ಕ್ಷೌರಿಕನಿಗೆ ಗಂಟಲಿನ ಕ್ಯಾನ್ಸರ್‌: ನೆರವು ಯಾಚನೆ


Team Udayavani, Jul 17, 2019, 5:30 AM IST

n-27

ನಗರ: ಇಬ್ಬರು ಪುಟಾಣಿ ಮಕ್ಕಳು, ವೃತ್ತಿ ಸಣ್ಣದಾದರೂ, ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಆ ಮನೆಯಲ್ಲಿ ಖುಷಿ, ನೆಮ್ಮದಿ ಇತ್ತು. ಆದರೆ ಕೆಲವು ತಿಂಗಳ ಹಿಂದೆ ಮನೆಯ ಆಧಾರ ಸ್ತಂಭವಾದ ಯಜಮಾನನಿಗೆ ಆನಾರೋಗ್ಯ ಕಾಡಿ ಮನೆಯವರ ಕಣ್ಣೀರಿಗೆ ಕಾರಣವಾಗಿದೆ.

ಮುರದಲ್ಲಿ ಸೆಲೂನ್‌ ನಡೆಸುತ್ತ ಬಾಡಿಗೆ ಮನೆಯಲ್ಲಿ ಹಲವು ವರ್ಷಗಳಿಂದ ವಾಸ ಮಾಡುತ್ತಿರುವ ಚಂದ್ರಶೇಖರ ಭಂಡಾರಿ (61) ಸಂಸಾರವನ್ನು ಕಷ್ಟದಲ್ಲೇ ನಿಭಾಯಿಸುತ್ತಿದ್ದರು. ಪತ್ನಿ ಪುಷ್ಪಾ ಹೊಟೇಲ್ಗಳಲ್ಲಿ ಸ್ವಚ್ಛತೆಯ ಕೆಲಸಕ್ಕೆ ತೆರಳಿ ಪತಿಗೆ ನೆರವಾಗುತ್ತಿದ್ದರು. ಅವರ ಪುತ್ರಿ ಲಿಖೀತಾ (7) ಮುರ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದರೆ, ಪುತ್ರ ಹೇಮಂತ್‌ (4) ಅಂಗನವಾಡಿಗೆ ಹೋಗುತ್ತಿದ್ದಾನೆ.

ಕಾಡಿತು ಕ್ಯಾನ್ಸರ್‌
ಚಂದ್ರಶೇಖರ ಭಂಡಾರಿ ಅವರಿಗೆ ಮೂರು ತಿಂಗಳ ಹಿಂದೆ ಅನಾರೋಗ್ಯ ಉಂಟಾದಾಗ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಲಾಯಿತು. ಆಗ ಗಂಟಲು ಕ್ಯಾನ್ಸರ್‌ ಇರುವುದು ಪತ್ತೆಯಾಗಿದೆ. ಅನಂತರ ಮಂಗಳೂರಿನ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ದಾಖಲಾಗಿ 2 ತಿಂಗಳು ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಯಲ್ಲಿ 1.20 ಲಕ್ಷ ರೂ. ಖರ್ಚಾಗಿದ್ದು, ಆಯುಷ್ಮಾನ್‌ ಯೋಜನೆಯ ಮೂಲಕ ಹಾಗೂ ದಾನಿಗಳ ನೆರವಿನಿಂದ ಅದನ್ನು ಭರಿಸಲಾಗಿದೆ. ಆಸ್ಪತ್ರೆಯಲ್ಲಿ ಇನ್ನೂ ಒಂದು ತಿಂಗಳು ಇರುವಂತೆ ಹೇಳಿದರೂ ಮನೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಪುಷ್ಪಾ ಅವರು ಚಂದ್ರಶೇಖರ ಭಂಡಾರಿ ಅವರನ್ನು ಮನೆಗೆ ಕರೆತಂದು ಆರೈಕೆ ಮಾಡುತ್ತಿದ್ದಾರೆ. ತಿಂಗಳ ಅನಂತರ ಮತ್ತೆ ಆಸ್ಪತ್ರೆಗೆ ಹೋಗಿ ಗುಣವಾಗಿದ್ದರೆ ಗಂಟಲಿನ ಬಳಿ ಪ್ಲಾಸ್ಟಿಕ್‌ ಸರ್ಜರಿ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

ಮನೆಯವರ ಪರದಾಟ
ಪತಿಯ ಅನಾರೋಗ್ಯ ಹಾಗೂ ಪತ್ನಿ ಅವರ ಆರೈಕೆಗೆ ಸಮಯ ಮೀಸಲಿಡಬೇಕಾದ ಕಾರಣ ಈ ಕುಟುಂಬದಲ್ಲಿ ಈಗ ದುಡಿಯುವ ಕೈಗಳಿಲ್ಲ. ಪುಟ್ಟ ಮಕ್ಕಳು ಬೇರೆ. ಹೀಗಾಗಿ, ಕುಟುಂಬ ನಿರ್ವಹಣೆ ಹಾಗೂ ಚಿಕಿತ್ಸೆಗೆ ಆರ್ಥಿಕ ಅಡಚಣೆ ಆಗಿದೆ. ದಾನಿಗಳು ನೆರವಾಗುವಂತೆ ಪುಷ್ಪಾ ಮನವಿ ಮಾಡಿದ್ದಾರೆ.

ದಾನಿಗಳು ಪುಷ್ಪಾ ಎನ್‌. ಅವರ ಕರ್ಣಾಟಕ ಬ್ಯಾಂಕ್‌ ಕಬಕ ಶಾಖೆಯ ಖಾತೆ ಸಂಖ್ಯೆ: 4012500101048101, ಐಎಫ್‌ಎಸ್‌ಸಿ ಕೋಡ್‌: ಕೆಎಆರ್‌ಬಿ 0000401ಗೆ ಹಣ ಜಮೆ ಮಾಡಬಹುದು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.