ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ

•ನೀರೆತ್ತುವ ಮುಖ್ಯ ಸ್ಥಾವರ ಎದುರು ಗ್ರಾಮಸ್ಥರ ದಿಢೀರ್‌ ಪ್ರತಿಭಟನೆ

Team Udayavani, Jul 16, 2019, 9:33 AM IST

bk-tdy-2..

ಕಲಾದಗಿ: ಪ್ರತಿಭಟನೆ ನಡೆಸಿದ ರೈತರೊಂದಿಗೆ ಪಿಎಸ್‌ಐ ಅಶೋಕ ಚವಾಣ ಚರ್ಚೆ ನಡೆಸಿದರು.

ಕಲಾದಗಿ: ಕೃಷ್ಣಾ ಭಾಗ್ಯ ಜಲ ನಿಗಮ ಹೇರಕಲ್ ದಕ್ಷಿಣ ಏತ ನೀರಾವರಿ ಯೋಜನೆಯಲ್ಲಿ ಕಳಸಕೊಪ್ಪ ಕೆರೆ ಸೇರಿದಂತೆ ಬಾದಾಮಿ ತಾಲೂಕಿನ ಹಲವು ಕೆರೆಗೆ ನೀರು ತುಂಬಿಸುವ ಉದ್ದೇಶಕ್ಕಾಗಿ ಭೂಮಿಯ ಅಲ್ಪಭಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, ಇಡೀ ಭೂಮಿಗೆ ಭೂಸ್ವಾಧೀನ ಪ್ರಕ್ರಿಯೆ ಎಂದು ರೈತರ ಪಹಣಿ ಪತ್ರದಲ್ಲಿ ತೋರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗೋವಿಂದಕೊಪ್ಪ ಗ್ರಾಮಸ್ಥರು ನೀರೆತ್ತುವ ಮುಖ್ಯ ಸ್ಥಾವರದ ಎದುರು ದಿಢೀರ್‌ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಗ್ಗೆ ಜಾಕ್‌ವೆಲ್ನಿಂದ ಕೆರೆಗೆ ನೀರೆತ್ತಲು ಪ್ರಾರಂಭ ಮಾಡಲಿದ್ದಾರೆ ಎಂದು ಭಾವಿಸಿ ಜಾಕ್ವೆಲ್ ಪಂಪ್‌ ಹೌಸ್‌ ಎದುರು ಗೋವಿಂದಕೊಪ್ಪ ಗ್ರಾಮದ 50ಕ್ಕೂ ಅಧಿಕ ರೈತರು ಜಮಾಯಿಸಿದರು. ಕೆರೆ ತುಂಬಿಸುವ ಯೋಜನೆಗೆ ಗ್ರಾಮದ ನೂರಾರು ರೈತರ ಭೂಮಿ ಸ್ವಾಧಿಧೀನಮಾಡಿಕೊಂಡು ಪೈಪ್‌ಲೈನ್‌ ಹಾಯಿಸಲಾಗಿದೆ. ರೈತನ 10 ಎಕರೆ ಭೂಮಿಯಲ್ಲಿ 1 ಎಕರೆ, ಅರ್ಧ ಎಕರೆ, 20 ಗುಂಟೆ, 10 ಗುಂಟೆ ಪೈಪ್‌ಲೈನ್‌ ಮಾರ್ಗಕ್ಕೆ ಭೂ ಬಳಕೆ ಸ್ವಾಧೀನಗೊಂಡರೆ ಇಡೀ 10 ಎಕರೆ ಭೂಮಿಗೆ ಸರಕಾರದ ಭೂಸ್ವಾಧೀನ ಎಂದು ಉತಾರ್‌ನಲ್ಲಿ ನಮೂದಿಸಲಾಗಿದೆ. ಇದರಿಂದ ರೈತರಿಗೆ ಸರಕಾರ ಸಹಾಯ ಸಬ್ಸಿಡಿ, ಬ್ಯಾಂಕ್‌ ಸಾಲ ಸಿಗುತ್ತಿಲ್ಲ ಎಂದು ಕೃಷ್ಣಾ ಮೇಲ್ದಂಡೆ ಯೋಜನಾ ಬಾಗಲಕೋಟೆ ನವನಗರ ಹೆಚ್ಚುವರಿ ವಿಶೇಷ ಭೂಸ್ವಾಧೀನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷವೂ ಇದೇ ತಿಂಗಳಲ್ಲಿ ಕಳಸಕೊಪ್ಪ ಕೆರೆಗೆ ನೀರು ತುಂಬಿಸಲು ಚಾಲನೆ ನೀಡಲು ಆಗಮಿಸಿದ್ದ ವಿಧಾನ ಪರಿಷತ್‌ ಸದಸ್ಯ ಹನಮಂತ್‌ ಆರ್‌. ನಿರಾಣಿಯವರ ಮುಂದೆಯೂ ಈ ಸಮಸ್ಯೆ ಹೇಳಿಕೊಂಡಾಗ ಅಧಿಕಾರಿಗಳ ಶೀಘ್ರ ಸಮಸ್ಯೆ ಇತ್ಯರ್ಥ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಆ ವೇಳೆ ಅಧಿಕಾರಿಗಳು ಸರಿಪಡಿಸುವುದಾಗಿ ಭರವಸೆ ನೀಡಿ ವರ್ಷ ಕಳೆದರೂ ರೈತರ ಸಮಸ್ಯೆ ಬಗೆಹರಿಸುತ್ತಿಲ್ಲ. ಕಳೆದ ನಾಲ್ಕು ವರ್ಷದಿಂದ ಈ ಸಮಸ್ಯೆ ಹೇಳಿಕೊಳ್ಳುತ್ತಿದ್ದರೂ ಅಧಿಕಾರಿಗಳು ಸರಿಪಡಿಸುತ್ತಿಲ್ಲ ಎಂದು ರೈತರು ತಮ್ಮ ನೋವನ್ನು ತೋಡಿಕೊಂಡರು.

ಪ್ರತಿಭಟನೆ ಸುದ್ದಿ ತಿಳಿದ ಸ್ಥಳೀಯ ಪೊಲೀಸ್‌ ಠಾಣಾಧಿಕಾರಿ ಅಶೋಕ ಚವಾಣ್‌ ಸ್ಥಳದಲ್ಲಿದ್ದು, ರೈತರ ಸಮಸ್ಯೆ ಆಲಿಸಿ ರೈತರೊಂದಿಗೆ ಮಾತನಾಡಿದರು. ಅನ್ಯಾಯ ಸರಿಪಡಿಸದಿದ್ದಲ್ಲಿ ಬಾಗಲಕೋಟೆಯ ಕೆಬಿಜೆಎನ್‌ ಅಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಿವಣ್ಣಾ ವಾಘ, ಹಸನಅಹದ ರೋಣ, ಅಲ್ಲಾಭಕ್ಷ ರೋಣ, ಮುತ್ತಪ್ಪ ಬೀಡಕಿ, ವಿಠಲದೇಶಮುಖ, ಅಬ್ದುಲ್ಖಾದರ ತಾಂಬೊಳೆ, ಮುನ್ನಾ ರೋಣ, ಬಸಪ್ಪ ಬೀಡಕಿ ಮುಂತಾದವರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.