ಕಟಪಾಡಿ : ತ್ಯಾಜ್ಯದ ರಾಶಿ; ಸಾಂಕ್ರಾಮಿಕ ರೋಗದ ಭೀತಿ!

ಶೀಘ್ರ ವಿಲೇವಾರಿಗೆ ಸಾರ್ವಜನಿಕರ ಆಗ್ರಹ

Team Udayavani, Jul 16, 2019, 5:24 AM IST

1507KPT2E-3

ಕಟಪಾಡಿ: ಕಟಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಎಲ್ಲೆಲ್ಲೂ ತ್ಯಾಜ್ಯದ ರಾಶಿಯು ಕಂಡು ಬರುತ್ತಿದ್ದು ಈ ಬಾರಿಯ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗುವ ಸಾಧ್ಯತೆ ಇದೆ.

ಪ್ರಮುಖವಾಗಿ ರಾ.ಹೆ. 66ರ ಸರ್ವಿಸ್‌ ರಸ್ತೆಗಳ ಪಕ್ಕದಲ್ಲಿ ಜನವಸತಿ ಪ್ರದೇಶ ಮತ್ತು ಜನ ಸಂಚಾರದ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಸುರಿಯಲಾಗಿದೆ. ಎಸ್‌.ವಿ.ಎಸ್‌. ಶಾಲೆಯ ಆವರಣಗೋಡೆಯ ಹೊರಭಾಗದಲ್ಲಿ ತ್ಯಾಜ್ಯ ಸುರಿಯಲಾಗಿದ್ದು, ಇದು ಶಾಲಾ ಮಕ್ಕಳು ಸಹಿತ ಅಧಿಕ ಸಂಖ್ಯೆಯಲ್ಲಿ ಓಡಾಡುವ ಪ್ರದೇಶವಾಗಿದೆ. ಮಣಿಪುರ ರಸ್ತೆಯಲ್ಲಿನ ರೈಲ್ವೇ ಮೇಲ್ಸೇತುವೆ ಭಾಗದ ಇಕ್ಕೆಲಗಳಲ್ಲಿ ಗೋಣಿಗಳಲ್ಲಿ ತಂದು ತ್ಯಾಜ್ಯ ಹಾಕುತ್ತಿದ್ದು, ಸರಕಾರಿ ಗುಡ್ಡೆ ಸಂಪರ್ಕದ ರೈಲ್ವೇ ಕ್ರಾಸಿಂಗ್‌ ಬಳಿ, ಜನವಸತಿ ಕಾಲನಿ ಹತ್ತಿರ ತ್ಯಾಜ್ಯಗಳ ರಾಶಿ ತಯಾರಾಗುತ್ತಿದೆ.

ಕಟಪಾಡಿ -ಶಿರ್ವ ಸಂಪರ್ಕದ ರಾಜ್ಯ ಹೆದ್ದಾರಿಯ ಅಚ್ಚಡ ರೈಲ್ವೇ ಮೇಲ್ಸೇತುವೆಯ ಬಳಿ ರಸ್ತೆಯಲ್ಲಿಯೇ ಚೆಲ್ಲಾ ಪಿಲ್ಲಿಯಾಗಿ ಹರಡಿಕೊಂಡಿರುವ ಸ್ಥಿತಿಯಲ್ಲಿ ಕೊಳೆತ ಹಸಿ ತ್ಯಾಜ್ಯಗಳು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡುತ್ತಿದೆ.

ಈ ಪರಿಸರದಲ್ಲಿ ಕೊಳೆತ ತ್ಯಾಜ್ಯದಿಂದ ಗಬ್ಬು ವಾಸನೆಯಿಂದ ನಾರುತ್ತಿದ್ದು ಅಸಹ್ಯವಾದ ವಾತಾವರಣ ಸೃಷ್ಟಿಯಾಗಿದೆ. ಇದರಲ್ಲಿನ ಹಸಿ ತ್ಯಾಜ್ಯಗಳು ಇದೀಗ ಸುರಿಯುತ್ತಿರುವ ಮಳೆಯಿಂದ ಕೊಳೆತು ಸೊಳ್ಳೆ ಉತ್ಪತ್ತಿಯ ಕೇಂದ್ರವಾಗುವ ಜತೆಗೆ ಪರಿಸರಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗದ ಭೀತಿಯ ಛಾಯೆಯು ಸ್ಥಳೀಯರಲ್ಲಿ ಕಾಡುತ್ತಿವೆ.

ಅದರೊಂದಿಗೆ ಹಗುರವಾದ ತ್ಯಾಜ್ಯವು ಗಾಳಿಯಿಂದ ಅಥವಾ ಮಳೆಯ ನೀರಿನ ಹರಿವಿನೊಂದಿಗೆ ಸಾಗಿ ಕೃಷಿ ಗದ್ದೆ, ಹೊಳೆ, ತೊರೆಗಳನ್ನು ಸೇರುವ ಸಂಭಾವ್ಯತೆ ಅಧಿಕವಾಗಿದ್ದು, ಕೃಷಿಗೂ ಹಾನಿಯಾಗಬಲ್ಲುದು. ಪರಿಸರ ಮಾಲಿನ್ಯದ ಜತೆಗೆ ಜಲಚರಗಳ ಮೇಲೆಯೂ ದುಷ್ಪರಿಣಾಮವನ್ನು ಬೀರುವ ಸಾಧ್ಯತೆಯು ನಿಚ್ಚಳವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

ಇಲ್ಲಿನ ಸ್ಥಳೀಯರ ಸಹಿತವಾಗಿ ಸನಿಹದಲ್ಲಿ ಸಾಗುವ ಸಂಚಾರಿಗಳಿಗೂ ಸಾಂಕ್ರಾಮಿಕ ರೋಗದ ಭೀತಿಯನ್ನು ಸೃಷ್ಟಿಸುತ್ತಿದೆ. ಆದರೊಂದಿಗೆ ಕಳೆದ ಮಳೆಗಾಲದಲ್ಲಿ ಕಟಪಾಡಿ ಭಾಗದಲ್ಲಿ ಸಂಶಯಿತ ಡೆಂಗ್ಯೂ ಜ್ವರ ಕಾಡಿರುವುದನ್ನು ಸಾರ್ವಜನಿಕರು ನೆನಪಿಸಿಕೊಳ್ಳುತ್ತಿದ್ದಾರೆ.

ಜನಮಾನಸದ ಸುರಕ್ಷತೆಯನ್ನು ಗಮನ ದಲ್ಲಿರಿಸಿಕೊಂಡು ಮೂಲದಲ್ಲಿಯೇ ಸೂಕ್ತವಾಗಿ ವಿಲೇವಾರಿಗೊಳಿಸಿದಲ್ಲಿ ಇಂತಹ ಸಮಸ್ಯೆಯು ಸೃಷ್ಟಿಯಾಗುತ್ತಿರಲಿಲ್ಲ ಎನ್ನುವುದು ಸಾರ್ವ ಜನಿಕರ ಅಭಿಪ್ರಾಯ. ಈ ಕೂಡಲೇ ಆರೋಗ್ಯ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆ ಸಹಿತ ಸಂಬಂಧಿತ ಇಲಾಖೆಯು ಜನರ ಆರೋಗ್ಯದ ಸುರಕ್ಷತೆಯ ಬಗ್ಗೆ ಕಾಳಜಿ ಇರಿಸಿ ಈ ಬಗ್ಗೆ ನಿಗಾ ವಹಿಸ ಬೇಕಾಗಿ ಸಾರ್ವಜನಿಕರ ಆಗ್ರಹವಾಗಿದೆ.

ಬೇಸರ ಮೂಡಿಸುತ್ತಿದೆ
ಕಳೆದ ತಿಂಗಳ‌ ಹಿಂದಷ್ಟೇ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿತ್ತು. ಸಾರ್ವಜನಿಕರು ಸೌಜನ್ಯ ಮರೆತು ನಿರಂತರ ತ್ಯಾಜ್ಯ ಸುರಿಯುತ್ತಿರುವುದು ಬೇಸರ ಮೂಡಿಸುತ್ತಿದೆ. ಜನರು ತ್ಯಾಜ್ಯವನ್ನು ಸುರಿಯದಂತೆ ಮತ್ತೆ ವಿಜ್ಞಾಪಿಸುತ್ತೇನೆ. ಪರಿಸರ ಸ್ವತ್ಛತೆ ಮತ್ತು ಗ್ರಾಮಸ್ಥರ ಆರೋಗ್ಯ ಕಾಳಜಿಯಿಂದ ಶೀಘ್ರದಲ್ಲಿಯೇ ಸಂಗ್ರಹಿತ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಗುತ್ತದೆ.
– ಇನಾಯತುಲ್ಲಾ ಬೇಗ್‌,
ಪಿ.ಡಿ.ಒ. ಕಟಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.