ಈ ಆಸ್ಪತ್ರೆ ಬಾಗಿಲು ತೆರೆದಿದ್ದು ಎರಡೇ ತಿಂಗಳು!

•ಬರಲೇ ಇಲ್ಲ ವೈದ್ಯರು•39 ಲಕ್ಷ ರೂ. ನೀರಲ್ಲಿ ಹೋಮ•ತಗ್ಗದ ಡಿಗ್ಗಿ ಗೋಳು

Team Udayavani, Jul 15, 2019, 11:01 AM IST

uk-tdy-1..

ಕಾರವಾರ: ಜೊಯಿಡಾ ತಾಲೂಕಿನ ಬಜಾರಕೊಣಂಗ ಗ್ರಾಪಂ ವ್ಯಾಪ್ತಿಯಲ್ಲಿ ಸರ್ಕಾರ ಒಂದು ಆಸ್ಪತ್ರೆ ಕಟ್ಟಿ 14 ವರ್ಷಗಳು ಕಳೆಯಿತು. ಆದರೆ ಆಸ್ಪತ್ರೆ ತೆರೆದದ್ದು ಮಾತ್ರ ಕೇವಲ ಎರಡು ತಿಂಗಳು!

ಹೌದು, ಇದು ವಿಚಿತ್ರ ಎನಿಸಿದರೂ ಸತ್ಯ. ಜಿಲ್ಲೆಯ ಅತ್ಯಂತ ಸಂಪದ್ಭರಿತ ತಾಲೂಕು ಜೋಯಿಡಾ. ರಾಜ್ಯಕ್ಕೆ ವಿದ್ಯುತ್‌ ನೀಡಿದ ಈ ತಾಲೂಕಿನ ಅತ್ಯಂತ ಕುಗ್ರಾಮವೇ ಡಿಗ್ಗಿ. ಬ್ರಿಟಿಷರ ಕಾಲದಲ್ಲೇ ಮೈನಿಂಗ್‌ ವಲಯವಾಗಿದ್ದ ಡಿಗ್ಗಿ ಮ್ಯಾಂಗನೀಸ್‌ ಗಣಿಗಾರಿಕೆಗೆ ಹೆಸರುವಾಸಿಯಾಗಿತ್ತು. ಈಗಲೂ ಗಣಿಗಾರಿಕೆಯ ಅವಶೇಷಗಳು ಡಿಗ್ಗಿ ಗ್ರಾಮದ ಸುತ್ತಮುತ್ತ ಉಳಿದಿವೆ. ಅದಿರು ಮತ್ತು ಅರಣ್ಯ ಸಂಪತ್ತಿನ ಡಿಗ್ಗಿ ಗ್ರಾಮ ರಸ್ತೆ, ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯ ಸೇರಿದಂತೆ ಮೂಲಸೌಕರ್ಯಗಳೇ ಇಲ್ಲದ ಅತ್ಯಂತ ಬಡ ಗ್ರಾಮ. ಇಲ್ಲಿ ವೈದ್ಯರು, ಶಿಕ್ಷಕರು ಉಳಿಯಲಾರರು. ಬ್ರಿಟಿಷರ ಕಾಲದಲ್ಲಿದ್ದ ದಟ್ಟ ಅರಣ್ಯ, ಅದಿರು ಸಂಪತ್ತು, ಮೈದುಂಬಿ ಹರಿಯುವ ಕಾಳಿ ನದಿ, ಸ್ವಚ್ಛಂದವಾಗಿ ಓಡಾಡುವ ಕಾಡು ಪ್ರಾಣಿಗಳ ಕಾರಣವಾಗಿ ನಾಗರಿಕ ಜಗತ್ತಿನಿಂದ ಹೋದ ಸರ್ಕಾರಿ ನೌಕರರು ಡಿಗ್ಗಿಯಲ್ಲಂತೂ ಉಳಿಯಲಾರರು.

ಮಳೆಗಾಲದಲ್ಲಂತೂ ಡಿಗ್ಗಿ ಕಾಳಿ ನದಿಯ ಅಬ್ಬರದಿಂದ ದ್ವೀಪವಾಗುತ್ತದೆ. ಮಳೆಗಾಲದಲ್ಲಿ ಡಿಗ್ಗಿ ಹಾಗೂ ಇತರ ಗ್ರಾಮಗಳ ಜನರ ಕಷ್ಟಗಳು ಇಮ್ಮಡಿಸುತ್ತವೆ. ರಸ್ತೆ, ವಿದ್ಯುತ್‌ ದೀಪ, ಶಾಲೆ, ಆಸ್ಪತ್ರೆ ಇಲ್ಲದೇ ಜನ ಸ್ವತಂತ್ರ ಭಾರತದಲ್ಲಿ ಸಹ ಜೀವನ ಕಳೆದರು. 24 ಚಿಕ್ಕ ಚಿಕ್ಕ ಹಳ್ಳಿಗಳು ಸೇರಿ 4000 ಜನಸಂಖ್ಯೆ ಇರುವ ಬಜಾರಕೊಣಂಗ ಗ್ರಾಪಂ ಆರೋಗ್ಯ ಸೌಲಭ್ಯದಿಂದ ವಂಚಿತವಾಗಿಯೇ ಇತ್ತು. ಅನಾರೋಗ್ಯಕ್ಕೆ ತುತ್ತಾದವರನ್ನು ಕಂಬಳಿಯಲ್ಲಿ ಹೊತ್ತು 10 ಕಿಮೀ ನಡೆದು ಕಾಳಿ ನದಿ ದಾಟಿ ನಂತರ 48 ಕಿಮೀ ಸಾಗಿ ದಾಂಡೇಲಿ ತಲುಪಿ ಚಿಕಿತ್ಸೆ ಪಡೆಯುವ ಸನ್ನಿವೇಶ ಇತ್ತು. ಇಲ್ಲಿನ 24 ಹಳ್ಳಿಗಳ ಜನರು ಆರೋಗ್ಯ ಸೌಲಭ್ಯಕ್ಕಾಗಿ ಜೋಯಿಡಾ, ದಾಂಡೇಲಿ ಇಲ್ಲವೇ ಪಕ್ಕದ ಗೋವಾ ರಾಜ್ಯವನ್ನು ಅವಲಂಬಿಸಿದ್ದರು.

ಆರೋಗ್ಯ ಇಲಾಖೆ ಅಳಲು: ವೈದ್ಯರು ನೌಕರಿಯನ್ನಾದರೂ ಬಿಟ್ಟಾರು, ಸೌಕರ್ಯಗಳಿಲ್ಲದ ಡಿಗ್ಗಿಗೆ ಹೋಗಲು ಹಿಂಜರಿಯುತ್ತಾರೆ. ಜೋಯಿಡಾದಂಥ ತಾಲೂಕು ಕೇಂದ್ರಗಳಲ್ಲಿ ಸಹ ವೈದ್ಯರು ಉಳಿಯದೇ, ದಾಂಡೇಲಿಯಿಂದ ಟ್ರಾವೆಲಿಂಗ್‌ ಮಾಡುತ್ತಿದ್ದಾರೆ. ವೈದ್ಯರನ್ನು ಹೆಚ್ಚು ಒತ್ತಾಯ ಮಾಡುವಂತಿಲ್ಲ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯ ಅಂಬೋಣ. ಹಾಗಾಗಿ ನಾವು ಎನ್‌ಜಿಒಗಳ ಸಂಚಾರಿ ಆಸ್ಪತ್ರೆಯನ್ನು ಜೋಯಿಡಾ ತಾಲೂಕಿನ ಕುಗ್ರಾಮಗಳಿಗೆ ಕಳಿಸುತ್ತೇವೆ ಎನ್ನುತ್ತಿದ್ದಾರೆ.
ಅಂತೂ ಬಂತು ಆಸ್ಪತ್ರೆ: ಆಸ್ಪತ್ರೆ ಬೇಕು ಎಂಬ ಹೋರಾಟವನ್ನು ಜನರು ಪ್ರಾರಂಭಿಸಿದರು. ಸುದೀರ್ಘ‌ ಹೋರಾಟದ ನಂತರ 2005ರಲ್ಲಿ 34 ಲಕ್ಷ ವೆಚ್ಚ ಮಾಡಿ ಸರ್ಕಾರ ಕಟ್ಟಿದ ಆಸ್ಪತ್ರೆ ನಡೆದದ್ದು ಮಾತ್ರ 2 ತಿಂಗಳು. ವೈದ್ಯರು ಬಾರದೇ ಆಸ್ಪತ್ರೆ ಪಾಳು ಬಿತ್ತು. ನಂತರ ಜನರ ಒತ್ತಾಯದ ಮೇರೆಗೆ ಆಸ್ಪತ್ರೆಯನ್ನು 5 ಲಕ್ಷದಲ್ಲಿ ನವೀಕರಿಸಲಾಯಿತು. ನವೀಕರಿಸಿದ ನಂತರ ಒಬ್ಬ ವೈದ್ಯರು ಎರಡು ತಿಂಗಳು ಆಸ್ಪತ್ರೆಗೆ ಬಂದರು. ಆದರೆ ಅರಣ್ಯದ ವಾತಾವರಣಕ್ಕೆ ಒಗ್ಗಿಕೊಳ್ಳಲಾಗದೆ ಅವರು ಸಹ ಕೆಲಸ ಬಿಟ್ಟು ನಡೆದರು. ಅಲ್ಲಿಂದ ಆಸ್ಪತ್ರೆ ಸ್ಥಿತಿ ಅಧೋಗತಿಯಾಯಿತು. ಸಾರ್ವಜನಿಕರ ತೆರಿಗೆ ಹಣವೂ ನೀರಲ್ಲಿ ತೊಳೆದಂತಾಯಿತು.
ಹುಲಿ ಸಂರಕ್ಷಿತ ಪ್ರದೇಶ: ಜೋಯಿಡಾ, ಅಣಶಿ, ಕುಳಗಿ ಸೇರಿದಂತೆ ಡಿಗ್ಗಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬರುವ ಕಾರಣ ಅರಣ್ಯ ಇಲಾಖೆ ಇಲ್ಲಿ ರಸ್ತೆ, ಸೇತುವೆ ಮಾಡಲು ಸಹ ಅಡ್ಡಿ ಪಡಿಸುತ್ತಿದೆ. ವಿದ್ಯುತ್‌ ಮಾರ್ಗ ಎಳೆಯಲು ಸಹ ಅಡ್ಡಿ ಮಾಡುತ್ತಿದೆ. ಹಾಗಾಗಿ ಇಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡಲು ತೊಂದರೆಯಾಗುತ್ತಿದೆ. ಹಾಗಾಗಿ ಡಿಗ್ಗಿ ಎಂಬ ಗ್ರಾಮ, ಬಜಾರ್‌ಕೊಣಂಗ ಪಂಚಾಯತ ನಾಗರಿಕ ಪ್ರಪಂಚದಿಂದ ಹೊರಗೆ ಉಳಿದಿದೆ. ಈಗಲೂ ಇಲ್ಲಿನ ಸಾರ್ವಜನಿಕರು ಆರೋಗ್ಯ, ಶಿಕ್ಷಣ, ರಸ್ತೆ, ವಿದ್ಯುತ್‌ ಸೌಕರ್ಯಗಳನ್ನು ನೀಡಿ ಎಂದು ಆಗ್ರಹಿಸುತ್ತಲೇ ಇದ್ದಾರೆ.

ಮಳೆಗಾಲದಲ್ಲಿ ಡಿಗ್ಗಿ ಹಾಗೂ ಅದರ ಸುತ್ತಲ ಸಣ್ಣ ಸಣ್ಣ ಗ್ರಾಮಗಳ ಜನರ ಕಷ್ಟ ಹೇಳತೀರದ್ದು. ನಮ್ಮ ಬವಣೆ ಸ್ವಾತಂತ್ರ್ಯ ಬಂದು ಏಳು ದಶಕಗಳು ದಾಟಿದರೂ ಮುಗಿದಿಲ್ಲ. ಇನ್ನಾದರೂ ಸರ್ಕಾರ ಡಿಗ್ಗಿ ಗ್ರಾಮದತ್ತ ಕಣ್ತೆರೆದು ನೋಡಬೇಕು.•ಅಜಿತ್‌ ಮಿರಾಶಿ, ಉಪಾಧ್ಯಕ್ಷ, ಬಜಾರ ಕೊಣಂಗ್‌ ಗ್ರಾಪಂ

 

•ನಾಗರಾಜ ಹರಪನಹಳ್ಳಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.