ಶಿಥಿಲ ಕೊಠಡಿ ಕೆಡವಲು ಕೊನೆಗೂ ಅನುಮತಿ

 ತಣ್ಣೀರುಪಂತ ಸ. ಹಿ. ಮಾ. ಶಾಲೆ: ಅಪಾಯಕಾರಿ ಸ್ಥಿತಿಯಲ್ಲಿ ಕೊಠಡಿಗಳು

Team Udayavani, Jul 15, 2019, 5:23 AM IST

10531307UPG6-4

ಉಪ್ಪಿನಂಗಡಿ: ಅಪಾಯದ ಅಂಚಿನಲ್ಲಿದ್ದ, ಶಾಲಾ ಕಟ್ಟಡಕ್ಕೆ ತಾಗಿ ಕೊಂಡಿರುವ ಕೊಠಡಿಗಳನ್ನು ಕೆಡವಲು ಕೊನೆಗೂ ಜಿ.ಪಂ. ಎಂಜಿನಿಯರಿಂಗ್‌ ವಿಭಾಗ ಅನುಮತಿ ನೀಡಿದ್ದು, ಹೆತ್ತವರು ನಿಟ್ಟುಸಿರು ಬಿಡುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಸರಕಾರಿ ಹಿರಿಯ ಮಾದರಿ ಶಾಲೆಯ ಕಟ್ಟಡದಲ್ಲಿ ಎರಡು ಕೊಠಡಿಗಳು ಸಂಪೂರ್ಣ ಬಿರುಕು ಬಿಟ್ಟು ಛಾವಣಿ ಕುಸಿ ಯುವ ಹಂತದಲ್ಲಿವೆ. ಈ ಕೊಠಡಿಗಳಿಗೆ ತಾಗಿಕೊಂಡಿದ್ದ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು, “ಉದಯವಾಣಿ’ ಸುದಿನ ವರ್ಷದ ಹಿಂದೆಯೇ ಸುದೀರ್ಘ‌ ವರದಿಯನ್ನು ಪ್ರಕಟಿಸಿತ್ತು.

ಇದರ ಬೆನ್ನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಅಪಾಯದ ಅಂಚಿನಲ್ಲಿರುವ ತರಗತಿಗಳನ್ನು ಬದಲಿ ಕೊಠಡಿಗಳಿಗೆ ಸ್ಥಳಾಂತರಿಸುವ ಸೂಚನೆ ಯನ್ನು ಅನುಷ್ಠಾನಗೊಳಿಸಿದ್ದರು.

ಆದರೂ ಅಪಾಯದ ಅಂಚಿನ ಕೊಠಡಿ ತರಗತಿ ನಡೆಯುವ ಕಟ್ಟಡಕ್ಕೆ ತಾಗಿಕೊಂಡಿದ್ದು, ಅಪಾಯ ದೂರವಾಗಿ ರಲಿಲ್ಲ. ಒಂದು ವರ್ಷ ಕಾಲ ಕೊಠಡಿ ಕೆಡವಲು ಮೀನ-ಮೇಷ ಎಣಿಸಿದ ಅಧಿಕಾರಿಗಳು, ನೆಪಗಳನ್ನು ಹೇಳಿ ಜಾರಿಕೊಳ್ಳುತ್ತಿದ್ದರು.

ಇದನ್ನು ಅರಿತ ಗ್ರಾಮಸ್ಥರು ಗ್ರಾಮಸಭೆ ಯಲ್ಲಿ ವಿಷಯ ಪ್ರಸ್ತಾವಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಮಕ್ಕಳನ್ನು ಈ ಶಾಲೆಗೆ ಕಳುಹಿಸಲಿ. ಒಂದೋ ಕೊಠಡಿಗಳನ್ನು ಕೆಡವಲು ಇಲಾಖೆ ಕ್ರಮ ಜರುಗಿಸಲಿ, ಇಲ್ಲವೇ ನಾವೇ ಕೆಡವಲು ಸಿದ್ಧ ಎಂದು ಸವಾಲು ಹಾಕಿದರು. ಇದರಿಂದ ಮುಜುಗರಕ್ಕೆ ಒಳಗಾದ ಶಿಕ್ಷಣ ಇಲಾಖೆ, ಈಗ ಎಂಜಿನಿಯರಿಂಗ್‌ ವಿಭಾಗದಿಂದ ಕೊಠಡಿಗಳನ್ನು ಕೆಡವಲು ಆದೇಶ ಪಡೆದಿದ್ದು, ಒಪ್ಪಂದವೂ ಸಿದ್ಧಗೊಂಡಿದೆ ಎಂದು ತಿಳಿದುಬಂದಿದೆ.

 ವರದಿ ಬಂದಿದೆ
ತಣ್ಣೀರುಪಂತ ಶಾಲೆಯ ಹಳೆಯ ಕೊಠಡಿಗಳನ್ನು ಪರಿಶೀಲಿಸಿದ್ದು, ಶಿಕ್ಷಣ ಇಲಾಖೆಯಿಂದ ಜಿ.ಪಂ. ಎಂಜಿನಿಯರಿಂಗ್‌ ವಿಭಾಗಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಕೆಡವಲು ಮಂಜೂರಾತಿ ಪಡೆಯುವುದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿತ್ತು. ಈಗ ಜಿ.ಪಂ. ಎಂಜಿನಿಯರಿಂಗ್‌ ವಿಭಾಗವು ವರದಿ ನೀಡಿದ್ದು, ತಾ.ಪಂ. ಸಭೆಯಲ್ಲಿ ಚರ್ಚೆಯ ಬಳಿಕ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು.
 -ಶರೀಫ್, ಕ್ಷೇತ್ರ ಶಿಕ್ಷಣ ಸಂಯೋಜಕ, ಬೆಳ್ತಂಗಡಿ

 ಶೀಘ್ರ ಕ್ರಮ
ತಣ್ಣೀರುಪಂತ ಶಾಲೆಯಲ್ಲಿ ಎರಡು ಹಳೆಯ ಕೊಠಡಿಗಳು ಹಾಗೂ ಅದಕ್ಕೆ ತಾಗಿಕೊಂಡು ಒಂದು ಮರ ಅಪಾಯದ ಸ್ಥಿತಿಯಲ್ಲಿರುವುದು ನಿಜ. ಈ ಕುರಿತು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಕೋರಿಕೆಯ ಮೇರೆಗೆ ಇದೀಗ ಕಟ್ಟಡದ ಕೊಠಡಿಗಳನ್ನು ಕೆಡವಲು ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಿಂದ ಮಂಜೂರಾತಿ ಸಿಕ್ಕಿದ್ದು, ತತ್‌ಕ್ಷಣವೇ ಕ್ರಮ ಕೈಗೊಳ್ಳಲಾಗುವುದು.
 -ಜಯವಿಕ್ರಮ್‌ ಕಲ್ಲಾಪು, ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷ


ಟಾಪ್ ನ್ಯೂಸ್

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.