ಮಂಗಳಾ ಕ್ರೀಡಾಂಗಣದ ಪೆವಿಲಿಯನ್ ಕಟ್ಟಡ ದುರಸ್ತಿ ಕಾಮಗಾರಿ ಆರಂಭ
ಮುಂದಿನ ಹಂತದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹೈಟೆಕ್ ಸ್ಪರ್ಶ
Team Udayavani, Jul 15, 2019, 5:00 AM IST
ಮಂಗಳಾ ಕ್ರೀಡಾಂಗಣದಲ್ಲಿ ದುರಸ್ತಿ ಕಾರ್ಯ ಆರಂಭಗೊಂಡಿರುವುದು.
ಮಹಾನಗರ: ಮಂಗಳಾ ಕ್ರೀಡಾಂಗಣದ ಪೆವಿಲಿಯನ್ ಕಟ್ಟಡವು ಸುಮಾರು 40 ವರ್ಷ ಹಳೆಯದಾಗಿದ್ದು, ಪೆವಿಲಿಯನ್ ಕಟ್ಟಡದ ಮೇಲ್ಫಾ ವಣಿಯು ಶಿಥಿಲಗೊಂಡಿರುವುದರಿಂದ ಕ್ರೀಡಾಭ್ಯಾಸ ಮಾಡುವುದನ್ನು ನಿಷೇಧಿಸಲಾಗಿತ್ತು. ಇದೀಗ ದುರಸ್ತಿ ಕಾಮಗಾರಿ ಆರಂಭವಾಗಿದೆ.
ಕ್ರೀಡಾಂಗಣದ ಪೆವಿಲಿಯನ್ ಕಟ್ಟಡದ ಮೇಲ್ಫಾ ವಣಿಯ ಸಿಮೆಂಟ್, ಸ್ಲಾಬ್ನ ತುಂಡುಗಳು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಕ್ರೀಡಾಭ್ಯಾಸಕ್ಕೆ ಬರುವ ಕ್ರೀಡಾಪಟುಗಳ ಹೆತ್ತವರು ಕುಳಿತುಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಭೆ ಕರೆಯಿತು ಪೆವಿಲಿಯನ್ ಕಟ್ಟಡದ ದುರಸ್ತಿ ಕಾರ್ಯ ಮಾಡುವಂತೆ ಸೂಚಿಸಿದ್ದರು. ಹಾಗಾಗಿ ದ.ಕ. ಜಿಲ್ಲಾ ಪಂಚಾಯತ್ನ ಕ್ರೀಡಾಂಗಣ ನಿರ್ವಹಣಾ ಸಮಿತಿಯಿಂದ ಒಟ್ಟು 11 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಪೆವಿಲಿಯನ್ನ ಬಹುತೇಕ ದುರಸ್ತಿ ಕೆಲಸಗಳು ನಡೆಯಲಿದೆ. ಆ ಮೂಲಕ ಕ್ರೀಡಾಪಟುಗಳಿಗೆ ಇನ್ನೂ ಕೆಲವೇ ದಿನಗಳಲ್ಲಿ ಸುರಕ್ಷಿತ ಪೆವಿಲಿಯನ್ ಸಿಗಲಿದೆ.
ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ
ಸದ್ಯ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳು, ಕ್ರೀಡಾಳುಗಳ ಅಭ್ಯಾಸ ಪ್ರಕ್ರಿಯೆಗಳು ಎಂದಿನಂತೆ ನಡೆಯುತ್ತಿವೆ. ಆದರೆ ಅವರ ಹೆತ್ತವರು ಅಥವಾ ಇತರರು ಪೆವಿಲಿಯನ್ನಲ್ಲಿ ಕುಳಿತುಕೊಂಡು ಅಭ್ಯಾಸ ವೀಕ್ಷಿಸುತ್ತಾರೆ. ಕ್ರೀಡಾಂಗಣದ ಪೆವಿಲಿಯನ್ ಹಳೆ ಕಟ್ಟಡವಾದ್ದರಿಂದ ಪ್ರಸ್ತುತ ಸಿಮೆಂಟ್, ಸ್ಲಾಬ್ ತುಂಡುಗಳು ಬೀಳುತ್ತಿವೆ. ಇದಕ್ಕಾಗಿ ತಾತ್ಕಾಲಿಕ ದುರಸ್ತಿ ಕೆಲಸ ಮಾಡಲಾಗುತ್ತಿದೆ. ಈ ನಡುವೆ ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಸುಮಾರು 10 ಕೋ.ರೂ. ವೆಚ್ಚದಲ್ಲಿ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯಾಗಲಿದೆ. ಇದಕ್ಕಾಗಿ ಯೋಜನೆ ರೂಪುಗೊಳ್ಳುತ್ತಿದ್ದು, ಕೆಲವೇ ದಿನಗಳಲ್ಲಿ ಯೋಜನೆ ಅಂತಿಮಗೊಳ್ಳಲಿದೆ ಎಂದು ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ