ಕಸದ ತೊಟ್ಟಿಯಾದ ಇಂದಿರಾ ಕ್ಯಾಂಟಿನ್‌ ಛಾವಣಿ!

ನಿರ್ವಹಣೆಯಿಲ್ಲದೇ ಸೊರಗಿದ ರಾಜ್ಯ ಸರ್ಕಾರದ ಯೋಜನೆ • ಶಿರಾ ನಗರಸಭೆ ನಿರ್ಲಕ್ಷ್ಯ

Team Udayavani, Jul 15, 2019, 12:39 PM IST

tk-tdy-1

ಶಿರಾ: ಬಡ ಹಾಗೂ ಮಧ್ಯಮ ವರ್ಗದವರ ಹಸಿವು ತಣಿಸುವ ಸರ್ಕಾರದ ಕನಸಿನ ಇಂದಿರಾ ಕ್ಯಾಂಟೀನ್‌ ನಗರದಲ್ಲಿ ಸ್ಥಾಪಿಸಿ ಸುಮಾರು ಒಂದೂವರೆ ವರ್ಷ ಕಳೆದಿದೆ. ಕ್ಯಾಂಟಿನ್‌ ಛಾವಣಿಯನ್ನೇ ಕಸದ ತೊಟ್ಟಿಯನ್ನಾಗಿ ಮಾರ್ಪಾಟಾಗಿದೆ.

ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಬಗ್ಗೆ ನಗರಸಭೆ ನಿರ್ಲಕ್ಷ್ಯ ವಹಿಸಿರುವುದರಿಂದ ಅವ್ಯವಸ್ಥೆ ತಾಂಡವವಾಡುತ್ತಿದೆ. ಕುಡಿಯುವ ನೀರಿನ ಆರ್‌ಒ ಪ್ಲಾಂಟ್ ಕೆಟ್ಟು 6 ತಿಂಗಳಾಗಿದೆ. ಊಟದ ತಟ್ಟೆ ತೊಳೆಯುವ ಬಿಸಿ ನೀರಿನ ಛೇಂಬರ್‌ ಕೆಟ್ಟುಹೋಗಿದೆ. ಇಡ್ಲಿ ಬೇಯಿಸುವ ಸ್ಟೀಂ ಕುಕ್ಕರ್‌ ಎರಡರಲ್ಲಿ ಒಂದು ಕೆಟ್ಟು 5 ತಿಂಗಳಾಗಿದ್ದು, ಕಳಪೆ ಆಹಾರ ಸಾಮಗ್ರಿ ಬಳಸಲಾಗುತ್ತಿದೆ. ಪರಿಸರ ಇಂಜಿನಿಯರ್‌ ಪಲ್ಲವಿ ಹಾಗೂ ಆರೋಗ್ಯ ನಿರೀಕ್ಷಕ ಮಾರೇಗೌಡ ಕ್ಯಾಂಟೀನ್‌ ನಿರ್ವಹಣೆ ಮರೆತು ಜಾಣ ಕುರುಡುತನ ತೋರಿಸುತ್ತಿರುವುದರಿಂದ ಸರ್ಕಾರ ಯೋಜನೆ ಸೊರಗುತ್ತಿದೆ.

ಹಣ ಲೂಟಿ: ಸರ್ಕಾರ ತಿಂಡಿಗೆ 10 ರೂ.30 ಪೈಸೆ ಹಾಗೂ ಊಟಕ್ಕೆ 10 ರೂ. 50 ಪೈಸೆ ಸಹಾಯಧನ ನೀಡುತ್ತಿದೆ. ರಾತ್ರಿ ವೇಳೆ ಕೇವಲ 35ರಿಂದ 50 ಜನರು ಮಾತ್ರ ಊಟ ಮಾಡುತ್ತಿದ್ದಾರೆ. ಆದರೂ ಸರ್ಕಾರದಿಂದ ಹೆಚ್ಚಿನ ಹಣ ಲೂಟಿ ಮಾಡಲಾಗುತ್ತಿದೆ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಈ ಬಗ್ಗೆ ಪರಿಶೀಲಿಸಿ ಎಂದು ಹೇಳಿದರೆ ನಾನು ಊಟ ತಿಂಡಿ ಮಾಡುವುದನ್ನು ಎಣಿಸೋಕೆ ಆಗಲ್ಲ ಎಂದು ಬೇಜವಾಬ್ದಾರಿ ಉತ್ತರವನ್ನು ಪರಿಸರ ಇಂಜಿನಿಯರ್‌ ಪಲ್ಲವಿ ನೀಡುತ್ತಾರೆ.

ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ಪುಸ್ತಕದಲ್ಲಿ ನ್ಯೂನತೆ ಬಗ್ಗೆ ಬರೆಯುವುದನ್ನು ಪರಿಪಾಠ ಬೆಳೆಸಿಕೊಂಡಿಲ್ಲ. ನಿರ್ವಹಣೆ ಹೊಣೆ ಹೊತ್ತ ಅಧಿಕಾರಿಗಳು ಕ್ಯಾಂಟೀನ್‌ ಕಡೆ ಪರಿಶೀಲಿಸದೆ ಎಲ್ಲಾ ಸರಿ ಇದೆ ಎಂದು ತಿಂಗಳಿಗೆ ನಾಲ್ಕೂವರೆ ಲಕ್ಷ ರೂ. ಗುತ್ತಿಗೆದಾರರಿಗೆ ಹಣ ಪಾವತಿಸಲು ಕಾಳಜಿ ತೋರಿಸುತ್ತಾರೆ. ಸ್ವಚ್ಛತೆ ಬಗ್ಗೆ ಕ್ಯಾಂಟೀನ್‌ ನಿರ್ವಹಣೆಯ ಅಧಿಕಾರಿ ನಗರಸಭೆ ಆರೋಗ್ಯ ನಿರೀಕ್ಷಕ ಮಾರೇಗೌಡರಿಗೆ ಸಾಕಷ್ಟು ಬಾರಿ ತಿಳಿಸಿದರೂ ಗಮನಹರಿಸಿಲ್ಲ ಎಂದು ಇಂದಿರಾ ಕ್ಯಾಂಟೀನ್‌ ನಿರ್ವಾಹಕ ಶಾಬಾಜ್‌ ಖಾನ್‌ ದೂರುತ್ತಾರೆ. ಕೂಡಲೇ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಎಚ್ಚತ್ತುಕೊಳ್ಳಬೇಕಿದೆ.

ಕುಡಿಯುನ ನೀರಿನ ಆರ್‌.ಒ ಪ್ಲಾಂಟ್ ಈಗಾಗಲೇ 2 ಬಾರಿ ಕಂಪನಿಯವರು ರಿಪೇರಿ ಮಾಡಿಕೊಟ್ಟು 37 ಸಾವಿರ ರೂ. ಪಡೆದು ಹೋಗಿರುತ್ತಾರೆ. ಆದರೆ ಈ ವರೆಗೂ ಒಂದು ಬಿಂದಿಗೆ ಕುಡಿಯುವ ನೀರು ಸಹಾ ಬಂದಿಲ್ಲ. ಈಗ ಸದ್ಯಕ್ಕೆ ಎದುರುಗಡೆಯ ಕುಡಿಯುವ ನೀರಿನ ಘಟಕದಿಂದ ನೀರು ತಂದು ಜನರಿಗೆ ಕೊಡುತ್ತಿದ್ದೇವೆ. ಕೆಲವೊಮ್ಮೆ ಅದು ಕೆಟ್ಟರೆ ತೊಟ್ಟಿಯ ನೀರನ್ನೇ ಕುಡಿಯುವುದಕ್ಕಾಗಿ ಬಳಸುತ್ತೇವೆ. ● ಶಾಬಾಜ್‌ ಖಾನ್‌ , ಶಿರಾ ಇಂದಿರಾ ಕ್ಯಾಂಟಿನ್‌ ನಿರ್ವಹಣಾಧಿಕಾರಿ

ಟಾಪ್ ನ್ಯೂಸ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.