ಶಾಲಾ ಆವರಣದಲ್ಲಿ 5 ಸಾವಿರ ಸಸಿ ಬೆಳೆಸುವ ಗುರಿ


Team Udayavani, Jul 15, 2019, 12:14 PM IST

mandya-tdy-1..

ಕೆ.ಆರ್‌.ಪೇಟೆ ತಾಲೂಕಿನ ಶೆಟ್ಟಿನಾಯಕನಕೊಪ್ಪಲು ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಹೊರನೋಟ.

ಕೆ.ಆರ್‌.ಪೇಟೆ: ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿರುವ ಹೆಣ್ಣುಮಕ್ಕಳಿಗೆ ಪಾಠದ ಜೊತೆಯಲ್ಲಿ ಪರಿಸರ ಸಂರಕ್ಷಣೆ ಅರಿವು ಮೂಡಿಸಿ ಎರಡೇ ವರ್ಷದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಸಸಿ ನೆಟ್ಟು ಬೆಳೆಸುವ ಮೂಲಕ ಇತರೆ ಶಾಲೆಗಳಿಗೂ ಮಾದರಿಯಾಗಿದ್ದಾರೆ.

ತಾಲೂಕಿನ ಶೆಟ್ಟಿನಾಯಕನಕೊಪ್ಪಲು ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 250 ಹೆಣ್ಣು ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಪರಿಸರ, ವೃಕ್ಷ ಸಂರಕ್ಷಣೆ ಕುರಿತು ಪ್ರಾಯೋಗಿ ಕವಾಗಿ ಬೋಧಿಸಲಾಗುತ್ತಿದೆ. ಒಂದು ಮಗುವಿಗೆ ಕನಿಷ್ಟ 4 ಸಸಿ ನೆಟ್ಟು ಪೋಷಣೆ ಮಾಡುವ ಜವಾಬ್ದಾರಿ ನೀಡಲಾಗಿದೆ. ಮಕ್ಕಳು ಅವರವರ ಸಸಿಗಳನ್ನು ಒಬ್ಬರಿಗಿಂತ ಒಬ್ಬರು ಕಾಳಜಿಯಿಂದ ಬೆಳೆಸುವ ಜವಾಬ್ದಾರಿ ಹೊತ್ತಿದ್ದಾರೆ.

ಸಾವಯವ ಗೊಬ್ಬರ: ಇಲ್ಲಿ ಮತ್ತೂಂದು ವಿಶೇಷವೆಂದರೆ ಮಕ್ಕಳು ಸಸಿಗಳಿಗೆ ಸಾವಯವ ಗೊಬ್ಬರವನ್ನೇ ಹಾಕುತ್ತಿರುವುದು ಗಮನಾರ್ಹ. ಜೊತೆಗೆ ಪ್ರತಿದಿನ ನೀರನ್ನು ಹಾಕಿ ಅತೀವ ಕಾಳಜಿ ವಹಿಸಿದ್ದು ಶಾಲಾ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ. ಎಲ್ಲಾ ಮಕ್ಕಳು ಶಾಲೆಯಲ್ಲಿಯೇ ವಾಸ್ತವ್ಯ ಇದ್ದು ಬೆಳಗ್ಗೆ ಎದ್ದ ತಕ್ಷಣ ಸಸಿಗಳ ಪೋಷಣೆಗೆಂದೇ 30 ನಿಮಿಷ ಮೀಸಲಿಡುತ್ತಾರೆ.

ಹಣ್ಣು, ತರಕಾರಿ, ಹೂವು: 10 ಎಕರೆ ವಿಶಾಲವಾದ ಮೈದಾನದಲ್ಲಿ ಹೊಂಗೆ, ಬಾದಾಮಿ, ಅರಳಿ, ಮಾವು ಸೇರಿ ನೇರಳೆ ಹಣ್ಣಿನ 1500 ಸಸಿಗಳ ಜೊತೆಯಲ್ಲಿ ಪ್ರತಿದಿನ ಶಾಲೆಯಲ್ಲಿ ಅಡುಗೆಗೆ ಅಗತ್ಯವಾದ ತೊಗರಿ, ಟೊಮೆಟೋ, ಹಸಿಮೆಣಸಿನಕಾಯಿ, ಸೊಪ್ಪು ಮತ್ತಿತರ ಪೌಷ್ಟಿಕಾಂಶವುಳ್ಳ ಹಸಿರು ತರಕಾರಿ ಬೆಳೆದು ಮಕ್ಕಳ ಊಟಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಜತೆಗೆ 200 ಬಾಳೆ ಗಿಡ ಬೆಳೆಯಲಾಗಿದೆ. ಅವುಗಳನ್ನು ಮಕ್ಕಳೇ ಬಳಸಿಕೊಳ್ಳುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಹೂವಿನ ಗಿಡಗಳು ಶಾಲೆ ಸೌಂದರ್ಯ ಹೆಚ್ಚಿಸಿವೆ. ಒಟ್ಟಾರೆ ಶಾಲಾ ಆವರಣದಲ್ಲಿ 2 ಸಾವಿರ ಮರಗಿಡಗಳು ಬೆಳೆಯುತ್ತಿವೆ. ಮಕ್ಕಳಿಗೆ ಪರಿಶುದ್ಧ ಗಾಳಿ ಮತ್ತು ನೆರಳು ಸಿಗುತ್ತಿದೆ.

ಸ್ವಾಗತಿಸುವ ಹುಲ್ಲುಹಾಸು: ಸಾಮಾನ್ಯವಾಗಿ ನಾವು ಸರ್ಕಾರಿ ಶಾಲೆಗಳಿಗೆ ಹೋದರೆ ಶಾಲೆ ನಾಮಫ‌ಲಕ ಮತ್ತು ಅದರ ಮುಂದೆ ನಿಲ್ಲಿಸಿರುವ ವಾಹನ ಅಥವಾ ಒಂದೆರಡು ಮರಗಳು ನಮ್ಮನ್ನು ಸ್ವಾಗತಿಸುವುದೇ ಹೆಚ್ಚು. ಆದರೆ, ಈ ಶಾಲೆಯ ಆವರಣ ಪ್ರವೇಶಿಸಿದರೆ ನಮಗೆ ಶಾಲೆಗೆ ಬಂದ ಅನುಭವದ ಬದಲು ನಾವೊಂದು ಸುಂದರವಾದ ಉದ್ಯಾನವನದಲ್ಲಿದ್ದೇವೆ ಎಂಬ ಅನುಭವವಾಗುತ್ತದೆ. ಶಾಲೆ ಮುಂದೆ ಹಸಿರಿನಿಂದ ಕಂಗೊಳಿಸುವ ಹುಲ್ಲಿನ ಹಾಸು, ಅದಕ್ಕೆ ಹೊಂದುವಂತೆ ಸುಂದರ ಹೂವು ಮತ್ತು ಎಲೆ ಹೊಂದಿರುವ ಅಲಂಕಾರಿಕ ಸಸಿಗಳು ನಮ್ಮನ್ನು ಸ್ವಾಗತಿಸುತ್ತವೆ. ಜೊತೆಗೆ ಶಾಲೆಯ ಸುತ್ತ ಇರುವ ಮರಗಳ ಕೆಳಗೆ ವಿಶ್ರಾಂತಿ ಪಡೆಯಲು ಕಲ್ಲಿನ ಆಸನ ನಿರ್ಮಿಸಲಾಗಿದೆ.

 

● ಎಚ್.ಬಿ.ಮಂಜುನಾಥ್‌

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.R.Pete: ತೆಂಡೇಕೆರೆ ಗ್ರಾಮದಲ್ಲಿ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

K.R.Pete: ತೆಂಡೇಕೆರೆ ಗ್ರಾಮದಲ್ಲಿ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.