ಲೋಕ ಅದಾಲತ್‌ನಲ್ಲಿ 401 ಪ್ರಕರಣ ಇತ್ಯರ್ಥ

2.72 ಕೋಟಿ ರೂ. ಪರಿಹಾರಕ್ಕೆ ಆದೇಶ • 41 ಅಪಘಾತದ ಪ್ರಕರಣಗಳಲ್ಲೇ 1.30 ಕೋಟಿ ರೂ.

Team Udayavani, Jul 15, 2019, 12:20 PM IST

mandya-tdy-2..

ಮದ್ದೂರು ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶ ಪಿ.ಎಂ. ಬಾಲಸುಬ್ರಹ್ಮಣಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಪರಿಹಾರಕ್ಕೆ ಆದೇಶ ನೀಡಿದರು.

ಮಂಡ್ಯ: ರಾಷ್ಟ್ರೀಯ ಲೋಕ ಅದಾಲತ್‌ ಅಂಗವಾಗಿ ಪಟ್ಟಣದ ಜೆಎಂಎಫ್‌ ನ್ಯಾಯಾಲಯದಲ್ಲಿ ನಡೆದ ಬೃಹತ್‌ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ವಿವಿಧ ರಾಜ್ಯಗಳಿಗೆ ಸಂಬಂಧಿಸಿದಂತೆ 401 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿ 2.72 ಕೋಟಿ ರೂ. ಪರಿಹಾರ ನೀಡಲು ಆದೇಶಿದರು.

ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏಕ ಕಾಲದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಹಿರಿಯ ಶ್ರೇಣಿ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಗಂಭೀರ ಸ್ವರೂಪದ 972 ಪ್ರಕರಣಗಳಲ್ಲಿ 401 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ ನ್ಯಾಯಾಧೀಶರು, 2.72 ಕೋಟಿ ಪರಿಹಾರ ನೀಡಲು ತೀರ್ಪು ನೀಡಿದರು.

ಎಷ್ಟು ಪ್ರಕರಣ, ಪರಿಹಾರ:ಹಿರಿಯ ಸಿವಿಲ್ ನ್ಯಾಯಾಲಯ, ಪ್ರಧಾನ ಸಿವಿಲ್ ನ್ಯಾಯಾಲಯ, 1ನೇ ಅಪರ ಸಿವಿಲ್ ನ್ಯಾಯಾಲಯ, 2ನೇ ಅಪರ ಸಿವಿಲ್ ನ್ಯಾಯಾಲಯ ಹಾಗೂ 3 ಮತ್ತು 4ನೇ ಅಪರ ಸಿವಿಲ್ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ಅಪಘಾತದಲ್ಲಿ 41 ಪ್ರಕರಣದಲ್ಲಿ 1.30 ಕೋಟಿ, 41 ಸಿವಿಲ್ ಪ್ರಕರಣಗಳಲ್ಲಿ 73 ಲಕ್ಷ ರೂ. ಪರಿಹಾರ, 67 ಚೆಕ್‌ ಬೌನ್ಸ್‌ ಪ್ರಕರಣಗಳಲ್ಲಿ 40.57 ಲಕ್ಷ ರೂ. ಪರಿಹಾರ, ಭೂ ಸ್ವಾಧೀನದ 10 ಪ್ರಕರಣಗಳಲ್ಲಿ 49.38 ಲಕ್ಷ ರೂ. ಪರಿಹಾರ, ಕ್ಕೆ ನ್ಯಾಯಾಧೀಶರು ಆದೇಶ ನೀಡಿದರು.

ಇತರೆ 257 ಪ್ರಕರಣಗಳಲ್ಲಿ 33 ಅಪರಾಧ, 224 ಸಿವಿಲ್ ಪ್ರಕರಣ ಸೇರಿದಂತೆ ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಗಣೇಶ್‌, ಪ್ರಧಾನ ಸಿವಿಲ್ ನ್ಯಾಯಾಧೀಶ ಪಿ.ಎಂ.ಬಾಲಸುಬ್ರಹ್ಮಣ್ಯ, 1ನೇ ಅಪರ ಸಿವಿಲ್ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌, 2ನೇ ಅಪರ ನ್ಯಾಯಾಧೀಶ ಆದಿತ್ಯ ಆರ್‌.ಕಲಾಲ್, 3ನೇ ಅಪರ ನ್ಯಾಯಾಧೀಶ ಸೋಮನಾಥ್‌, 4ನೇ ಅಪರ ನ್ಯಾಯಾಧೀಶೆ ತೃಪ್ತಿ ಧರಣಿ ಲೋಕ ಅದಾಲತ್‌ ಮೂಲಕ ತಮ್ಮ ನ್ಯಾಯಾಲಯದ ವ್ಯಾಪ್ತಿಯ ಪ್ರಕರಣಗಳನ್ನು ಏಕಕಾಲದಲ್ಲಿ ಇತ್ಯರ್ಥಪಡಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಜಿ.ಎನ್‌.ಸತ್ಯಾ, ಉಪಾಧ್ಯಕ್ಷ ಕೆಂಪೇಗೌಡ, ಕಾರ್ಯದರ್ಶಿ ಎ.ಶಿವಣ್ಣ, ಹಿರಿಯ ವಕೀಲರಾದ ಎಚ್. ಮಾದೇಗೌಡ, ಎಚ್.ವಿ.ಬಾಲರಾಜು, ಬಿ. ಅಪ್ಪಾಜಿಗೌಡ, ಮಹದೇವಯ್ಯ, ಗಿರೀಶ್‌, ಎಂ.ಎಲ್.ಶಿವಣ್ಣ ಸೇರಿದಂತೆ ವಕೀಲರು ಅದಾಲತ್‌ನಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.