ಮನೆಗಳಿಗೆ ನುಗ್ಗಿದ ನೀರು

•ಸಮಸ್ಯೆ ಪರಿಹಾರಕ್ಕೆ ಜನರ ಮನವಿ •ಜಲಾವೃತ ಪ್ರದೇಶಕ್ಕೆ ಪೌರಾಯುಕ್ತ ಯೋಗೇಶ್ವರ ಭೇಟಿ

Team Udayavani, Jul 16, 2019, 10:51 AM IST

uk-tdy-1..

ಕಾರವಾರ: ಮನೆಯ ಹೊರ ಭಾಗದಲ್ಲಿ ಮಳೆ ನೀರು.

ಕಾರವಾರ: ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸೋಮವಾರ ದಿನವಿಡಿ ಸುರಿದ ಭಾರೀ ಮಳೆಗೆ ನಗರದ ವಿವಿಧ ವಾರ್ಡ್‌ಗಳ ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಯಿತು.

ಪದ್ಮನಾಭ ನಗರ, ಮಹಾದೇವ ನಗರ, ನ್ಯೂ ಕೆಎಚ್ಬಿ ಕಾಲೊನಿ, ಗಿಡ್ಡಾರಸ್ತೆಯ ಅಡ್ಡ ರಸ್ತೆಗಳ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಅನಾಹುತ ಉಂಟುಮಾಡಿತು. ಮಳೆ ಬಿಟ್ಟು ಬಿಟ್ಟು ರಭಸವಾಗಿ ಸುರಿಯುತ್ತಿದೆ. ಮಳೆ ನೀರು ಹರಿಯಲು ಸ್ಥಳವಿಲ್ಲದೇ ರಸ್ತೆಗಳಲ್ಲಿ ನಿಂತಿದೆ.

ಸಮುದ್ರ ಮಟ್ಟದಿಂದ 2 ಅಡಿ ತಗ್ಗಿನಲ್ಲಿರುವ ಕಾರವಾರ ಮಳೆ ಹೆಚ್ಚಾದರೆ ತೀವ್ರ ತೊಂದರೆ ಅನುಭವಿಸುತ್ತದೆ. ದಶಕಗಳ ಹಿಂದೆ ಕಂಡ ಮಳೆ ಈಗ ಮರುಕಳಿಸಿದ್ದು, ಸಹ್ಯಾದ್ರಿ ಪರ್ವತಗಳು ಮೋಡ ಮತ್ತು ಮಂಜಿನಿಂದ ತುಂಬಿಹೋಗಿವೆ. ಸೂರ್ಯನ ದರ್ಶನ ಎಂಬುದೇ ಇಲ್ಲವಾಗಿದೆ. ಪಶ್ಚಿಮಘಟ್ಟಗಳಲ್ಲಿ ಮೋಡಗಳ ಆಟ ಚೆಲುವಾಗಿ ನಡೆದಿದೆ. ಮಳೆಯನ್ನು ರೈತರು ಎಂಜಾಯ್‌ ಮಾಡುತ್ತಿದ್ದಾರೆ. ಕೃಷಿ ಚಟುವಟಿಕೆ ವೇಗವಾಗಿ ನಡೆದಿವೆ.

ಅಪಾರ್ಟಮೆಂಟ್‌ಗಳಿಗೆ ಅನುಮತಿ ನಿಲ್ಲಲಿ;

ನಗರದಲ್ಲಿ ಮಳೆ ನೀರು ಹರಿವ ಸಮಸ್ಯೆಗೆ ಅಪಾರ್ಟಮೆಂಟ್ ಸಂಸ್ಕೃತಿ ಕಾರಣ. ನಗರಸಭೆ ಅಪಾರ್ಟಮೆಂಟ್ ಕಟ್ಟದಂತೆ ಠಾರವು ಮಾಡಲಿ. ಈಗಾಗಲೇ ನಗರದಲ್ಲಿ 49 ಅಪಾರ್ಟಮೆಂಟ್‌ಗಳಿವೆ. ಇನ್ನು ಅಪಾರ್ಟಮೆಂಟ್ ನಿರ್ಮಿಸುತ್ತಾ ಹೋದರೆ ಕಾರವಾರ ಬಹುದೊಡ್ಡ ಸಮಸ್ಯೆ ಎದುರಿಸಲಿದೆ ಎಂದು ನಾಗರಿಕರು ಅಭಿಪ್ರಾಯಪಡುತ್ತಿದ್ದಾರೆ.

ನಗರಸಭೆ ಚುನಾವಣೆ ನಡೆದು ಸಹ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿಲ್ಲ. ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಸಂಗತಿ ಕೋರ್ಟ್‌ನಲ್ಲಿದ್ದು, ಜನಪ್ರತಿನಿಧಿಗಳು ಹೊಣೆಗಾರಿಕೆ ತಪ್ಪಿಸಿಕೊಳ್ಳಲು ಕಾರಣ ಸಿಕ್ಕಿದೆ. ಅಧಿಕಾರಿಗಳು ಅಸಹಾಯಕರಾಗಿದ್ದು, ಅವರು ಮೇಲಿನ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಅಪಾರ್ಟಮೆಂಟ್‌ಗಳಿಗೆ ಕಾನೂನು ಮೀರಿ ಅನುಮತಿ ನೀಡುತ್ತಿದ್ದಾರೆ ಎಂಬ ಆಪಾದನೆ ಕೇಳಿ ಬರತೊಡಗಿದೆ. ಕೊಳಚೆ ನೀರು ನಿರ್ವಹಣೆ ಮತ್ತು ಮಳೆ ನೀರು ಸಮಸ್ಯೆ ನಿವಾರಣೆಗೆ ನಗರದಲ್ಲಿ ಇನ್ನು ಮುಂದಾದರು ಅಪಾರ್ಟಮೆಂಟ್‌ಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು ಎಂಬ ಮಾತು ಕೇಳಿ ಬಂದಿದೆ.

ಕಾಲುವೆ ನಿರ್ಮಾಣಕ್ಕೆ ಜನ ಸಹಕರಿಸಬೇಕು: ಕಾರವಾರದಲ್ಲಿ ಚರಂಡಿ ನಿರ್ಮಾಣಕ್ಕೆ ಸಹ ಜಾಗ ಬಿಡದೇ ಕಂಪೌಂಡ್‌ ನಿರ್ಮಿಸಿಕೊಳ್ಳಲಾಗಿದೆ. ರಸ್ತೆ ಪಕ್ಕ ಚರಂಡಿ ನಿರ್ಮಾಣಕ್ಕೆ ಅವಕಾಶವನ್ನು ಕೆಲವು ಕಡೆ ಸ್ಥಳೀಯರು ಬಿಟ್ಟಿಲ್ಲ. ಚರಂಡಿ ನಿರ್ಮಾಣಕ್ಕೆ ಜನ ಸಹಕರಿಸಿದರೆ ಮಳೆ ನೀರು ನಿರ್ವಹಣೆ ಸಾಧ್ಯ. ಮಳೆ ನೀರು ಮನೆ ನುಗ್ಗದಂತೆ ಮತ್ತು ರಸ್ತೆ ಮೇಲೆ ನಿಲ್ಲದಂತೆ ಮಾಡಲು ಅವಕಾಶವಿದೆ. ಚರಂಡಿ ನಿರ್ಮಾಣಕ್ಕೆ ಜನ ಸಹಕರಿಸಬೇಕು ಎಂದು ನಗರಸಭೆ ಸಿಬ್ಬಂದಿ ಹೇಳುತ್ತಿದ್ದಾರೆ.

ಮಳೆ ಪ್ರಮಾಣ ಹೆಚ್ಚಾದಾಗ ನೀರು ಸಹಜವಾಗಿ ಮನೆಗಳಿಗೆ ನುಗ್ಗುತ್ತದೆ. ಇದಕ್ಕೆ ಕಾರಣ ಕಾರವಾರ ನಗರ ಸಮುದ್ರ ಮಟ್ಟದಿಂದ ಕೆಳ ಹಂತದಲ್ಲಿರುವುದು. ಸಾರ್ವಜನಿಕರು ಮನೆ ನಿರ್ಮಿಸುವಾಗ ನೆಲಗಟ್ಟನ್ನು ನಾಲ್ಕು ಅಡಿ ಎತ್ತರ ಇಟ್ಟು ನಿರ್ಮಿಸಿಕೊಳ್ಳಬೇಕಾಗಿದೆ ಎಂಬುದು ಎಂಜಿನಿಯರ್‌ಗಳ ಸಲಹೆ.

ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು: ಪದ್ಮನಾಭನಗರ ಮತ್ತು ಗಿಡ್ಡಾ ರಸ್ತೆ ಹಾಗೂ ಮಹಾದೇವ ನಗರಗಳಿಗೆ ನಗರಸಭೆ ಪೌರಾಯುಕ್ತ ಎಸ್‌.ಯೋಗೇಶ್ವರ ಖುದ್ದಾಗಿ ಭೇಟಿ ನೀಡಿ, ಮಳೆ ನೀರಿನಲ್ಲಿ ಅಡ್ಡಾಡಿದರು. ಪೌರಕಾರ್ಮಿಕರ ನೆರವಿನಿಂದ ಮಳೆ ನೀರು ಹರಿಯಲು ಅಡಚಣೆಯಾದ ಸ್ಥಳಗಳನ್ನು ಬಿಡಿಸಿಕೊಟ್ಟರು. ಎಂಜಿನಿಯರ್‌ ಮೋಹನ್‌ ರಾಜ ಜತೆ ಇದ್ದರು.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.