ಭುವನೇಂದ್ರ ಕಿದಿಯೂರು ಅವರಿಗೆ ಗೌರವಾರ್ಪಣೆ
Team Udayavani, Jul 17, 2019, 5:09 AM IST
ಮಲ್ಪೆ: ಕಿದಿಯೂರು ಶ್ರೀ ವಿಷ್ಣುಮೂರ್ತಿ ಮತ್ತು ವನದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಸಮಿತಿಯ ಗೌರವಾಧ್ಯಕ್ಷ, ಉಡುಪಿ ಕಿದಿಯೂರು ಹೋಟೆಲಿನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು ಅವರ 75ರ ಸಂಭ್ರಮದ ಪ್ರಯುಕ್ತ ಅವರನ್ನು ಸಮ್ಮಾನಿಸಿ, ಗೌರವಿಸುವ ಕಾರ್ಯಕ್ರಮ ಜು. 14ರಂದು ದೇವಸ್ಥಾನದಲ್ಲಿ ನಡೆಯಿತು.
ಶುಭಶಂಸನೆ ಮಾಡಿದ ಪ್ರೋ ರಾಧಾಕೃಷ್ಣ ಆಚಾರ್ಯ ಅವರು ಭುವನೇಂದ್ರ ಕಿದಿಯೂರು ಅವರು ಧಾರ್ಮಿಕ ವಾಗಿ, ಶೈಕ್ಷಣಿಕವಾಗಿ ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆ ಅನನ್ಯವಾದುದು. ಅವರ ಸೇವೆ ನಿರಂತರವಾಗಿ ನಡೆಯುವಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹ ಸದಾ ಅವರ ಮೇಲಿರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ದೇವಸ್ಥಾನದ ಮೊಕೇ¤ಸರ ಕೆ. ಎಸ್. ಗೋಪಾಲಕೃಷ್ಣ ಭಟ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಕರ್ನಾಟಕ ಬ್ಯಾಂಕಿನ ಎಜಿಎಂ. ಗೋಪಾಲಕೃಷ್ಣ ಸಾಮಗ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ರಾಮಚಂದ್ರ ಕಿದಿಯೂರು, ಪ್ರಧಾನ ಕಾರ್ಯದಶಿ ಕೃಷ್ಣ ಕುಮಾರ್ ಶೆಟ್ಟಿ, ಸುಜಯ ಕುಮಾರ್, ದೇವಸ್ಥಾನದ ಅರ್ಚಕರಾದ ವಾಸುದೇವ ಭಟ್, ರಾಮಚಂದ್ರ ಭಟ್, ವಿಕ್ರಂ ಭಟ್, ವಾದಿರಾಜ್ ಭಟ್, ಆನಂದ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಕಿದಿಯೂರು ಅವರು ಸ್ವಾಗತಿಸಿದರು. ದಯಾನಂದ ಬಿ. ಅವರು ಕಾರ್ಯಕ್ರಮ ನಿರೂ ಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ