ಹೆಬ್ಬಾಳದ ಕಾಮಗಾರಿಗಳಿಗೆ “ಐಡಿಯಾ’ ಕೊಡಿ


Team Udayavani, Jul 17, 2019, 3:08 AM IST

hebalada

ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಈಗಾಗಲೇ ಕಾಮಗಾರಿಗಳು ಸ್ಪರ್ಧೆಗೆ ಇಳಿದಂತೆ ಪ್ರಾರಂಭವಾಗಿವೆ. ಹೆಬ್ಬಾಳವನ್ನು (ಹೆಬ್ಬಾಳ ಜಂಕ್ಷನ್‌)ಕೇಂದ್ರೀಕರಿಸಿದಂತೆ ಮೆಟ್ರೋ ಮಾರ್ಗ, ಸಬ್‌ಅರ್ಬನ್‌ ರೈಲುನಿಲ್ದಾಣ, ಬಿಎಂಟಿಸಿ ಡಿಪೋ ಘಟಕ ಮತ್ತು ರಸ್ತೆ ವಿಸ್ತೀರ್ಣದ ಸೇರಿದಂತೆ ಹಲವು ಕಾಮಗಾರಿಗಳು ಪ್ರಾರಂಭವಾಗಲಿದೆ. ಜನರ ಸಹಭಾಗಿತ್ವ, ಅಧಿಕಾರಿಗಳ ಸಮನ್ವಯ ಸಾಧಿಸಲು ಸಿಟಿಜನ್‌ ಫಾರ್‌ ಸಸ್ಟೇನೆಬಿಲಿಟಿ ಸಂಸ್ಥೆ “ಎ ಬೆಟರ್‌ ಹೆಬ್ಬಾಳ’ ಆಂದೋಲನದ ಮೂಲಕ ಸಾರ್ವಜನಿಕರಿಂದ “ಐಡಿಯಾ’ ಆಹ್ವಾನಿಸಿದೆ.

ಇತ್ತೀಚಿನ ದಿನಗಳಲ್ಲಿ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯ ಕೊರತೆಯಿಂದ ಹಲವು ಯೋಜನೆಗಳು ಹಳ್ಳ ಹಿಡಿದಿವೆ. ಈಗ ಒಂದೇ ಪ್ರದೇಶದಲ್ಲಿ ನಾಲ್ಕರಿಂದ ಐದು ಕಾಮಗಾರಿಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಯು ಅಧಿಕಾರಿಗಳು ಹೇಗೆ ಸಮನ್ವಯ ಸಾಧಿಸುತ್ತಾರೆ ಎನ್ನುವ ಪ್ರಶ್ನೆ ಸಹಜ. ಈ ನಿಟ್ಟಿನಲ್ಲಿ “ಸಿಟಿಜನ್‌ ಫಾರ್‌ ಸಸ್ಟೇನೆಬಿಲಿಟಿ’ ಸಂಸ್ಥೆ ಹೆಬ್ಬಾಳದಲ್ಲಿ ನಡೆಯಲಿರುವ ಯೋಜನೆಗಳಿಗೆ ಜನ ಮತ್ತು ವಿವಿಧ ಇಲಾಖೆಗಳ ನಡುವೆ ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಲು, ಸ್ಪರ್ಧೆ ಮತ್ತು ಚರ್ಚೆಗಳನ್ನು ಪ್ರಾರಂಭಿಸಿದೆ.

ಸಿಟಿಜನ್‌ ಫಾರ್‌ ಸಸ್ಟೇನೆಬಿಲಿಟಿ ಸಂಸ್ಥೆ “ಎ ಬೆಟರ್‌ ಹೆಬ್ಬಾಳ’ ವಿನ್ಯಾಸ ಮತ್ತು ಆಲೋಚನೆ ಎನ್ನುವ ಆಂದೋಲನ ಪ್ರಾರಂಭಿಸಿದ್ದು, ಸಾರ್ವಜನಿಕರಿಂದ “ಐಡಿಯಾ’ ಆಹ್ವಾನಿಸಿದೆ. ಜು. 21ರವರೆಗೆ ಸಂಸ್ಥೆಯ ವೆಬ್‌ಸೈಟ್‌ https://www.cifos.org/events/abetterhebbal ಗೆ ನೊಂದಾಯಿಸಿಕೊಳ್ಳಬಹುದು. ನೊಂದಾಯಿಸಿಕೊಂಡವರು ಆ.18ರ ಒಳೆಗೆ ಹೆಬ್ಬಾಳದಲ್ಲಿ ನಡೆಯಲಿರುವ ಕಾಮಗಾರಿಗಳ ಬಗ್ಗೆ ತಮ್ಮ ಆಲೋಚನೆ ಮತ್ತು ಸಲಹೆಗಳನ್ನು ಹಂಚಿಕೊಳ್ಳಬಹುದು. ಉತ್ತಮ ಆಲೋಚನೆ ಕಳುಹಿಸುವ 10ಜನರನ್ನು ಸಿಟಿಜನ್‌ ಫಾರ್‌ ಸಸ್ಟೇನೆಬಿಲಿಟಿ ಸಂಸ್ಥೆ ಆಯ್ಕೆ ಮಾಡಲಿದ್ದು, ಇವರಲ್ಲಿ ಅತ್ಯುತ್ತಮ ಆಲೋಚನೆ ನೀಡಿದವರಿಗೆ ನಗರ ಭೂಸಾರಿಗೆ ನಿರ್ದೇಶನಾಲಯ 10ಲಕ್ಷ ರೂ. ಬಹುಮಾನ ನೀಡಲಿದೆ.

“ಹೆಬ್ಬಾಳದಲ್ಲಿ ಎಲಿವೇಟರ್‌ ಕಾರಿಡಾರ್‌ ಸೇರಿದಂತೆ ಹಲವು ಪ್ರಮುಖ ಯೋಜನೆಗಳು ಬರಲಿವೆ. ಹೀಗಾಗಿ, ಈ ಭಾಗದಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಅಂದಾಜು 8ಲಕ್ಷ ಜನ ಸಂದಣಿ ಮತ್ತು ವಾಹನಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹಲವು ಕಾಮಗಾರಿಗಳು ಪ್ರಾರಂಭವಾಗುವುದರಿಂದ ಸಾರ್ವಜನಿಕರಿಗೂ ಕಿರಿಕಿರಿ ಉಂಟಾಗಲಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವುದು ಮುಖ್ಯ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ನಡುವೆ ಚರ್ಚೆಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ’ ಎನ್ನುತ್ತಾರೆ ಸಿಟಿಜನ್‌ ಫಾರ್‌ ಸಸ್ಟೇನೆಬಿಲಿಟಿ ಸಂಸ್ಥೆಯ ಸಹ ಸಂಸ್ಥಾಪಕ ಸುಬ್ಬಯ್ಯ.

” ಯೋಜನೆ ಪೂರ್ಣಗೊಂಡ ಮೇಲೆ ಸಾರ್ವಜನಿಕರಿಂದ ಆಕ್ಷೇಪವ್ಯಕ್ತವಾಗುತ್ತವೆ ಮತ್ತು ಈ ಯೋಜನೆಗಳಿಗೆ ಸಾರ್ವಜನಿಕರಲ್ಲಿ ಇನ್ನೂ ಉತ್ತಮವಾದ ಆಲೋಚನೆಗಳಿರಬಹುದು. ಅದನ್ನು ಗುರುತಿಸಿ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ವೆಬ್‌ಸೈಟ್‌ನಲ್ಲಿ ನೊಂದಾಯಿಸಿಕೊಳ್ಳುವವರಿಗೆ ವಿವಿಧ ಕಾಮಗಾರಿಗಳ ವಿವಿರವನ್ನೂ ನೀಡಲಾಗುವುದು’ ಎಂದು ಅವರು ವಿವರಿಸಿದರು.

ನೀವೂ ಭಾಗವಹಿಸಿ: ಆಂದೋಲನದಲ್ಲಿ ನೀವೂ ಭಾಗವಹಿಸಬಹುದು. ನಿಮ್ಮ ಸಲಹೆ ಮತ್ತು ಆಲೋಚನೆಗಳನ್ನು ಇಲ್ಲಿ ಹಂಚಿಕೊಳ್ಳಬಹುದು. ಇದರಲ್ಲಿ ಭಾಗವಹಿಸುವುದಕ್ಕೆ ತಾಂತ್ರಿಕ ನೈಪುಣ್ಯತೆಯ ಅಗತ್ಯತೆ ಇಲ್ಲ ಎಂದು ಸಿಟಿಜನ್‌ ಫಾರ್‌ ಸಸ್ಟೇನೆಬಿಲಿಟಿ ಸ್ಪಷ್ಟಪಡಿಸಿದೆ. ವೆಬ್‌ಸೈಟ್‌ ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಲಭ್ಯವಿದೆ https://www.cifos.org/events/abetterhebbal ಮಾಹಿತಿಗೆ ಸಂರ್ಪಕಿಸಬಹುದು.

ಉತ್ತಮ ಆಲೋಚನೆಗೆ ಬಹುಮಾನ: ಸಿಟಿಜನ್‌ ಫಾರ್‌ ಸಸ್ಟೇನೆಬಿಲಿಟಿ ಆಯ್ಕೆ ಮಾಡುವ 10 ಜನರಲ್ಲಿ ಅತ್ಯುತ್ತಮ ಆಲೋಚನೆಯುಳ್ಳವರಿಗೆ ಪ್ರಶಸ್ತಿಯೂ ಸಿಗಲಿದೆ. ತೀರ್ಪುಗಾರರಾಗಿ ವಿವಿಧ ಇಲಾಖೆಯ ಅಧಿಕಾರಿಗಳೇ ಭಾಗವಹಿಸಲಿದ್ದು, ಇದಕ್ಕಾಗಿ ನಗರ ಭೂಸಾರಿಗೆ ನಿರ್ದೇಶನಾಲಯ 10ಲಕ್ಷರೂ. ಮೀಸಲಿರಿಸಿದೆ.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.