ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆ ಇರಲಿ

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅಭಿಮತ

Team Udayavani, Jul 15, 2019, 12:45 PM IST

tk-tdy-2..

ತುಮಕೂರು: ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಗುರುತಿಸಿಕೊಂಡಾಗ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದರು.

ನಗರದ ಶ್ರೀ ಭೈರವೇಶ್ವರ ಸಹಕಾರ ಬ್ಯಾಂಕ್‌ ಆವರಣದಲ್ಲಿ ಶ್ರೀ ಭೈರವಿ ಮಹಿಳಾ ಸಂಘ ಮತ್ತು ಶ್ರೀ ಭೈರವಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವದಲ್ಲಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಆಶೀರ್ವಚನ ನೀಡಿದರು.

ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಮುಖ್ಯ ಕರ್ತವ್ಯವಾಗಬೇಕು. ಆಗ ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕುತ್ತದೆ. ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಸಮಾಜ, ದೇಶಕ್ಕೆ ಕೀರ್ತಿ ತರುವಂತೆ ಆಗಬೇಕು. ಮಕ್ಕಳನ್ನು ಶೈಕ್ಷಣಿಕವಾಗಿ ಸಾಧನೆ ಮಾಡಲು ಪೋಷಕರು ಉತ್ತೇಜಿಸಬೇಕು ಎಂದರು.

ಹೆಣ್ಣು ಮಕ್ಕಳು ಇಂದು ಓದುವಂತಹ, ಪ್ರಜ್ಞಾವಂತಿಕೆ ಬೆಳೆಸಿಕೊಂಡು ಬದುಕು ಕಟ್ಟಿಕೊಳ್ಳುವ ಕಡೆ ಹಾತೊರೆಯುತ್ತಿದ್ದಾರೆ. ಇದರ ಜೊತೆಗೆ ಶಿಸ್ತು ಅಳವಡಿಸಿಕೊಂಡಾಗ ಬದುಕು ಇನ್ನೂ ಉತ್ತಮ ರೀತಿಯಲ್ಲಿ ಸಾಗುತ್ತದೆ ಎಂದು ಕಿವಿಮಾತು ಹೇಳಿದರು.

ಮಕ್ಕಳ ಮೇಲೆ ಒತ್ತಡ ಸಲ್ಲ: ಮಕ್ಕಳು ಎಂಬಿಬಿಎಸ್‌, ಇಂಜಿನಿಯರ್‌, ಐಎಎಸ್‌, ಐಪಿಎಸ್‌ ಆಗಬೇಕೆಂದು ಪೋಷಕರು ಓದಲು ಒತ್ತಡ ಹಾಕುವುದನ್ನು ಬಿಟ್ಟು, ಮಕ್ಕಳ ಆಸಕ್ತಿ ಕ್ಷೇತ್ರ ಯಾವುದು ಎಂಬುದನ್ನು ತಿಳಿದುಕೊಂಡು ಪ್ರೋತ್ಸಾಹ ನೀಡಬೇಕು. ಸಾಧನೆಗೆ ಯಾವುದೇ ಕ್ಷೇತ್ರದಲ್ಲಿ ಮೇಲು-ಕೀಳು, ಬೇಧವಿರಬಾರದು. ಆ ನಿಟ್ಟಿನಲ್ಲಿ ಮುನ್ನಡೆದಾಗ ಸಾಧನೆ ಸಾಧ್ಯ. ಸಾಧನೆ ಸಾಧಕನ ಸ್ವತ್ತು ಹೊರತು, ಯಾರ ಸ್ವತ್ತೂ ಅಲ್ಲ. ಇದನ್ನು ಅರಿತು ವಿದ್ಯಾರ್ಥಿಗಳು ಮುನ್ನಡೆಯಬೇಕೆಂದು ಕಿವಿಮಾತು ಹೇಳಿದರು.

ಮೇಯರ್‌ ಲಲಿತಾ ರವೀಶ್‌ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಂಡು ಸಮಾಜ ಸೇವಾ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಭೈರವಿ ಮಹಿಳಾ ಸಂಘದ ಅಧ್ಯಕ್ಷೆ ಸುಜಾತ ನಂಜೇಗೌಡ ಮಾತನಾಡಿ, ಆಧುನಿಕ ಕಾಲದಲ್ಲಿ ವಿದ್ಯಾರ್ಥಿಗಳು ಪಠ್ಯ ಪುಸ್ತಕ ಹೆಚ್ಚು ಅಭ್ಯಾಸ ಮಾಡುವುದನ್ನು ಬಿಟ್ಟು ಮೊಬೈಲ್ನಲ್ಲಿ ಕಾಲ ಕಳೆದು ಹಲವಾರು ಮಾನಸಿಕ ಒತ್ತಡಗಳಿಗೆ ಒಳಗಾಗುತ್ತಾರೆ. ಪೋಷಕರು ಮಕ್ಕಳಿಗೆ ಮೊಬೈಲ್ ನೀಡದೆ ವಿದ್ಯಾಭ್ಯಾಸದಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು. ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ಹಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಶ್ರೀಹರಿ ಜೆ.ಗೌಡ ಉಪನ್ಯಾಸ ನೀಡಿದರು. ಈ ವೇಳೆ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶ್ರೀ ಭೈರವಿ ಮಹಿಳಾ ಸಂಘದಿಂದ ಪುಸ್ತಕ ಬಿಡುಗಡೆ ಮಾಡಲಾಯಿತು.

ಶ್ರೀ ಭೈರವಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಸುಧಾಕುಮಾರ್‌, ಕಾರ್ಯಾಧ್ಯಕ್ಷೆ ಎಲ್.ಸುನಂದ ಗೌಡ, ಉಪಾಧ್ಯಕ್ಷೆ ನೇತ್ರ ಜಗದೀಶ್‌, ಕಾರ್ಯದರ್ಶಿ ಸುಮಂಗಳ ಅಪ್ಪಣ್ಣ, ಸಹ ಕಾರ್ಯದರ್ಶಿ ಪಾರ್ವತಿ ನಂಜುಂಡಯ್ಯ, ಖಜಾಂಚಿ ಶಿವಲಕ್ಷ್ಮಮ್ಮ, ಸಂಘಟನಾ ಕಾರ್ಯದರ್ಶಿ ರತ್ನ ನಾಗರಾಜು, ಮಂಜುಳಾ ಲೋಕೇಶ್‌, ಮಹಾನಗರ ಪಾಲಿಕೆ ಸದಸ್ಯರಾದ ಧರಣೇಂದ್ರ ಕುಮಾರ್‌, ಕುಮಾರ್‌, ದೇವು ಪ್ರಕಾಶ್‌, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು, ಕಮಲ ಕೃಷ್ಣಮೂರ್ತಿ, ಲಲಿತಾ ಹನುಮಂತರಾಯಪ್ಪ, ಬೆಳ್ಳಿ ರಕ್ತನಿಧಿ ಕೇಂದ್ರದ ಬೆಳ್ಳಿ ಲೋಕೇಶ್‌, ಎಸ್‌ಎಸ್‌ಐಟಿ ಪ್ರಾಂಶುಪಾಲ ಡಾ.ವೀರಯ್ಯ, ನಳಿನಾ ಲೋಕೇಶ್‌, ತಾರಾದೇವಿ, ನರಸಿಂಹಮೂರ್ತಿ ಇತರರಿದ್ದರು.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.