ಬರೀ ಸುಂಕ ಕಟ್ಟಿದರೆ ಸಾಕೇ? ರಸ್ತೆ ಬೇಡವೇ?


Team Udayavani, Jul 17, 2019, 5:00 AM IST

n-25

ಸುರತ್ಕಲ್: ಮುಕ್ಕ- ಸುರತ್ಕಲ್ ಟೋಲ್ಗೇಟ್‌ನಲ್ಲಿ ಸ್ಥಳೀಯ ಖಾಸಗಿ ವಾಹನಗಳಿಗೂ ಟೋಲ್ ಸಂಗ್ರಹಿಸುವ (ಒಂದು ಬಾರಿಗೆ 25 ರೂ. ನಂತೆ) ಪದ್ಧತಿ ಜಾರಿಗೆ ಜಿಲ್ಲಾಧಿಕಾರಿಗಳು ಮೂರು ದಿನಗಳ ತಡೆ ನೀಡಿದ್ದಾರೆ. ವಿವಿಧ ಪಕ್ಷಗಳ ಮುಖಂಡರು, ವಿವಿಧ ನಾಗರಿಕ ಸಮಿತಿಗಳು ಶಾಶ್ವತ ಪರಿಹಾರವಾಗಿ ಸುಂಕ ವಸೂಲು ಮಾಡದಂತೆ ಆದೇಶಿಸ ಬೇಕೆಂದು ಪಟ್ಟು ಹಿಡಿದಿದ್ದಾರೆ.

ವಿಚಿತ್ರವೆಂದರೆ, ಈ ರಸ್ತೆಯಲ್ಲಿ ಸಾಗುವುದೇ ಒಂದು ಪ್ರಯಾಸದ ಸಂಗತಿ. ನಿನ್ನೆಯ ಸಂಚಿಕೆಯಲ್ಲಿ (ಜು. 16) ಪ್ರಕಟಿಸಿದ ಏಳು ಚಿತ್ರಗಳು ಒಂದೇ ಸ್ಥಳದ್ದು. ಅಂದರೆ ಆಸುಪಾಸಿನ ಚಿತ್ರಗಳು. ಹಾಗೆಂದು ಅಲ್ಲಿ ಮಾತ್ರ ಈ ಸಮಸ್ಯೆ ಎಂದುಕೊಂಡರೆ ತಪ್ಪು. ಬೇರೆ ವಾಹನಗಳ ಸವಾರರು ಸುತ್ತಮುತ್ತಲಿನ ಲೆಕ್ಕದಲ್ಲಿ ದುಬಾರಿಯೆನ್ನುವಷ್ಟು ಸುಂಕ ಕಟ್ಟಿಯೂ ಸಾಗಬೇಕಾದದ್ದು ಇಷ್ಟು ಹಾಳಾದ ರಸ್ತೆಯಲ್ಲಿ. ಸುಂಕ ಕಟ್ಟಿ ಜೇಬಿಗೆ ನಷ್ಟ ಮಾಡಿಕೊಂಡದ್ದಲ್ಲದೇ, ವಾಹನಗಳ ದುರಸ್ತಿಗೆ ಮತ್ತಷ್ಟು ಹಣ ಕಟ್ಟಬೇಕಾದ ಅನಿವಾರ್ಯತೆ ಸಾರ್ವಜನಿಕರದ್ದು.

ಪ್ರಮುಖ ರಾಷ್ಟ್ರೀಯ ಹೆದ್ದಾರಿ 66 ರ ಸ್ಥಿತಿ ಹೇಳತೀರದು. ಈ ಹೆದ್ದಾರಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಥೆ ಮುಗಿ ದಂತೆಯೇ ಎನ್ನುತ್ತಾರೆ ಹಲವು ವಾಹನ ಸವಾರರು.

ಪ್ರತ್ಯಕ್ಷ ಅನುಭವ
ಕೇವಲ, ಸುರತ್ಕಲ್ನಿಂದ ಬೈಕಂಪಾಡಿಯವರೆಗೆ ಸಂಚರಿಸಿ. ನಿಮ್ಮ ಅನುಭವಕ್ಕೆ ಬರುವುದು ಯಾವುದೋ ಜಿ.ಪಂ. ಅಥವಾ ಹಳ್ಳಿಯ ಮಣ್ಣಿನ ರಸ್ತೆಯಲ್ಲಿ(ಇತ್ತೀಚೆಗೆ ಕೆಲವು ಜಿ.ಪಂ ರಸ್ತೆಗಳು ಹೆದ್ದಾರಿಯನ್ನೂ ನಾಚಿಸುವಂತಿವೆ ಎನ್ನುವುದೂ ಸುಳ್ಳಲ್ಲ) ಸಾಗಿದಂತೆ ಭಾಸವಾಗುತ್ತದೆ. ಇದಕ್ಕೆ ಪ್ರಮುಖ ಕಾರಣ ಉತ್ತಮ ಗುಣಮಟ್ಟವೆನಿಸದ ರಸ್ತೆ ನಿರ್ಮಾಣ, ಅವೈಜ್ಞಾನಿಕ ತೇಪೆ ಕಾಮಗಾರಿ ಗಳು. ಟೋಲ್ ಗೇಟ್‌ಗೆಅನತಿ ದೂರದಲ್ಲೇ ಒಂದೇ ಮಳೆಗೆ ಹೊಂಡ ನಿರ್ಮಾಣವಾಗಿದೆ. ಹಾಗೆಯೇ ಮುಂದುವರಿಯಿರಿ, ಎನ್‌ಐಟಿಕೆ ಮುಂಭಾಗ ಕೈಗೊಂಡ ತೇಪೆ ಕಾಮಗಾರಿ ಅನುಭವಕ್ಕೆ ಬರುತ್ತದೆ. ಹಾಗಾಗಿ ವಾಹನ ಕುಲುಕಾಟ ತಪ್ಪಿದ್ದಲ್ಲ. ಏರು ತಗ್ಗು, ರಸ್ತೆಯ ಅಂಚಿನಲ್ಲಿ ಕಂದಕಗಳೂ ಸೃಷ್ಟಿಯಾಗಿ ವಾಹನ ಸವಾರರನ್ನು ಅಪಾಯದಲ್ಲಿ ಸಿಲುಕಿಸುವುದಂತೂ ಖಚಿತ.

ಮಳೆ ನೀರು ಸರಾಗವಾಗಿ ಹರಿದು ಹೋಗದೆ ಹೆದ್ದಾರಿ ಬದಿ ಶೇಖರಣೆಗೊಂಡು ದ್ವಿಚಕ್ರ ಸವಾರ ರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ.ಸವಾರರು ಆಯತಪ್ಪಿ ಬಿದ್ದರೂ ಅಚ್ಚರಿ ಪಡುವಂತಿಲ್ಲ. ಇನ್ನು ಸುರತ್ಕಲ್ ಸೂರಜ್‌ ಹೋಟೆಲ್ ಮುಂಭಾಗ ಅಪಾಯಕಾರಿ ತಿರುವು ಮತ್ತು ತಿರುವಿನಲ್ಲಿ ಹೊಂಡ ಅಪಾಯವನ್ನು ಆಹ್ವಾನಿಸುತ್ತಿದೆ. ಇದಾವುದೂ ಸುಂಕ ವಸೂಲು ಮಾಡುವ ಕಂಪೆನಿಗಾಗಲೀ, ರಾಷ್ಟ್ರೀಯ ಹೆದ್ದಾರಿ ಸಚಿವಾಲಯಕ್ಕಾಗಲೀ ತೋರಿಲ್ಲ, ಹಾಗಾಗಿ ದುರಸ್ತಿಗೊಂಡಿಲ್ಲ.

ಎನ್‌ಐಟಿಕೆ ಟೋಲ್ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೆ ಸುಂಕ ರಿಯಾಯಿತಿ ಮೂರು ದಿನಗಳಿ ರಬಹುದು. ಆದರೆ ಶಾಶ್ವತವಾಗಿ ವಸೂಲು ಮಾಡ ಬಾರದೆಂದು ನಾಗರಿಕರ ಪ್ರತಿಭಟನೆ ಆರಂಭವಾಗಿದೆ. ಆದರೆ ರಾ. ಹೆದ್ದಾರಿ ಸಚಿವಾಲಯ, ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಈ ಕೂಡಲೇ ಗಮನಿಸಬೇಕಾದದ್ದು ರಸ್ತೆಯ ಸ್ಥಿತಿ. ಹೀಗಿದ್ದ ಮೇಲೂ ಸುಂಕ ಕಟ್ಟುವ ಜನರ ಸಂಕಷ್ಟಕ್ಕೆ ನೆರವಾಗಬೇಕು. ಈ ನಿಟ್ಟಿನಲ್ಲಿ ಈ ಟೋಲ್ಗೇಟ್ ನ್ನು ತೆಗೆದು ಹಾಕುವತ್ತ ಜಿಲ್ಲಾಡಳಿತ ಸೇರಿ ದಂತೆ ಎಲ್ಲ ಇಲಾಖೆಗಳು ಕಾರ್ಯೋನ್ಮುಖ ವಾಗಬೇಕು. ಇದು ಜನರ ಆಗ್ರಹ.

ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.