ಮಂಗಳೂರು: ಹಜ್ ಯಾತ್ರೆ ಇಂದು ಆರಂಭ
Team Udayavani, Jul 17, 2019, 5:37 AM IST
ಮಂಗಳೂರು: ಮಂಗಳೂರು ಹಜ್ ನಿರ್ವಹಣ ಸಮಿತಿಯ ಮೂಲಕ ಈ ವರ್ಷದ ಹಜ್ ಯಾತ್ರಿಕರನ್ನು ಕಳುಹಿಸಿ ಕೊಡುವ ಕಾರ್ಯ ಜು. 17ರಿಂದ ಆರಂಭವಾಗಲಿದ್ದು, 19ರ ವರೆಗೆ ನಡೆಯಲಿದೆ.
ಹಜ್ ಯಾತ್ರೆಯ ಉದ್ಘಾಟನೆ ಸಮಾರಂಭ ಬುಧವಾರ ಬೆಳಗ್ಗೆ 10.30ಕ್ಕೆ ಬಜಪೆ ಅನ್ಸಾರ್ ಪಬ್ಲಿಕ್ ಸ್ಕೂಲ್ನಲ್ಲಿ ನೆರವೇರಲಿದೆ.
ಮೂರು ದಿನಗಳಲ್ಲಿ ಐದು ವಿಮಾನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯ 750 ಹಜ್ ಯಾತ್ರಾರ್ಥಿ ಗಳು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಮದೀನಾ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.
ಮಂಗಳೂರಿನಿಂದ ಮೊದಲ ವಿಮಾನ ಜು. 17ರಂದು ಸಂಜೆ 6.50ಕ್ಕೆ ನಿರ್ಗಮಿಸಲಿದೆ. ಜು.18ರಂದು ಬೆಳಗ್ಗೆ 11.50ಕ್ಕೆ ಮತ್ತು ಮಧ್ಯಾಹ್ನ 12.50ಕ್ಕೆ ಎರಡು ವಿಮಾನಗಳು ಹೊರಡಲಿವೆ. ಜು.19ರಂದು ತಡರಾತ್ರಿ 12.30ಕ್ಕೆ ಮತ್ತು ಬೆಳಗ್ಗೆ 5.50ಕ್ಕೆ ಹಜ್ ಯಾತ್ರಿಕರ ವಿಮಾನಗಳು ನಿರ್ಗಮಿಸಲಿವೆ. ಪ್ರತಿ ವಿಮಾನದಲ್ಲಿ ತಲಾ 150 ಮಂದಿ ಪ್ರಯಾಣಿಸಲಿದ್ದಾರೆ.
ಮಕ್ಕಾ ಮತ್ತು ಮದೀನಾ ಯಾತ್ರೆ ಮುಗಿಸಿ ಹಾಜಿಗಳು ಆ. 31ರಿಂದ ಸೆ. 2ರ ತನಕ 5 ತಂಡಗಳಲ್ಲಿ ಜೆದ್ದಾ ವಿಮಾನ ನಿಲ್ದಾಣದ ಮೂಲಕ ಹಂತಹಂತವಾಗಿ ಮಂಗಳೂರಿಗೆ ಹಿಂದಿರುಗಲಿದ್ದಾರೆ.
ಹಜ್ ಶಿಬಿರಕ್ಕೆ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಭೇಟಿ
ರಾಜ್ಯ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷ ಜಿ.ಎ. ಬಾವಾ ಮಂಗಳವಾರ ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ಹಜ್ ಶಿಬಿರಕ್ಕೆ ಭೇಟಿ ನೀಡಿ ಯಾತ್ರಿಕರಿಗೆ ಶುಭ ಹಾರೈಸಿದರು. ಇದೇ ವೇಳೆ ಹಜ್ ಭವನ ನಿರ್ಮಾಣಕ್ಕೆ ಸರಕಾರದಿಂದ ಆಗಬೇಕಾದ ಎಲ್ಲ ಕೆಲಸ ಕಾರ್ಯಗಳಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಯಾತ್ರಿಕರ ಲಗೇಜ್ ಕೌಂಟರ್ ವಿಭಾಗದಲ್ಲಿ ಬುಧವಾರದ ಹಜ್ ಯಾತ್ರಿಕ ಮಂಗಳೂರು ಹರೇಕಳ ನ್ಯೂಪಡ್ಪು ನಿವಾಸಿ ಮಹಮ್ಮದ್ ಮುಸ್ಲಿಯಾರ್ ಅವರಿಗೆ ಗುರುತಿನ ಕೈಬಳೆ, ಬೋರ್ಡಿಂಗ್ ಪಾಸ್ ಮತ್ತು ಲಗ್ಗೇಜ್ ಟ್ಯಾಗನ್ನು ಜಿ.ಎ. ಬಾವಾ ಅವರು ವಿತರಿಸಿ ಪ್ರಕ್ರಿಯೆಗೆ ಚಾಲನೆ ನೀಡಿದರು. ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ