ಭರ್ಜರಿ ಮಳೆ-ನೀರಿನ ಹೊಳೆ!

ರಸ್ತೆ ಮೇಲೆಲ್ಲ ಹರಿದ ಚರಂಡಿ ನೀರು•ಸವಾರರ ಪರದಾಟ-ಟ್ರಾಫಿಕ್‌ ಜಾಮ್‌

Team Udayavani, Jul 15, 2019, 10:10 AM IST

15-July-3

ದಾವಣಗೆರೆ: ಶೇಖರಪ್ಪ ನಗರದ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಂತಿರುವುದು.

ದಾವಣಗೆರೆ: ಭಾನುವಾರ ಸಂಜೆ ಸುರಿದ ಭಾರೀ ಮಳೆಗೆ ಸ್ಮಾರ್ಟ್‌ಸಿಟಿ, ಜಿಲ್ಲಾ ಕೇಂದ್ರ ದಾವಣಗೆರೆ ಅಕ್ಷರಶಃ ತೊಯ್ದು ಹೋಯಿತು.

ಪೂರ್ವ ಮುಂಗಾರು ನಂತರದ ಮುಂಗಾರು ಹಂಗಾಮು ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಒಂದೇ ಸಮನೆ ಸುರಿದ ಮಳೆಯಿಂದ ತಗ್ಗು ಪ್ರದೇಶದ ಜನರು ತೀವ್ರ ತೊಂದರೆ ಅನುಭವಿಸಿದರು.

ಉತ್ತಮ ಮಳೆಯ ಕಾರಣ ರಸ್ತೆಗಳಲ್ಲಿ ನೀರು ನಿಂತಿತ್ತು. ರಸ್ತೆಯಲ್ಲಿ ನೀರಿದಿಯೋ ಅಥವಾ ನೀರಿನಲ್ಲೇ ರಸ್ತೆ ಇದೆಯೋ ಎನ್ನುವಂತೆ ಅನೇಕ ಕಡೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದ ಕಾರಣಕ್ಕೆ ದ್ವಿಚಕ್ರ ವಾಹನ, ಆಟೋ ರಿಕ್ಷಾ ಸವಾರರು, ಪಾದಚಾರಿಗಳು ಇನ್ನಿಲ್ಲದ ಸಮಸ್ಯೆಗೀಡಾದರು.

ಮಹಾನಗರ ಪಾಲಿಕೆ ಮುಂದಿನ ರೈಲ್ವೆ ಕೆಳ ಸೇತುವೆ, ಶೇಖರಪ್ಪ ನಗರದ ಅಂಡರ್‌ ಬ್ರಿಡ್ಜ್… ಮುಂತಾದ ಕಡೆ ಭಾರೀ ಪ್ರಮಾಣದಲ್ಲಿ ರಭಸವಾಗಿ ನೀರು ಹರಿದು ಬರುತ್ತಿದ್ದ ಕಾರಣಕ್ಕೆ ಒಂದು ಕಡೆಯಿಂದ ಮತ್ತೂಂದು ಕಡೆ ಸಾಗಲು ಹೆಣಗಾಡಬೇಕಾಯಿತು.

ಅಶೋಕ ಚಿತ್ರಮಂದಿದರ ಬಳಿ ಸಣ್ಣ ಮಳೆ ಬಂದರೂ ಹಳ್ಳದಂತೆ ನೀರು ನಿಲ್ಲುವುದು ಸಾಮಾನ್ಯ. ಭಾನುವಾರದ ಮಳೆಗೆ ದೊಡ್ಡ ಹಳ್ಳದಂತೆ ನೀರು ನಿಂತ ಪರಿಣಾಮ ಸಾರ್ವಜನಿಕರು, ವಾಹನಗಳ ಸವಾರರು ಅಕ್ಷರಶಃ ಪರದಾಡಿದರು. ಸುರಿಯುವ ಮಳೆಯಲ್ಲೇ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ ಆಗಿತ್ತು.

ಎಸ್‌ಪಿಎಸ್‌ ನಗರ, ಶಿವ ನಗರ… ಮುಂತಾದ ಕಡೆಯಲ್ಲಿನ ತಗ್ಗು ಪ್ರದೇಶಗಳಲ್ಲಿನ ಮನೆಗೆ ಏಕಾಏಕಿ ನೀರು ನುಗ್ಗಿದ್ದು ಜನರು ತೊಂದರೆ ಅನುಭವಿಸುವಂತಾಯಿತು. ಮಳೆಯಿಂದ ಮಿನಿ ಕೆರೆಯಂತಾಗುವ ಸಾರಿಗೆ ಬಸ್‌ ನಿಲ್ದಾಣದಲ್ಲಿ ಸಾಕಷ್ಟು ಪ್ರಮಾಣದ ನೀರು ನಿಂತಿದ್ದರಿಂದ ಪ್ರಯಾಣಿಕರು ಬಸ್‌ ಹತ್ತಲು ಮತ್ತು ಇಳಿದು ತಮ್ಮ ಪ್ರದೇಶಕ್ಕೆ ತೆರಳಲು ಪ್ರಯಾಸ ಪಡಬೇಕಾಯಿತು.

ಕಳೆದ ಅನೇಕ ವರ್ಷದಿಂದ ಸಣ್ಣ ಮಳೆಗೂ ಸಹ ದಾವಣಗೆರೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಆಗುವ ಉದಾಹರಣೆ ಸಾಕಷ್ಟು ಇವೆ. ಪ್ರತಿ ಮಳೆಗಾಲದಲ್ಲೂ ಸಮಸ್ಯೆ ಬಗೆ ಹರಿಸುವ ಭರಪೂರ ಭರವಸೆ ನೀಡಲಾಗುತ್ತದೆ. ಆದರೆ, ಅದು ಕಾರ್ಯರೂಪಕ್ಕೆ ಬರುವುದಿಲ್ಲ. ಭರವಸೆಗಳು ಸಹ ಮಳೆಯ ನೀರಿನಲ್ಲೇ ಕೊಚ್ವಿ ಕೊಂಡು ಹೋಗುತ್ತವೆ…. ಎಂಬ ಸಾರ್ವಜನಿಕರ ದೂರು ಸತ್ಯ ಎಂಬುದಕ್ಕೆ ಅನೇಕ ಕಡೆ ಸಮಸ್ಯೆ ಉಂಟಾಗಿದ್ದೇ ಸಾಕ್ಷಿ.

ಈಗಲೇ ಎಚ್ಚೆತ್ತುಕೊಂಡು ಮಳೆಯಿಂದ ಸಮಸ್ಯೆ ಎದುರಾಗುವ ಪ್ರದೇಶಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಂಡಲ್ಲಿ ಜನರು ತೊಂದರೆ ಅನುಭವಿಸುವುದು ತಪ್ಪುತ್ತದೆ. ಈ ನಿಟ್ಟಿನಲ್ಲಿ ಸಂಬಂಧಿತರು ಗಮನ ಹರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.