“ಸ್ವಚ್ಛತೆಯಲ್ಲಿ ಭಾಗವಹಿಸುವುದು ಪುಣ್ಯದ ಕೆಲಸ’

ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನ

Team Udayavani, Jul 17, 2019, 5:00 AM IST

n-21

ಸುರತ್ಕಲ್‌: ಸ್ವಚ್ಛತಾ ಶ್ರಮ ದಾನದಲ್ಲಿ ಭಾಗವಹಿಸುವುದು ದೇವತಾ ಕಾರ್ಯದಷ್ಟೇ ಪುಣ್ಯದ ಕೆಲಸ. ಕಸದ ಸೂಕ್ತ ವಿಲೇವಾರಿ ಮಾಡದೆ ಇರುವುದರಿಂದಾಗಿ ಮನುಕುಲವು ಬೇರೆ ಬೇರೆ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಿರಿಯರು ಕೊಟ್ಟಂತಹ ಸುಂದರವಾದ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ನೀಡಬೇಕಾದ ಅಗತ್ಯವಿದೆ ಎಂದು ಆಲ್‌ ಬದ್ರಿಯಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಅಬ್ದುಲ್‌ ಖಾದರ್‌ ಹೇಳಿದರು.

ರಾಮಕೃಷ್ಣ ಮಿಷನ್‌ ಮಂಗಳೂರು, ನಾಗರಿಕ ಸಲಹಾ ಸಮಿತಿ ಸುರತ್ಕಲ್‌ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಎಂ.ಆರ್‌.ಪಿ.ಎಲ್‌. ನೆರವಿನೊಂದಿಗೆ ನಡೆಯುವ ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ 39ನೇ ವಾರದ ಸ್ವತ್ಛತಾ ಅಭಿಯಾನಕ್ಕೆ ಕೃಷ್ಣಾಪುರ 7ನೇ ಬ್ಲಾಕ್‌ ಪರಿಸರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಆಲ್‌ ಬದ್ರಿಯಾ ಸಂಸ್ಥೆಯ ಸಂಚಾಲಕ ಇಕ್ಬಾಲ್‌ ಮಾತನಾಡಿ, ರಾಮಕೃಷ್ಣ ಮಿಷನ್‌ ವತಿಯಿಂದ ನಡೆಯುವ ಸತ್ಕಾರ್ಯದಲ್ಲಿ ಪ್ರತಿಯೋರ್ವ ನಾಗರಿಕರು ಭಾಗವಹಿಸಿ ರಾಷ್ಟ್ರಪಿತ ಗಾಂಧೀಜಿಯವರು ಕಂಡಂತಹ ಸುಂದರ ದೇಶದ ಕನಸನ್ನು ನನಸು ಮಾಡಬೇಕೆಂದರು.

ಆಲ್‌ ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳು, ಕಾರ್ಯದರ್ಶಿ ಇಬ್ರಾಹಿಂ, ಕೋಶಾಧಿಕಾರಿ ಟಿ.ಎಂ. ಮುಬಾರಕ್‌, ಉಪಾಧ್ಯಕ್ಷ ಸತ್ತಾರ್‌, ಜತೆ ಕಾರ್ಯದರ್ಶಿ ಮೊಹಮ್ಮದ್‌ ಸತ್ತಾರ್‌ ಉಪಸ್ಥಿತರಿದ್ದರು.
ಆಲ್‌ ಬದ್ರಿಯಾ ಶಿಕ್ಷಣ ಸಂಸ್ಥೆಗಳು, ನಾಗರಿಕ ಸಲಹಾ ಸಮಿತಿ, ರೋಟರಿ ಕ್ಲಬ್‌ ಸುರತ್ಕಲ್‌ ಮುಂತಾದ ಸಂಘಟನೆಗಳು ಶ್ರಮದಾನದಲ್ಲಿ ತೊಡಗಿಸಿ ಕೊಂಡವು. ಕಾಲೇಜಿನ ಪ್ರಾಂಶುಪಾಲೆ ವಿಲ್ಮಾ ಡಿಮೆಲ್ಲೋ ನೇತೃತ್ವದ ಶಿಕ್ಷಕಿಯರ ಹಾಗೂ ವಿದ್ಯಾರ್ಥಿನಿಯರ ಒಂದು ತಂಡ ಸಾರ್ವಜನಿಕ ಪಾರ್ಕ್‌ ಕೃಷ್ಣಾಪುರ ಭಾಗದಲ್ಲಿ ಶ್ರಮದಾನದಲ್ಲಿ ತೊಡಗಿಸಿಕೊಂಡಿತು. ಮುಖ್ಯೋಪಾಧ್ಯಾಯ ಸತೀಶ್‌, ಶಿಕ್ಷಕ ಭರತ್‌ ನೇತೃತ್ವದ ವಿದ್ಯಾರ್ಥಿಗಳ ಒಂದು ತಂಡ ಕೃಷ್ಣಾಪುರ 7ನೇ ಬ್ಲಾಕ್‌ನ ಮುಖ್ಯ ರಸ್ತೆಯ ದಕ್ಷಿಣ ಭಾಗದಲ್ಲಿ ಸರಕಾರಿ ಪ್ರೌಢಶಾಲೆಯವರೆಗೆ ಸ್ವತ್ಛತಾ ಶ್ರಮದಾನ ಕೈಗೊಂಡಿತು.

ನಾಗರಿಕ ಸಮಿತಿ ಕುಳಾಯಿ ಅಧ್ಯಕ್ಷ ಭರತ್‌ ಶೆಟ್ಟಿ, ಬಿ.ಎಸ್‌.ಎನ್‌.ಎಲ್‌. ನಿವೃತ್ತ ಉದ್ಯೋಗಿ ಆನಂದ ರಾವ್‌ ನೇತೃತ್ವ¨ ತಂಡ ಮುಖ್ಯ ರಸ್ತೆಯಲ್ಲಿ ಸ್ವತ್ಛತೆಯ ಕಾರ್ಯವನ್ನು ಕೈಗೊಂಡಿತು. ರೋಟರಿ ಕ್ಲಬ್‌ ಸುರತ್ಕಲ್‌ನ ಶ್ರೀನಿವಾಸ್‌ ರಾವ್‌, ಗೋವಿಂದ ದಾಸ ಕಾಲೇಜಿನ ಪ್ರಾಧ್ಯಾಪಕ ರಮೇಶ್‌ ಭಟ್‌, ಬೆಂಗಳೂರಿನ ಅನುರಾಗ್‌ ನೇತೃತ್ವದ ತಂಡ ಆಲ್‌ ಬದ್ರಿಯ ಶಿಕ್ಷಣ ಸಂಸ್ಥೆಗಳ ಹಿಂದಿನ ರಸ್ತೆಗಳಲ್ಲಿ ಶ್ರಮದಾನದಲ್ಲಿ ತೊಡಗಿಸಿಕೊಂಡಿತು.

ಸ್ವಚ್ಛತೆಯ ಬಗ್ಗೆ ಜಾಗೃತಿ
ನಾಗರಿಕ ಸಲಹಾ ಸಮಿತಿ ಸಂಚಾಲಕ ಡಾ| ಕೆ. ರಾಜ್‌ ಮೋಹನ್‌ ರಾವ್‌, ಗೋವಿಂದ ದಾಸ ಕಾಲೇಜಿನ ಪ್ರೊ| ಕೃಷ್ಣ ಮೂರ್ತಿ, ಭಾರತೀಯ ಸೇನೆಯ ನಿವೃತ್ತ ಯೋಧ ಗೋಪಿನಾಥ್‌ ರಾವ್‌ ಶಿಕ್ಷಕಿ ಸಾವಿತ್ರಿ ರಮೇಶ್‌ ಭಟ್‌ ನೇತೃತ್ವದಲ್ಲಿ ಪರಿಸರದ ಅಂಗಡಿ ಮಾಲಕರಿಗೆ, ಮನೆ ಮಾಲಕರಿಗೆ ಸ್ವಚ್ಛತೆಯ ಜಾಗೃತಿ ಮೂಡಿಸಲಾಯಿತು. ಹಸಿ, ಒಣ ಕಸದ ನಿರ್ವಹಣೆಯ ಮಹತ್ವ ಬಗ್ಗೆ ತಿಳಿಸಲಾಯಿತು.

ಸ್ವಚ್ಛತೆಯಲ್ಲಿ ಕೈ ಜೋಡಿಸಿದ ಸಾರ್ವಜನಿಕರು
ಅಧ್ಯಾಪಕರು, ವಿದ್ಯಾರ್ಥಿಗಳಿಂದ ಸ್ವತ್ಛತಾ ಶ್ರಮದಾನ ನಡೆಯುತ್ತಿರುವುದನ್ನು ಕಂಡ ಬಟ್ರಂಟ್‌ ಆ್ಯಂಡ್‌ ರಸೆಲ್‌ ಶಾಲೆಯ ಸಂಚಾಲಕಿ ನಿಷಾ ಲಕ್ಷ್ಮಣ್‌ ನೇತೃತ್ವದಲ್ಲಿ ಸಾರ್ವಜನಿಕರು ಶ್ರಮದಾನದಲ್ಲಿ ಕೈ ಜೋಡಿಸಿದರು. ಆಲ್‌ ಬದ್ರಿಯಾ ಶಿಕ್ಷಣ ಸಂಸ್ಥೆಗಳ 80ಕ್ಕೂ ಮಿಕ್ಕಿ ವಿದ್ಯಾರ್ಥಿಗಳು 40ಕ್ಕೂ ಮಿಕ್ಕಿ ಅಧ್ಯಾಪಕರು, ಸಿಬಂದಿ ವರ್ಗ, ಜುಮ್ಮಾ ಮಸೀದಿಯ ಪದಾ ಧಿಕಾರಿಗಳು ಸಾರ್ವಜನಿಕರು ಸ್ವತ್ಛತಾ ಕಾರ್ಯದಲ್ಲಿ ಕೈಜೋಡಿಸಿದರು. ರಾಮಕೃಷ್ಣ ಮಿಷನ್‌ ಸ್ವತ್ಛ ಸುರತ್ಕಲ್‌ ಅಭಿಯಾನದ ಸಂಯೋಜಕ ಸತೀಶ್‌ ಸದಾನಂದ್‌ ಸ್ವಯಂ ಸೇವಕರಿಗೆ ಅಗತ್ಯ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.