ಪ್ಲಾಸ್ಟಿಕ್‌ ಬಳಕೆ: ದಂಡ ಪ್ರಯೋಗ


Team Udayavani, Jul 17, 2019, 3:09 AM IST

plastic-ba

ಬೆಂಗಳೂರು: ನಗರದಲ್ಲಿ ಪ್ಲಾಸ್ಟಿಕ್‌ ಬಳಸುವ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಿಸುವ ಅಸ್ತ್ರವನ್ನು ಬಿಬಿಎಂಪಿ ಮುಂದುವರಿಸಿದೆ.

ಪ್ಲಾಸ್ಟಿಕ್‌ ಬಳಕೆಯ ನಿಷೇಧ ಆಂದೋಲನದ ಭಾಗವಾಗಿ ಪಾಲಿಕೆಯ ಎಂಟು ವಲಯಗಳ ಪ್ರಮುಖ ಸ್ಥಳಗಳಲ್ಲಿರುವ ಸಗಟು ವ್ಯಾಪಾರ ಮಳಿಗೆಗಳ ಮತ್ತು ಅಂಗಡಿ ಮಾಲೀಕರ ಮೇಲೆ ಪಾಲಿಕೆಯ ಆರೋಗ್ಯಾಧಿಕಾರಿ ನೇತೃತ್ವದ ತಂಡಗಳು ದಾಳಿ ನಡೆಸಿದ್ದು,

ಪ್ಲಾಸ್ಟಿಕ್‌ ಕೈ ಚೀಲ, ತಟ್ಟೆ, ಪಾಲಿಥಿನ್‌ ಬ್ಯಾಗ್‌ ಸೇರಿದಂತೆ ವಿವಿಧ ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನ ಮಾರಾಟ ಮಾಡುತ್ತಿದ್ದ 559 ಮಳಿಗೆಗಳು ಮತ್ತು 439 ಬೀದಿಬದಿ ವ್ಯಾಪಾರಿ ಅಂಗಡಿಗಳಿಂದ ಒಟ್ಟು 1,335 ಕೆ.ಜಿ ಪ್ಲಾಸ್ಟಿಕ್‌ ಜಪ್ತಿ ಮಾಡಿದ್ದು, 4.36 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡುವ ಆಂದೋಲನಕ್ಕೆ ಸೋಮವಾರ ಮೇಯರ್‌ ಚಾಲನೆ ನೀಡಿದ್ದರು. ಸೋಮವಾರ 2.95 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. ಮಂಗಳವಾರ ಕಾರ್ಯಾಚರಣೆ ಮುಂದುವರಿದಿದ್ದು, 4.36 ಲಕ್ಷ ರೂ. ಮೊತ್ತದ ದಾಖಲೆ ದಂಡ ಸಂಗ್ರಹಿಸಲಾಗಿದೆ.

ದಕ್ಷಿಣ ವಲಯದಲ್ಲಿ ಶ್ರೀನಗರ, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್‌, ಕೋರಮಂಗಲ ಕ್ಲಬ್‌ ರಸ್ತೆ, ಮಡಿವಾಳ ಸಂತೆ, ಜಯನಗರ 2ನೇ ಬ್ಲಾಕ್‌ ಹಾಗೂ 8, 9ನೇ ಮುಖ್ಯ ರಸ್ತೆಗಳ ಸುತ್ತಮುತ್ತಲಿನ ಮಳಿಗೆಗಳ ಮೇಲೆ ದಾಳಿ ನಡೆಸಿ, 84 ಕೆ.ಜಿ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳಲಾಗಿದ್ದು, 51,500 ಸಾವಿರ ರೂ. ದಂಡ ಸಂಗ್ರಹಿಸಲಾಗಿದೆ.

ಪಶ್ಚಿಮ, ಪೂರ್ವ, ಬೊಮ್ಮನಹಳ್ಳಿ ಹಾಗೂ ಆರ್‌.ಆರ್‌. ನಗರ ವಲಯಗಳ ವಿವಿಧ ವಾರ್ಡ್‌ಗಳಲ್ಲಿರುವ ಅಂಗಡಿಗಳಲ್ಲಿ ತಪಾಸಣೆ ನಡೆಸಿ ಒಟ್ಟು 725 ಕೆ.ಜಿ. ಪ್ಲಾಸ್ಟಿಕ್‌ ಜಪ್ತಿ ಮಾಡಿ 2,69,500 ರೂ. ದಂಡ ಸಂಗ್ರಹಿಸಲಾಗಿದೆ.

ಮಹದೇವಪುರ ವಲಯದ ರಾಮಮೂರ್ತಿನಗರ ಮುಖ್ಯರಸ್ತೆ, ಹೊರಮಾವು, ಕಗ್ಗದಾಸಪುರ ಮುಖ್ಯರಸ್ತೆ, ಬೆಳ್ಳಂದೂರು, ದೇವಸಂದ್ರ, ದೊಡ್ಡನೆಕ್ಕುಂದಿ ಹಾಗೂ ವರ್ತೂರು ಮುಖ್ಯರಸ್ತೆಗಳಲ್ಲಿರುವ 46 ಮಳಿಗೆಗಳಲ್ಲಿ ತಪಾಸಣೆ ನಡೆಸಿ 43 ಸಾವಿರ ರೂ. ದಂಡ ಹಾಗೂ ದಾಸರಹಳ್ಳಿ ವಲಯದ ನೆಲಗದರನಹಳ್ಳಿ,

ಎಚ್‌ಎಂಟಿ ಬಡಾವಣೆ, ಚೊಕ್ಕಸಂದ್ರ, ಯಲಹಂಕ ವಲಯದ ಅಮೃತನಗರ, ಭದ್ರಪ್ಪ ಲೇಔಟ್‌, ಯಲಹಂಕ ಬಿಬಿ ರಸ್ತೆ, ಕಟ್ಟಿಗೇನಹಳ್ಳಿ, ದೊಡ್ಡಬೊಮ್ಮಸಂದ್ರ ಹಾಗೂ ಪುಟ್ಟೇನಹಳ್ಳಿಯಲ್ಲಿರುವ ಮಳಿಗೆಗಳಲ್ಲಿ ತಪಾಸಣೆ ನಡೆಸಿ ಒಟ್ಟು 72 ಸಾವಿರ ರೂ. ದಂಡ ಸಂಗ್ರಹ ಮಾಡಲಾಗಿದೆ.

ಟಾಪ್ ನ್ಯೂಸ್

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.