂಟಿಯವರು ಶನಿವಾರ ನಗರ ಪ್ರದಕ್ಷಣೆ ಕೈಗೊಂಡು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಗೋವಾವೇಸ್, ಟಿಳಕವಾಡಿಯ ಶುಕ್ರವಾರ ಪೇಟೆಯ ಸಿಸಿ ರಸ್ತೆ, ಕಲಾಮಂದಿರದ ವಾಣಿಜ್ಯ ಸಂಕೀರ್ಣ, ಟಿಳಕವಾಡಿ ತರಕಾರಿ ಮಾರುಕಟ್ಟೆ ಮೊದಲಾದ ಕಡೆ ಭೇಟಿ ನೀಡಿ ಅಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನೆ ಸಮಯದಲ್ಲಿ ಕೆಲವು ಕಡೆ ಚರಂಡಿಗಳು ತುಂಬಿಕೊಂಡಿರುವದನ್ನು ಗಮನಿಸಿದ ಆಯುಕ್ತರು ಕೂಡಲೇ ಅವುಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಅಭಿಯಂತ ಲಕ್ಷ್ಮೀ ನಿಪ್ಪಾಣಿಕರ, ಸ್ಮಾರ್ಟ್ಸಿಟಿ ಯೋಜನೆಯ ಎಂಡಿ. ಕೃಷ್ಣಮೂರ್ತಿ, ಪರಿಸರ ಅಧಿಕಾರಿ ಉದಯಕುಮಾರ ತಳವಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ