4 ತಾಲೂಕುಗಳಲ್ಲಿ ಅಡಿಕೆ ಕೃಷಿಕರಿಗೆ ಕೊಳೆರೋಗದ ಆತಂಕ

ತೇವಾಂಶ ಜಾಸ್ತಿಯಿರುವ ತೋಟಗಳಲ್ಲಿ ತೀವ್ರ ಬಾಧೆ ; ಮಳೆಯ ವೈಪರೀತ್ಯವೂ ಕಾರಣ

Team Udayavani, Jul 15, 2019, 5:28 AM IST

1407RJH3

ಕೊಳೆರೋಗ ಬಾಧೆಗೆ ಬಿದ್ದ ಅಡಿಕೆ ನಳ್ಳಿ. (ಸಾಂದರ್ಭಿಕ ಚಿತ್ರ)

ಪುತ್ತೂರು: ಮಳೆಯ ವೈಪರೀತ್ಯದಿಂದಲೋ ಎಂಬಂತೆ ಈ ಬಾರಿಯೂ ಅಡಿಕೆ ತೋಟಗಳಲ್ಲಿ ಕೊಳೆರೋಗ ಆತಂಕ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಹಲವು ಬೆಳೆಗಾರರು ಅಡಿಕೆ ತೋಟಕ್ಕೆ ಔಷಧ ಸಿಂಪಡಣೆ ಮಾಡಿದ್ದರೂ ಕೊಳೆ ರೋಗದ ಲಕ್ಷಣ ಗೋಚರಿಸಿದೆ.

ಈ ಬಾರಿ ಅಡಿಕೆ ನಳ್ಳಿ ಬೆಳೆಯುವ ಸಂದರ್ಭದಲ್ಲಿ ಮಳೆ ಕಡಿಮೆ ಇತ್ತು. ಈ ಕಾರಣದಿಂದ ಬಹುತೇಕ ರೈತರಿಗೆ ಬೋಡೋì ದ್ರಾವಣ ಸಿಂಪಡಿಸಲು ಸಮರ್ಪಕ ಕಾಲಾವಕಾಶವೂ ಲಭಿಸಿದೆ. ಆದರೂ ಸುಳ್ಯ, ಬಂಟ್ವಾಳ, ಪುತ್ತೂರು ಸೇರಿದಂತೆ ನದಿ ಸಮೀಪವಿರುವ ಅಡಿಕೆ ತೋಟಗಳಲ್ಲೇ ಕೊಳೆರೋಗ ಲಕ್ಷಣ ಗೋಚರವಾಗಿದೆ.

ಹನಿ ನೀರಾವರಿ ಪೂರೈಸಿದ ಅಡಿಕೆ ತೋಟ ಹಾಗೂ ಬೇಸಗೆಯಲ್ಲಿ ನೀರಿಲ್ಲದೆ ಬರಡಾಗಿದ್ದ ಅಡಿಕೆ ತೋಟಗಳಿಗೆ ಈ ಬಾಧೆ ತುಸು ಕಡಿಮೆಯಿದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ತೇವಾಂಶ ಉಳಿಸಿಕೊಂಡ ತೋಡು, ಹೊಳೆ ಬದಿಗಳಲ್ಲಿ ಇರುವ ಅಡಿಕೆ ಮರಗಳಿಗೆ ಕೊಳೆರೋಗ ಬಾಧೆ ಕಾಣಿಸಿಕೊಂಡಿದೆ.

ಮಳೆ ಹಾಗೂ ಬಿಸಿಲಿನ ಹೊಯ್ದಾಟವೂ ಇದಕ್ಕೆ ಕಾರಣ ಎನ್ನುವುದು ಬೆಳೆಗಾರರ ಅಭಿಪ್ರಾಯ.

ಕಳೆದ ವರ್ಷ ವಿಪರೀತವಿತ್ತು
ಕಳೆದ ವರ್ಷ ಜಿಲ್ಲೆಯಲ್ಲಿ ಅಡಿಕೆ ಕೊಳೆರೋಗದ ಬಾಧೆ ವಿಪರೀತವಾಗಿ ಕಾಣಿಸಿಕೊಂಡಿತ್ತು. ಕಂದಾಯ ಇಲಾಖೆ ನಡೆಸಿದ ಬೆಳೆ ಸರ್ವೆ ಆಧಾರದಂತೆ ಕಳೆದ ವರ್ಷ ಸುಳ್ಯದಲ್ಲಿ ಅತೀ ಹೆಚ್ಚು 8,762 ಎಕ್ರೆ, ಪುತ್ತೂರಿನ 6,021 ಎಕ್ರೆ ಪ್ರದೇಶ ಕೊಳೆರೋಗ ಬಾಧೆಗೊಳಗಾಗಿ ಶೇ. 60ರಷ್ಟು ಬೆಳೆ ನಾಶವಾಗಿತ್ತು. ಬಂಟ್ವಾಳದಲ್ಲಿ 3,674 ಹಾಗೂ ಬೆಳ್ತಂಗಡಿ 7,642 ಎಕ್ರೆ ಪ್ರದೇಶ ಕೊಳೆರೋಗ ಬಾಧೆಗೊಳಲಾಗಿ ಶೇ. 49ರಷ್ಟು ಬೆಳೆ ನಾಶವಾಗಿತ್ತು. ತೀವ್ರ ಮಳೆಯ ನಡುವೆಯೂ ಬೋಡೋì ದ್ರಾವಣವನ್ನು ಸಿಂಪಡಿಸಿದರೂ ಕೊಳೆ ರೋಗ ನಿಯಂತ್ರಣಕ್ಕೆ ತರಲು ಸಾಧ್ಯವಾಗಿರಲಿಲ್ಲ.

ಉತ್ತಮ ಇಳುವರಿಗೆ ಕೊಳೆರೋಗವೇ ಅಡ್ಡಿ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 51,101 ಹೆಕ್ಟೇರ್‌ ಪ್ರದೇಶದಲ್ಲಿ ಅಡಕೆ ಬೆಳೆಯಿದ್ದು, 66,324 ಮೆಟ್ರಿಕ್‌ ಟನ್‌ ವಾಡಿಕೆಯ ಅಡಿಕೆ ಇಳುವರಿಯಾಗುತ್ತದೆ. ಆದರೆ ಇತ್ತೀಚೆಗೆ ಶೇ. 25ರಿಂದ 30ರಷ್ಟು ಇಳುವರಿ ಕೊಳೆರೋಗಕ್ಕೆ ತುತ್ತಾಗುತ್ತಿದೆ. ಕಳೆದ ಬಾರಿಯಂತೂ ಶೇ. 45ಕ್ಕಿಂತ ಅಧಿಕ ಅಡಿಕೆ ಮರಗಳು ಕೊಳೆರೋಗಕ್ಕೆ ತುತ್ತಾಗಿವೆ. ಪರಿಣಾಮವಾಗಿ 59,033 ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗಿದೆ.

ಬೋಡೋì ಸಿಂಪಡಿಸಿ
ಬೇಸಗೆಯಲ್ಲಿ ಹೆಚ್ಚಿನ ಪ್ರಮಾಣದ ನೀರುಣಿಸಿದ ತೋಟಗಳಲ್ಲಿ ಕೊಳೆರೋಗ ಬಾಧೆ ಕಂಡುಬಂದಿದೆ. ಮಳೆಗಾಲದಲ್ಲಿ ಸೂರ್ಯನ ಶಾಖ ಕಡಿಮೆ ಪ್ರಮಾಣದಲ್ಲಿದ್ದು, ತೇವಾಂಶ ಹೆಚ್ಚಾಗಿ ಕೊಳೆರೋಗ ಬಾಧೆ ಅಧಿಕವಾಗುತ್ತದೆ. ಮಳೆಗಾಲದಲ್ಲಿ ಎರಡು ಮೂರು ಬಾರಿ ಅಡಿಕೆ ತೋಟಗಳಿಗೆ ಬೋಡೋì ದ್ರಾವಣ ಸಿಂಪಡಿಸುವುದು ಅಗತ್ಯ..
– ಎಚ್‌.ಆರ್‌. ನಾಯಕ್‌ ತೋಟಗಾರಿಕಾ ಇಲಾಖೆ ಉಪನಿರ್ದೇಶಕರು

ಸತತ ಪ್ರಯತ್ನ
ಕಳೆದ ಬಾರಿ ಅಡಿಕೆ ತೋಟಕ್ಕೆ ಬಾಧಿಸಿದ ಕೊಳೆರೋಗದ ಹೊಡೆತವನ್ನೇ ತಾಳಿಕೊಳ್ಳಲು ಸಾಧ್ಯವಾಗಿಲ್ಲ. ಈ ಬಾರಿಯೂ ಸಣ್ಣ ಪ್ರಮಾಣದಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಔಷಧ ಸಿಂಪಡಣೆಯ ಮೂಲಕ ರೋಗಬಾಧೆ ನಿಯಂತ್ರಣಕ್ಕೆ ಸತತ ಪ್ರಯತ್ನ ಪಡುತ್ತಿದ್ದೇವೆ.
– ಗಣೇಶ್‌
ಅಡಿಕೆ ಕೃಷಿಕರು, ಈಶ್ವರಮಂಗಲ

-ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.