ಸರ್ಕಾರಿ ಶಾಲೆ ಸ್ಥಿತಿ ದೇವರಿಗೇ ಪ್ರೀತಿ

•30 ಸಾವಿರ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ಸಮವಸ್ತ್ರ•21,96,171 ಮಕ್ಕಳಿಗೆ ಸಮವಸ್ತ್ರದ ಬೇಡಿಕೆ

Team Udayavani, Jul 15, 2019, 10:39 AM IST

kopala-tdy-1..

ಕೊಪ್ಪಳ: ಶಾಲಾ ಸಮವಸ್ತ್ರದ ಸಾಂದರ್ಭಿಕ ಚಿತ್ರ.

ಕೊಪ್ಪಳ: ಸರ್ಕಾರಿ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿ ತಿಂಗಳು ಪೂರೈಸಿದೆ. ಆದರೆ ರಾಜ್ಯ ಶಿಕ್ಷಣ ಇಲಾಖೆ ಜಿಲ್ಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸಮವಸ್ತ್ರ ಪೂರೈಸಿಲ್ಲ. ಜಿಲ್ಲೆಯ 30,694 ವಿದ್ಯಾರ್ಥಿಗಳಿಗೆ ಸಮವಸ್ತ್ರದ ಕೊರತೆಯಾಗಿದ್ದು, ಹಂತ ಹಂತವಾಗಿ ಪೂರೈಕೆಯಾಗಲಿವೆ ಎನ್ನುವ ಮಾತು ಇಲಾಖೆಯಲ್ಲಿ ಕೇಳಿ ಬಂದಿವೆ.

ರಾಜ್ಯ ಸರ್ಕಾರವು ಪ್ರತಿ ಮಗು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಮಕ್ಕಳು ಸರ್ಕಾರಿ ಶಾಲೆಗಳತ್ತ ಮುಖ ಮಾಡಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳೂ ಶಾಲೆಗೆ ಪ್ರವೇಶಾತಿ ಪಡೆದು ಶಿಕ್ಷಣದ ಬಗ್ಗೆ ಕಾಳಜಿ ತೋರಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಪ್ರಾಥಮಿಕ ಹಂತದಲ್ಲಿ ಹಲವು ಯೋಜನೆ ಜಾರಿ ಮಾಡುತ್ತಿದೆ. ಆ ಯೋಜನೆಗಳಲ್ಲಿ ಸಮವಸ್ತ್ರಗಳ ಪೂರೈಕೆಯೂ ಒಂದಾಗಿದೆ.

ವಿಶೇಷವಾಗಿ, ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಪಾಲಕರಿಗೆ ಆರ್ಥಿಕ ತೊಂದರೆ ಇರುತ್ತೆ. ಕೆಲವೊಂದು ಸಂದರ್ಭದಲ್ಲಿ ಸಕಾಲಕ್ಕೆ ಮಕ್ಕಳಿಗೆ ಸಮವಸ್ತ್ರ ಕೊಡಿಸಲು ಆಗುವುದಿಲ್ಲ. ಈ ಹಿಂಜರಿಕೆಯಿಂದ ಮಕ್ಕಳು ಶಾಲೆ ಬಿಡುವ ಪರಿಸ್ಥಿತಿ ಎದುರಾಗುತ್ತಿವೆ. ಇನ್ನೂ ಶಾಲೆಗಳಲ್ಲಿ ಶ್ರೀಮಂತ ಮಕ್ಕಳು ಉತ್ತಮ ಬಟ್ಟೆ ಧರಿಸಿದ್ದರೆ, ಬಡ ಮಕ್ಕಳಿಗೆ ಬಟ್ಟೆಗಳ ಕೊರತೆ ಇರುವುದನ್ನು ಅವಲೋಕಿಸಿ ಸರ್ಕಾರವು ಶಾಲೆಗಳಲ್ಲಿ ಪ್ರತಿಯೊಬ್ಬರಿಗೂ ಸಮವಸ್ತ್ರ ಕೊಡಲು ನಿರ್ಧರಿಸಿ ಈ ಯೋಜನೆ ಆರಂಭಿಸಿದೆ. ಯೋಜನೆಯ ಉದ್ದೇಶವೇನೋ ಉತ್ತಮವಾಗಿದೆ. ಆದರೆ ಸಕಾಲಕ್ಕೆ ಮಕ್ಕಳಿಗೆ ಸಮವಸ್ತ್ರ ತಲುಪಿಲ್ಲ ಎನ್ನುವುದೇ ಬೇಸರದ ಸಂಗತಿ.

ಪ್ರಸಕ್ತ ವರ್ಷ ಜಿಲ್ಲೆಯ 1,96,171 ವಿದ್ಯಾರ್ಥಿಗಳಿಗೆ ರಾಜ್ಯ ಇಲಾಖೆಯು ಸಮವಸ್ತ್ರ ಪೂರೈಕೆ ಮಾಡಬೇಕಿತ್ತು. ಆದರೆ ಕೊಪ್ಪಳ ತಾಲೂಕಿಗೆ 41,809, ಕುಷ್ಟಗಿ ತಾಲೂಕಿಗೆ 42,099, ಗಂಗಾವತಿ ತಾಲೂಕಿಗೆ 46,050 ಹಾಗೂ ಯಲಬುರ್ಗಾ ತಾಲೂಕಿಗೆ 35,519 ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ಪೂರೈಕೆ ಮಾಡಿದೆ. ಇನ್ನೂ ಜಿಲ್ಲಾದ್ಯಂತ 30,694 ವಿದ್ಯಾರ್ಥಿಗಳಿಗೆ ಇಲಾಖೆ ಸಮವಸ್ತ್ರ ಪೂರೈಸಿಲ್ಲ.

ಸಮವಸ್ತ್ರಗಳ ಪೂರೈಕೆಯ ಕುರಿತು ಸರ್ಕಾರವು ವಿದ್ಯಾರ್ಥಿಗಳ ಹಾಜರಾತಿಗೆ ಅನುಗುಣವಾಗಿ ಪೂರೈಕೆಯಾಗಲಿದೆ. ನಿಯಮದ ಪ್ರಕಾರ, ಶಾಲಾ ಆರಂಭದ ದಿನದಂದೇ ಕೊಡಬೇಕು ಎಂದು ಹೇಳುತ್ತದೆ. ಆದರೆ ಕೆಲ ತೊಂದರೆಯಿಂದ ಸಕಾಲಕ್ಕೆ ಪೂರೈಕೆ ಮಾಡಲು ಆಗುತ್ತಿಲ್ಲ. ನಮ್ಮ ಮಕ್ಕಳ ದಾಖಲಾತಿ ರಾಜ್ಯ ಇಲಾಖೆಯಲ್ಲಿ ಇರುತ್ತೆ. ರಾಜ್ಯ ಮಟ್ಟದಲ್ಲಿ ಏಕಕಾಲಕ್ಕೆ ಪೂರೈಕೆಯಾಗಬೇಕಾಗಿರುವುದರಿಂದ ಕೆಲವಿ ಬಾರಿ ವಿಳಂಬವಾಗಲಿದೆ. ಹಂತ ಹಂತವಾಗಿ ಮಗುವಿಗೆ ಸಮವಸ್ತ್ರ ಪೂರೈಕೆಯಾಗಲಿದೆ. ಇದರಲ್ಲಿ ಯಾವುದೇ ತೊಂದರೆಯಾಗಲ್ಲ. ಸಮವಸ್ತ್ರ ಕೊರತೆ ಇರುವ ಎಲ್ಲ ಶಾಲೆಗಳಿಗೂ ಪೂರೈಕೆಯಾಗಲಿದೆ ಎನ್ನುವ ಮಾತನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಶಿಕ್ಷಣ ಇಲಾಖೆ ನಿಯಮದ ಪ್ರಕಾರ ಶಾಲೆಗಳು ಮೇ 29ರಿಂದಲೇ ಆರಂಭವಾಗುತ್ತವೆ. ಶಾಲೆ ಆರಂಭವಾದ ದಿನದಂದೇ ಮಕ್ಕಳಿಗೆ ಸಮವಸ್ತ್ರ ಪೂರೈಕೆ ಮಾಡಬೇಕು ಎಂಬ ನಿಯಮ ಇದೆ. ಜೊತೆಗೆ ಶಿಕ್ಷಣ ಇಲಾಖೆಯು ಮೇ 29ರೊಳಗಾಗಿ ರಜಾ ದಿನಗಳಲ್ಲಿಯೇ ಆಯಾ ಶಾಲೆಗಳಿಗೆ ಸಮವಸ್ತ್ರ ಪೂರೈಕೆ ಮಾಡಬೇಕೆಂಬ ಕಟ್ಟುನಿಟ್ಟಿನ ನಿಯಮವಿದೆ. ಆದರೆ ಟೆಂಡರ್‌ ಪಡೆಯುವ ಕಂಪನಿಗಳು ಸಕಾಲಕ್ಕೆ ಸಮವಸ್ತ್ರ ಪೂರೈಸಲ್ಲ ಎನ್ನುವ ಆಪಾದನೆಯೂ ಇದೆ. ಶಾಲೆ ಆರಂಭದ ದಿನದಂದೇ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಮಾಡಿದರೆ ಆ ಮಗು ಸಮವಸ್ತ್ರವನ್ನು ಸಿದ್ಧಪಡಿಸಿಕೊಂಡು ಶಾಲೆಗೆ ಧರಿಸಿಕೊಂಡು ಬರಬೇಕು. ಆದರೆ ಸರ್ಕಾರವೇ ಈ ರೀತಿ ನಿಧಾನಗತಿ ಮಾಡಿದರೆ ಮಕ್ಕಳಿಗೆ ತೊಂದರೆಯಾಗಲಿದೆ ಎನ್ನುವ ಬೇಸರದ ಮಾತು ಪಾಲಕರಲ್ಲಿ ಕೇಳಿ ಬಂದಿದೆ. ಸರ್ಕಾರ ಇಂತಹ ಸೂಕ್ಷ್ಮತೆಗಳನ್ನು ಅರಿತು ಸಕಾಲಕ್ಕೆ ಮಕ್ಕಳಿಗೆ ಸಮವಸ್ತ್ರ ಸೇರಿ ಅಗತ್ಯ ಸಾಮಗ್ರಿ ಪೂರೈಕೆಗೆ ಕ್ರಮವಹಿಸಬೇಕಿದೆ.
•ದತ್ತು ಕಮ್ಮಾರ

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.