ದೇಶೀಯ ಕ್ರೀಡೆಗಳಿಂದ ಮಾನಸಿಕ ನೆಮ್ಮದಿ
Team Udayavani, Jul 15, 2019, 3:00 AM IST
ದೇವನಹಳ್ಳಿ: ವಿದ್ಯಾರ್ಥಿಗಳ ಮಾನಸಿಕ ನೆಮ್ಮದಿ ಹಾಗೂ ದೈಹಿಕವಾಗಿ ಸದೃಢವಾಗಿರಲು ದೇಶೀಯ ಕ್ರೀಡೆಗಳು ತುಂಬ ಸಹಕಾರಿಯಾಗಿವೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಮಾನಸಿಕ ಬೆಳವಣಿಗೆ ವೃದ್ಧಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ದೇವಿ ತಿಳಿಸಿದರು. ನಗರದ ಟಿಪ್ಪು ಸುಲ್ತಾನ್ ಜನ್ಮಸ್ಥಳ ರಸ್ತೆಯಲ್ಲಿರುವ ನ್ಯೂ ಶಾರದಾ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ಮಕ್ಕಳಿಗೆ ದೇಶೀಯ ಆಟಗಳ ಪರಿಚಯ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶಿಯ ಆಟಗಳು ಅವಸಾನದ ಅಂಚಿನಲ್ಲಿವೆ. ಮನರಂಜನೆ ಜೊತೆಗೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಜ್ಞಾನಾರ್ಜನೆಗೆ ಮಾಹಿತಿ ನೀಡುವ ಶಿಕ್ಷಕರು ಇಂತಹ ಕಾರ್ಯಕ್ರಮ ಆಯೋಜಿಸಿದರೆ ಮಕ್ಕಳಿಗೆ ವಾಸ್ತವ ತಿಳಿದು ಅವರಲ್ಲಿ ದೇಶಿ ಕ್ರೀಡೆಗಳ ಬಗ್ಗೆ ಪರಿಚಯಿಸುವಂತೆ ಆಗುತ್ತದೆ. ಕಲಿಕೆ ಎಂಬುವುದು ಸರಳ ವಿಧಾನದಲ್ಲಿ ಒತ್ತಡ ಮತ್ತು ಹೊರೆಯಾಗದ ರೀತಿಯಲ್ಲಿ ಮಕ್ಕಳಲ್ಲಿ ಪ್ರೇರೇಪಣೆ ಮಾಡುವಂತೆ ಆಗಬೇಕು ಎಂದು ಹೇಳಿದರು.
ಶಿಕ್ಷಣ ಇಲಾಖೆ ಅಕ್ಷರದಾಸೋಹ ಮೇಲ್ವಿಚಾರಕ ರಿಯಾಜ್ ಮಾತನಾಡಿ, ಶಿಕ್ಷಣ ಇಲಾಖೆ ಸೋಮವರಾದಿಂದ ಶುಕ್ರವಾರದ ವರೆಗೆ ದಿನನಿತ್ಯದ ವೇಳಾಪಟ್ಟಿಯಂತೆ ಮಾತ್ರ ಮಕ್ಕಳು ಪುಸ್ತಕಗಳನ್ನು ತೆಗೆದುಕೊಂಡು ಬರಬೇಕು. ಪ್ರತಿ ಶನಿವಾರ ಬ್ಯಾಗ್ ರಹಿತವಾಗಿ ಮಕ್ಕಳು ಶಾಲೆಗೆ ಬರಬೇಕಾಗುತ್ತದೆ. ಪೂರ್ಣ ದಿನ ಪಠ್ಯೇತರ ಚಟುವಟಿಕೆಗೆ ಮೀಸಲಾಗಬೇಕು.
ಉದಾಹರಣೆಗೆ ದೇಶೀಯ ಆಟಗಳಿಂದ ಮಕ್ಕಳನ್ನು ಮೊಬೈಲ್ ವ್ಯಾಮೋಹದಿಂದ ದೂರವಿಡಲು ಸಹಕಾರಿಯಾಗುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ದೇಶಿಯ ಆಟಗಳ ಬಗ್ಗೆ ಆಗಾಗ ತಿಳಿಸಿಕೊಡುವ ಕೆಲಸ ಮಾಡುವಂತೆ ಆಗಬೇಕು ಎಂದರು. ಮುಖ್ಯ ಶಿಕ್ಷಕಿ ಪುಷ್ಪಾಂಜಲಿ ಮಾತನಾಡಿ, ದೇಶೀಯ ಅನೇಕ ಗ್ರಾಮೀಣ ಆಟಗಳ ಹೆಸರುಗಳನ್ನು ಮರೆಯುತ್ತಿದ್ದೇವೆ. ಮೊದಲೆಲ್ಲ ದೇಶಿಯ ಆಟಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದರು.
ಇದರಿಂದ ಅವರ ಜ್ಞಾನಾರ್ಜನೆ ಗಟ್ಟಿಗೊಳ್ಳುವುದರ ಜೊತೆಗೆ ದೆ„ಹಿಕವಾಗಿ ಸದೃಢರಾಗಿರುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಮೊಬೆ„ಲ್, ಟಿವಿ ವ್ಯಾಮೋಹದಿಂದ ಮಕ್ಕಳು ದೆ„ಹಿಕವಾಗಿ ಹಾಗೂ ಮಾನಸಿಕವಾಗಿ ತೊಂದರೆಗಳನ್ನು ಅನುಭವಿಸುವ ಸ್ಥಿತಿಗೆ ಬಂದೊದಗಿದೆ. ಇಂತಹ ಸ್ಥಿತಿಯಲ್ಲಿ ನಮ್ಮ ಮಕ್ಕಳು ಇರಬಾರದೆಂದು ದೇಶಿಯ ಆಟಗಳಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಸವಿತಾ ನಟರಾಜ್, ಕಾರ್ಯದರ್ಶಿ ವಿನಯ್, ಸಿಆರ್ಪಿ ಗಜೇಂದ್ರ, ಶಿಕ್ಷಕರಾದ ಗುರುಪ್ರಸಾದ್, ವೆಂಕಟಾಚಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್