ಸಿಎಂ ಬಹುಮತ ಸಾಬೀತು ಪಡಿಸಲಿದ್ದಾರೆ


Team Udayavani, Jul 15, 2019, 3:00 AM IST

cm-bahuma

ದೇವನಹಳ್ಳಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ ಸುಭದ್ರವಾಗಿಯೇ ಇದೆ. ಐದು ವರ್ಷ ಪೂರ್ಣಗೊಳಿಸುತ್ತದೆ. ಬಹುಮತ ಸಾಬೀತು ಪಡಿಸುವಲ್ಲಿ ಕುಮಾರಸ್ವಾಮಿ ಯಶಸ್ಸು ಸಾಧಿಸುತ್ತಾರೆ ಎಂದು ಜೆಡಿಎಸ್‌ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಕೋಡಗುರ್ಕಿ ಸಮೀಪದಲ್ಲಿರುವ ಪ್ರಸ್ಟೀಜ್‌ ಗಾಲ್ಫ್ಶೈರ್‌ ರೆಸಾರ್ಟ್‌ಗೆ ತೆರಳುವ ವೇಳೆ ಹಲವು ಶಾಸಕರು ಮಾಧ್ಯಮದವರೊಂದಿಗೆ ಮಾತನಾಡಿ, ವಿಷಯ ಸ್ಪಷ್ಟಪಡಿಸಿದರು.

ಅತೃತ್ಪರ ಮನವೊಲಿಕೆ ವಿಶ್ವಾಸವಿದೆ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್‌ ಮಾತನಾಡಿ, ರಾಜ್ಯ ರಾಜಕೀಯ ಹಲವು ತಿರುವುಗಳನ್ನು ಪಡೆಯುತ್ತಿದೆ. ಎರಡೂ ಪಕ್ಷಗಳ ನಾಯಕರು ಅತೃಪ್ತರ ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿ ಉಸ್ತುವಾರಿ ಮುರಳಿಧರ್‌, ಈಶ್ವರಪ್ಪ ಭೇಟಿ ಆಕಸ್ಮಿಕವಾದುದು. ಇದಕ್ಕೆ ರಾಜಕೀಯ ಲೇಪನ ಬಳಿಯುವುದು ಸರಿಯಲ್ಲ.

ಅಲ್ಲದೆ ಅತೃಪ್ತ ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜತೆಗೆ ಕೆಲ ಶಾಸಕರು ಇನ್ನೂ ನಾವು ಜನತಾದಳದಲ್ಲಿಯೇ ಇದ್ದೇವೆ. ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲರೂ ಒಟ್ಟಾಗಿ ಹೋಗುವ ಉದ್ದೇಶದಿಂದಲೇ ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಜತೆಗೆ ಸೋಮವಾರ ಅಧಿವೇಶನವಿದ್ದು, ಎಲ್ಲರೂ ಹಾಜರಾಗುತ್ತೇವೆ ಎಂದು ಹೇಳಿದರು.

ಸರ್ಕಾರ 5 ವರ್ಷ ಪೂರೈಸುತ್ತದೆ: ವಿಧಾನ ಪರಿಷತ್‌ ಸದಸ್ಯ ಶರವಣ ಮಾತನಾಡಿ, ಸರ್ಕಾರ ಸುಭದ್ರವಾಗಿಯೇ ಇದೆ. ಮೈತ್ರಿ ಸರ್ಕಾರ, 5 ವರ್ಷ ಪೂರ್ಣಗೊಳಿಸುತ್ತದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಹುಮತ ಸಾಬೀತು ಮಾಡಲಿದ್ದಾರೆ. ಎಲ್ಲವೂ ಶುಭ ಸೂಚಕವಾಗಿಯೇ ಇದೆ. ಕುಮಾರಸ್ವಾಮಿ ಬಹುಮತ ಸಾಬೀತಿನಲ್ಲಿ ಜಯಶೀಲರಾಗುತ್ತಾರೆ.

ಭಗವಂತನ ಆಶೀರ್ವಾದದಿಂದ ಈ ಸರ್ಕಾರ ರಚನೆ ಆಗಿದೆ. ಈ ಸರ್ಕಾರ ಉಳಿಯುತ್ತೆ, ಜನರಿಗೆ ಉತ್ತಮ ಕೆಲಸ ಮಾಡಿಕೊಡುತ್ತದೆ. ಸುಧಾಕರ್‌ ಸೇರಿದಂತೆ ಯಾರ ನಡೆ ಬಗ್ಗೆ ನಾನು ಈಗ ಮಾತನಾಡೋದಿಲ್ಲ, ನಿಮಗೆಲ್ಲ ಶುಭ ಸೂಚನೆ ಸಿಗುತ್ತದೆ ಎಂದು ಹೇಳಿದರು.

ಶಾಸಕರ ಸಮನ್ವಯದ ಕೊರತೆ: ಮಳವಳ್ಳಿ ಶಾಸಕ ಅನ್ನದಾನಿ ಮಾತನಾಡಿ, ಆಯಾ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಸಹಜ. ಹಿಂದೆ ಸೋನಿಯಾ ಗಾಂಧಿ, ಗುಲಾಂ ನಬೀ ಅಜಾದ್‌ ನಿರ್ಧರಿಸಿದಂತೆ ಎಚ್‌.ಡಿ. ಕುಮಾರಸ್ವಾಮಿ 5 ವರ್ಷಗಳವರೆಗೆ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಎರಡು ಪಕ್ಷಗಳು ಸೇರಿ ಮೈತ್ರಿ ಸರ್ಕಾರ ನಡೆಸುವಾಗ ಭಿನ್ನಮತ ಸರ್ವೇ ಸಾಮಾನ್ಯ.

ಎಲ್ಲವೂ ಬಗೆಹರಿಸುವ ಸಾಮಾರ್ಥಯ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರಿಗಿದೆ. ಅವರೊಂದಿಗೆ ನಾವಿದ್ದೇವೆ. ಸರ್ಕಾರದ ಸಚಿವರ ಖಾತೆಗಳಲ್ಲಿ ಎಚ್‌.ಡಿ.ರೇವಣ್ಣ ಹಸ್ತಕ್ಷೇಪ ಆರೋಪ, ಕೆಎಎಸ್‌ ಮತ್ತು ಐಎಎಸ್‌ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಡುವಿನ ಸಮನ್ವಯ ಕೊರತೆ ಇದೆ.

ಭಿನ್ನಮತೀಯರ ಎಲ್ಲ ಬೇಡಿಕೆಗಳನ್ನು ಆಲಿಸಿ, ಹಿರಿಯ ನಾಯಕರು ಕ್ರಮಕೈಗೊಳ್ಳುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಶ್ರವಣಬೆಳಗೋಳ ಶಾಸಕ ಬಾಲಕೃಷ್ಣ ಮಾತನಾಡಿ, ಮೋಜು ಮಸ್ತಿಗಾಗಿ ಶಾಸಕರು ರೆಸಾರ್ಟ್‌ ವಾಸ್ತವ್ಯ ಮಾಡ್ತಿಲ್ಲ. 14 ತಿಂಗಳು ಯಶಸ್ವಿಯಾಗಿ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ ಆಡಳಿತ ನಡೆಸಿದೆ.

5 ವರ್ಷ ಆಡಳಿತ ನಡೆಸುವುದು ಖಚಿತ. ಕೆಲ ಶಾಸಕರು ಸ್ವಾರ್ಥಕ್ಕಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್‌ ಸೇರಿ, ಎಂಟಿಬಿ ಮನವೊಲಿಸಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸಮತಯಾಚನೆ ದಿನಾಂಕ ನಿಗದಿ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಸಾರ್ವಜನಿಕರ ಹಣ ಬಳಸುತ್ತಿಲ್ಲ: ರೆಸಾರ್ಟ್‌ನ ಎಲ್ಲ ಖರ್ಚನ್ನು ಸ್ವಂತ ಹಣದಲ್ಲಿ ನಿಭಾಯಸುತ್ತಿದ್ದೇವೆ. ನಮಗೆ ವ್ಯವಸಾಯ, ಉದ್ದಿಮೆ ಸೇರಿದಂತೆ ಆದಾಯವಿದೆ. ಅದರಲ್ಲೇ ಎಲ್ಲ ಖರ್ಚುಗಳನ್ನು ಭರಿಸುತ್ತಿದ್ದೇವೆ. ಆ ಸಾಮರ್ಥ್ಯ ನಮಗಿದೆ. ರೆಸಾರ್ಟ್‌ನ ಒಂದು ವಿಲ್ಲಾಗೆ 30 ಸಾವಿರ ಇದ್ದು, 5 ಮಂದಿ ವಾಸ್ತವ್ಯ ಮಾಡಬಹುದು. ಯಾವುದೇ ಕಾರಣಕ್ಕೂ ಸಾರ್ವಜನಿಕರ ಹಣ ಬಳಸುತ್ತಿಲ್ಲ ಎಂದು ಶಾಸಕರು ತಿಳಿಸಿದರು. ಆದರೆ ಇತ್ತ ಜನರ ಕುಂದುಕೊರತೆ ಆಲಿಸದ ಶಾಸಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.