ಭರವಸೆಯಾಗೇ ಉಳಿದ ವಿಮಾನ ಯಾನ

•ಮೂವರು ಸಚಿವರಿದ್ದರೂ ಕಾರ್ಯರೂಪಕ್ಕೆ ಬಾರದ ಯೋಜನೆ •4 ಕೋಟಿ ವೆಚ್ಚದ ಟರ್ಮಿನಲ್ ಹಾಳು

Team Udayavani, Jul 16, 2019, 11:50 AM IST

bidar-tdy-1..

ಬೀದರ: ನಗರದ ಹೊರವಲಯದ ಚಿದ್ರಿ ಸಮೀಪದ ವಾಯು ನೆಲೆ ತರಬೇತಿ ಕೇಂದ್ರದಲ್ಲಿ ನಿರ್ಮಿಸಲಾದ ನಾಗರಿಕ ವಿಮಾನಯಾನದ ಟರ್ಮಿನಲ್ ಹಾಳಾಗಿದೆ.

ಬೀದರ: ನಗರದಲ್ಲಿ ನಾಗರಿಕ ವಿಮಾನಯಾನ ಸೇವೆ ಪ್ರಾರಂಭಿಸುವ ನಿಟ್ಟಿನಲ್ಲಿ 13 ವರ್ಷಗಳ ಹಿಂದೆ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಟರ್ಮಿನಲ್ ಸಂಪೂರ್ಣ ಹಾಳಾಗಿದ್ದು, ಜನರ ತೆರಿಗೆ ಹಣ ಪೋಲಾಗಿದೆ.

ಬೀದರ ನಗರದಲ್ಲಿ ನಾಗರಿಕ ವಿಮಾನಯಾನ ಸೇವೆ ಪ್ರಾರಂಭಿಸುವ ನಿಟ್ಟಿನಲ್ಲಿ ಸರ್ಕಾರ 4ಕೋಟಿ ವೆಚ್ಚದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮಂಜೂರು ನೀಡಿತ್ತು. ತಾತ್ಕಾಲಿಕವಾಗಿ ಟರ್ಮಿನಲ್ ನಿರ್ಮಾಣಗೊಂಡಿದ್ದರೂ ಕೂಡ ನಾಗರಿಕ ವಿಮಾನ ಇಲ್ಲಿಂದ ಆರಂಭವಾಗಿಲ್ಲ. ಅಲ್ಲದೆ, ಟರ್ಮಿನಲ್ ಕಾಮಗಾರಿ ವಿರುದ್ಧ ಕೂಡ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸುತ್ತ್ತಿದ್ದು, ಗುತ್ತಿಗೆದಾರರು ಸೂಕ್ತವಾಗಿ ಟರ್ಮಿನಲ್ ನಿರ್ಮಿಸಿದ್ದರೆ ಇಂದು ದೊಡ್ಡಮಟ್ಟದಲ್ಲಿ ದುರಸ್ತಿ ಕಾಮಗಾರಿ ಬರುತ್ತಿರಲಿಲ್ಲ. ಟರ್ಮಿನಲ್ನ ಟೈಲ್ಸ್ಗಳು ಕಿತ್ತು ಹೋಗಿವೆ. ಮೇಲ್ಛಾವಣಿ ಪೂರ್ತಿ ಹಾಳಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕಳೆದ ಬಜೆಟ್ ಅಧಿವೇಶನದಲ್ಲಿ ಇಲ್ಲಿನ ಟರ್ಮಿನಲ್ ದುರಸ್ತಿ ಸೇರಿದಂತೆ ಇತರೆ ಕಾಮಗಾರಿಗಾಗಿ 32 ಕೋಟಿ ಅನುದಾನ ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದ್ದು, ಇಂದಿಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಯೋಜನಾಧಿಕಾರಿ ಬಲಭೀಮ ಕಾಂಬಳೆ ಮಾಹಿತಿ ನೀಡಿದ್ದಾರೆ. ಟರ್ಮಿನಲ್ ಸುತ್ತಲಿನ ಪ್ರದೇಶದಲ್ಲಿ ಹೆಚ್ಚುವರಿ ಭೂಮಿ ಅವಶ್ಯಕತೆ ಇರುವ ಕಾರಣ ಈಗಾಗಲೇ ಭೂಮಿ ಗುರುತಿಸಲಾಗಿದೆ. ದಾಖಲೆಗಳನ್ನು ಸಿದ್ದಪಡಿಸಿದ್ದು, ಕೆಲ ದಿನಗಳಲ್ಲಿ ನೋಂದಣಿ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.

ವಿಮಾನಯಾನ ಭರವಸೆಗೆ ಸೀಮಿತ: ಜಿಲ್ಲೆಯ ಜನಪ್ರತಿನಿಧಿಗಳು ಅನೇಕ ವರ್ಷಗಳಿಂದ ವಿಮಾನಯಾನ ಶುರು ಮಾಡುವುದಾಗಿ ಹೇಳುತ್ತಾ ಬಂದಿದ್ದು, ಈ ವರ್ಷ ಶುರುವಾಗುತ್ತೆ, ಮುಂದಿನ ಆರು ತಿಂಗಳಲ್ಲಿ, ಮೂರು ತಿಂಗಳಲ್ಲಿ ಶುರುವಾಗಲಿದೆ ಎಂದು ಹೇಳಿ ಅನೇಕ ವರ್ಷಗಳು ಕಳೆದರೂ ಕೂಡ ಜನಪ್ರತಿನಿಧಿಗಳು ನೀಡಿದ ಭರವಸೆ ಈಡೇರಿಲ್ಲ. ಅಲ್ಲದೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ವಿವಿಧ ಪಕ್ಷದ ಮುಖಂಡರು ಬೀದರ ನಗರದಲ್ಲಿ 2019ರ ಆಗಸ್ಟ್‌ ತಿಂಗಳವರೆಗೆ ನಾಗರಿಕ ವಿಮಾನಯಾನ ಶುರು ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇಂದಿಗೂ ಕೂಡ ಕಾಮಗಾರಿ ಪ್ರಾರಂಭಿಸುವ ನಿಟ್ಟಿಲ್ಲಿ ಯಾವ ಜನಪ್ರತಿನಿಧಿಗಳೂ ಮುಂದಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್‌ ಹಾಗೂ ಸಂಸದ ಭಗವಂತ ಖೂಬಾ ಅವರು ಆಗಸ್ಟ್‌ ತಿಂಗಳಲ್ಲಿ ಬೀದರ ನಗರದಿಂದ ನಾಗರಿಕ ವಿಮಾನ ಯಾನ ಶುರು ಆಗುತ್ತದೆ ಎಂಬ ಭರವಸೆಗಳನ್ನು ನೀಡಿದ್ದರು. ಆಗಸ್ಟ್‌ ತಿಂಗಳಲ್ಲಿ ವಿಮಾನಯಾನ ಚಾಲನೆ ಸಿಗುವುದು ಬಹುತೇಕ ಅನುಮಾನವಾಗಿದ್ದು, ರಾಜಕಾರಣಿಗಳ ಭರವಸೆ ಮತ್ತೆ ಹುಸಿಯಾಗುವ ಸಾಧ್ಯತೆ ಇದೆ ಎಂಬುದು ನಿಚ್ಚಳವಾಗುವ ಲಕ್ಷಣಗಳಿವೆ.

ಸಚಿವರಿಂದ ಸಾಧ್ಯವಿಲ್ಲವೇ?: ಸದ್ಯ ಬೀದರ್‌ ಜಿಲ್ಲೆಯಲ್ಲಿ ಮೂರು ಜನ ಸಚಿವರು ಇದ್ದಾರೆ. ಸಹಕಾರ, ಗಣಿ ಮತ್ತು ಭೂ-ವಿಜ್ಞಾನ ಹಾಗೂ ಕ್ರೀಡಾ ಸಚಿವರಿದ್ದು, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ನಗರದಲ್ಲಿ ವಿಮಾನ ಯಾನ ಶುರು ಮಾಡಿಸಲು ಯಾಕೆ ಪ್ರಯತ್ನಿಸುತ್ತಿಲ್ಲ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಮೂರು ಜನ ಸಚಿವರು ಸರ್ಕಾರದ ಮೇಲೆ ಒತ್ತಾಡ ಹಾಕಿದ್ದರೆ ಶ್ರೀಘ್ರದಲ್ಲಿ ಸಾರ್ವಜನಿಕರಿಗೆ ವಿಮಾನ ಯಾನ ಸೇವೆ ದೊರೆಯುತ್ತದೆ. ಆದರೆ, ಸಚಿವರು ವಿಮಾನಯಾನ ಆರಂಭಕ್ಕೆ ಹೆಚ್ಚು ಆಸಕ್ತಿ ತೋರಿಸಬೇಕು ಎಂಬ ಬೇಡಿಕೆ ಜನರದಾಗಿದೆ.

•ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.