ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ

ಕಡಿಮೆಪಕ್ಷ 2 ವರ್ಷ ತರಬೇತಿ ನೀಡಿರಬೇಕು

Team Udayavani, Jul 17, 2019, 5:41 AM IST

bcci

ಹೊಸದಿಲ್ಲಿ: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದ ಬಳಿಕ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಯು ತಂಡದ ಮುಖ್ಯ ಕೋಚ್‌ ಮತ್ತು ಬೆಂಬಲ ಸಿಬಂದಿಯನ್ನು ಬದಲಾಯಿಸಲು ಹೊರಟಿದೆ. ಕೆಲವೊಂದು ಷರತ್ತುಗಳೊಂದಿಗೆ ಮುಖ್ಯ ಕೋಚ್‌ ಮತ್ತು ಬೆಂಬಲ ಸಿಬಂದಿಗಳ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಬಲ ಸಿಬಂದಿಗಳ ಪಡೆಯಲ್ಲಿ
ಆಮೂಲಾಗ್ರ ಬದಲಾವಣೆ ತರಲು ಬಿಸಿಸಿಐ ಬಯಸಿದೆ. ಹಾಗಾಗಿ ಮುಖ್ಯ ಕೋಚ್‌, ಬ್ಯಾಟಿಂಗ್‌ ಕೋಚ್‌, ಬೌಲಿಂಗ್‌ ಕೋಚ್‌, ಫೀಲ್ಡಿಂಗ್‌ ಕೋಚ್‌, ಫಿಸಿಯೊಥೆರಪಿಸ್ಟ್‌ ಮತ್ತು ಆಡಳಿತ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಜುಲೈ 30ರ ಸಂಜೆ 5 ಗಂಟೆಯ ಮೊದಲು ಅರ್ಜಿ ಸಲ್ಲಿಸಬೇಕಾಗಿದೆ.

ರವಿಶಾಸ್ತ್ರಿ ಅವರನ್ನು 2017ರ ಜುಲೈಯಲ್ಲಿ ಮುಖ್ಯ ಕೋಚ್‌ ಆಗಿ ನೇಮಕ ಮಾಡುವ ಮೊದಲು ಬಿಸಿಸಿಐ 9 ಅಂಶಗಳ ಅರ್ಹತಾ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಹೆಚ್ಚಿನ ಗಮನ ಹರಿಸಿದಂತೆ ಕಾಣಲಿಲ್ಲ. ಈ ಬಾರಿ ಮುಖ್ಯ ಕೋಚ್‌ ಸಹಿತ ತರಬೇತಿ ನೀಡಲಿರುವ ಎಲ್ಲರಿಗೂ ಮೂರು ಅಂಶಗಳ ಅರ್ಹತಾ ಷರತ್ತು ವಿಧಿಸಲಾಗಿದೆ.

ಟೀಮ್‌ ಇಂಡಿಯಾದ ಹಾಲಿ ತರಬೇತಿ ಸಿಬಂದಿ ಆಯ್ಕೆ ಪ್ರಕ್ರಿಯೆಯಲ್ಲಿ ನೇರ ಪ್ರವೇಶ ಪಡೆಯಲಿದ್ದಾರೆ ಎಂದು ಬಿಸಿಸಿಐ ಪ್ರಕಟನೆಯಲ್ಲಿ ತಿಳಿಸಿದೆ.

45 ದಿನಗಳ ವಿಸ್ತರಣಾ ಅವಧಿ
ಹಾಲಿ ಬೆಂಬಲ ಸಿಬಂದಿಗಳಾದ ಶಾಸಿŒ, ಬೌಲಿಂಗ್‌ ಕೋಚ್‌ ಭರತ್‌ ಅರುಣ್‌, ಬ್ಯಾಟಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ಮತ್ತು ಫೀಲ್ಡಿಂಗ್‌ ಕೋಚ್‌ ಆರ್‌. ಶ್ರೀಧರ್‌ ಅವರಿಗೆ 45 ದಿನಗಳ ವಿಸ್ತರಣಾ ಅವಧಿ ನೀಡಲಾಗಿದೆ. ಅವರೆಲ್ಲರೂ ಆ. 3ರಿಂದ ಸೆ. 3ರವರೆಗೆ ನಡೆಯಲಿರುವ ವೆಸ್ಟ್‌ ಇಂಡೀಸ್‌ ಪ್ರವಾಸದವರೆಗೆ ಭಾರತೀಯ ತಂಡದ ಜತೆಗಿರಲಿದ್ದಾರೆ.

ಇವರೆಲ್ಲರೂ ಮತ್ತೆ ಅರ್ಜಿ ಸಲ್ಲಿಸಬಹುದು. ಆದರೆ ಟ್ರೈನರ್‌ ಮತ್ತು ಫಿಸಿಯೋ ಹುದ್ದೆಗೆ ಹೊಸಬರನ್ನು ಆಯ್ಕೆ ಮಾಡಬೇಕಾಗುತ್ತದೆ. ಭಾರತ ಸೆಮಿಫೈನಲ್‌ನಲ್ಲಿ ಸೋತ ಬಳಿಕ ಶಂಕರ್‌ ಬಾಬು ಮತ್ತು ಪ್ಯಾಟ್ರಿಕ್‌ ಫ‌ರ್ಹಾರ್ತ್‌ ಅವರು ಅನುಕ್ರಮವಾಗಿ ಟ್ರೈನರ್‌ ಮತ್ತು ಫಿಸಿಯೋ ಹುದ್ದೆಯನ್ನು ತ್ಯಜಿಸಿದ್ದರು.

ವೆಸ್ಟ್‌ಇಂಡೀಸ್‌ ಪ್ರವಾಸದ ಬಳಿಕ ಸೆ. 15ರಿಂದ ಭಾರತದ ತವರಿನ ಋತು ಆರಂಭವಾಗಲಿದೆ. ಮೊದಲ ಸರಣಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿದೆ. ಈ ವೇಳೆ ಎಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

2017ರಲ್ಲಿ ಶಾಸಿŒ ನೇಮಕ
ಅನಿಲ್‌ ಕುಂಬ್ಳೆ ವಿವಾದಾತ್ಮಕವಾಗಿ ಹುದ್ದೆ ತ್ಯಜಿಸಿದ ಬಳಿಕ ರವಿಶಾಸಿŒ ಅವರನ್ನು 2017ರಲ್ಲಿ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿತ್ತು. 57ರ ಹರೆಯದ ಅವರು ಆಗಸ್ಟ್‌ 2014ರಿಂದ ಜೂನ್‌ 2016ರ ವರೆಗೆ ಕ್ರಿಕೆಟ್‌ ನಿರ್ದೇಶಕರಾಗಿಯೂ

ಕರ್ತವ್ಯ ನಿರ್ವಹಿಸಿದ್ದರು. ಅವರು ಮುಖ್ಯ ಕೋಚ್‌ ಆಗಿದ್ದ ವೇಳೆ ಭಾರತೀಯ ತಂಡ ಐಸಿಸಿಯ ಪ್ರಮುಖ ಕೂಟಗಳಲ್ಲಿ ಪ್ರಶಸ್ತಿ ಗೆಲ್ಲಲಿಲ್ಲ. ಆದರೆ ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯದಲ್ಲಿ ಚೊಚ್ಚಲ ಬಾರಿ ಟೆಸ್ಟ್‌ ಸರಣಿ ಗೆದ್ದ ಸಾಧನೆ ಮಾಡಿತ್ತು.

ಮೂರು ಷರತ್ತುಗಳು
ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡಿಮೆಪಕ್ಷ ಎರಡು ವರ್ಷ ಟೆಸ್ಟ್‌ ಆಟವಾಡುವ ರಾಷ್ಟ್ರಕ್ಕೆ ತರಬೇತಿ ನೀಡಿರಬೇಕು ಅಥವಾ ಅಸೋಸಿಯೆಟ್‌ ಸದಸ್ಯ/ ಎ ತಂಡ/ ಐಪಿಎಲ್‌ ತಂಡಕ್ಕೆ ಮೂರು ವರ್ಷ ತರಬೇತಿ ನೀಡಿರಬೇಕು. ಅರ್ಜಿದಾರರು 30 ಟೆಸ್ಟ್‌ ಅಥವಾ 50 ಏಕದಿನ ಪಂದ್ಯಗಳನ್ನು ಆಡಿರಬೇಕು. ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಫೀಲ್ಡಿಂಗ್‌ ಕೋಚ್‌ಗಳಿಗೆ ಈ ಷರತ್ತು ಅನ್ವಯವಾಗಲಿದೆ. ಆದರೆ ಪಂದ್ಯ ಆಡಿದ ಸಂಖ್ಯೆಗಳಲ್ಲಿ ವ್ಯತ್ಯಾಸವಿರಲಿದೆ. ಈ ಮೂರು ಹುದ್ದೆಗಳಿಗೆ ಅರ್ಜಿ ಹಾಕುವವರು ಕಡಿಮೆಪಕ್ಷ 10 ಟೆಸ್ಟ್‌ ಅಥವಾ 25 ಏಕದಿನ ಆಡಿರಬೇಕು ಮತ್ತು 60 ವರ್ಷ ದಾಟಿರಬಾರದು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.