ಅಕ್ರಮ-ಸಕ್ರಮ ಸಾವಿರಾರು ಅರ್ಜಿ ತಿರಸ್ಕೃತ


Team Udayavani, Jul 17, 2019, 11:05 AM IST

hv-tdy-1

ಹಾವೇರಿ: ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದ ಎಂಬ ಕಾರಣಕ್ಕಾಗಿ ಅಕ್ರಮ ಸಕ್ರಮ ಯೋಜನೆಯಡಿ ಮನೆ ಸಕ್ರಮಗೊಳಿಸಲು ಬಡವರು ಸಲ್ಲಿಸಿದ ಸಾವಿರಾರು ಅರ್ಜಿಗಳನ್ನು ಅಧಿಕಾರಿಗಳು ತಿರಸ್ಕರಿಸಿದ್ದಾರೆ.

ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ವಾಸದ ಮನೆ, ಕಟ್ಟಡ ನಿರ್ಮಿಸಿಕೊಂಡ ಬಡವರಿಗೆ ಕೆಲವೊಂದು ಇತಿಮಿತಿಗಳಲ್ಲಿ ಅವುಗಳನ್ನು ಸಕ್ರಮಗೊಳಿಸಲು ಹಿಂದಿನ ಸರ್ಕಾರ ಅಕ್ರಮ ಸಕ್ರಮ ಕಾಯಿದೆ ಜಾರಿಗೊಳಿಸಿತ್ತು. ಈ ಕಾಯಿದೆಯಲ್ಲಿ ಸ್ಪಷ್ಟತೆ ಇಲ್ಲ ಎಂಬ ಸಬೂಬಿನೊಂದಿಗೆ ಅಧಿಕಾರಿಗಳು ಸಾವಿರಾರು ಅರ್ಜಿಗಳನ್ನು ತಿರಸ್ಕರಿಸಿ, ಮನೆ ಸಕ್ರಮಗೊಳಿಸಿಕೊಳ್ಳುವ ಸಾವಿರಾರು ಬಡವರ ಕನಸು ಭಗ್ನಗೊಂಡಿದೆ.

94ಸಿಯಲ್ಲಿ 11880 ಅರ್ಜಿ ತಿರಸ್ಕೃತ: ಅಕ್ರಮ-ಸಕ್ರಮ ಕಾಯ್ದೆಯಿಂದ ಅನೇಕ ಬಡವರು ಸ್ವಂತ ಸೂರು ಹೊಂದುವ ಕನಸು ಕಂಡಿದ್ದರು. ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಅನಧಿಕೃತವಾಗಿ ವಾಸದ ಮನೆಗಳನ್ನು ಕಟ್ಟಿಕೊಂಡ ಗ್ರಾಮೀಣ ಪ್ರದೇಶದ 12,515 ಫಲಾನುಭವಿಗಳು 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 11880 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು ಇದರಲ್ಲಿ ಕೇವಲ 602 ಅರ್ಜಿಗಳನ್ನು ಸಕ್ರಮಕ್ಕೆ ಪರಿಗಣಿಸಲಾಗಿದೆ. ಹೀಗೆ ಅರ್ಜಿ ಸಲ್ಲಿಸಿದವರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದವರ ಸಂಖ್ಯೆಯೇ ಅಧಿಕವಾಗಿರುವುದು ಗಮನಾರ್ಹ.

94ಸಿಸಿಯಲ್ಲಿ 653 ಅರ್ಜಿ ತಿರಸ್ಕೃತ: ಗ್ರಾಮೀಣ ಪ್ರದೇಶದ ಫಲಾನುಭವಿಗಳ ಸ್ಥಿತಿಯಂತೆ ನಗರ, ಪಟ್ಟಣ ಪ್ರದೇಶಗಳಲ್ಲಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಸ್ಥಿತಿಯೂ ಇದೆ. 94ಸಿಸಿ ಅಡಿಯಲ್ಲಿ ಒಟ್ಟು 793 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಅರ್ಧದಷ್ಟು 653 ಅರ್ಜಿಗಳು ತಿರಸ್ಕೃತಗೊಂಡಿವೆ. ಕೇವಲ 140 ಅರ್ಜಿಗಳನ್ನು ಸಕ್ರಮಕ್ಕೆ ಪರಿಗಣಿಸಲಾಗಿದೆ.

ವಿಶೇಷವೆಂದರೆ 94ಸಿಸಿ ಅಡಿಯಲ್ಲಿ ಸವಣೂರ ಪಟ್ಟಣದಲ್ಲಿ ಒಂದೇ ಒಂದು ಅರ್ಜಿ ಸಲ್ಲಿಕೆಯಾಗಿಲ್ಲ. ಇನ್ನು ಬ್ಯಾಡಗಿ ತಾಲೂಕಿನಲ್ಲಿ 140 ಅರ್ಜಿಗಳನ್ನು ಸಕ್ರಮಗೊಳಿಸಿದ್ದು ಬಿಟ್ಟರೆ ಜಿಲ್ಲೆಯ ಬೇರೆ ಯಾವ ತಾಲೂಕಿನಲ್ಲಿಯೂ ಒಂದು ಅರ್ಜಿಯನ್ನೂ ಸಕ್ರಮಗೊಳಿಸಿಲ್ಲ.

ಭೂ ಕಂದಾಯ ಕಾಯ್ದೆಗೆ ಕೆಲ ಮಾರ್ಪಾಡು ಮಾಡಿ ಸರ್ಕಾರ ಜಾರಿಗೊಳಿಸಿರುವ ಅಕ್ರಮ, ಸಕ್ರಮ ಯೋಜನೆಯಲ್ಲಿ ಬ ಖರಾಬ ಸಾಗು ಕ್ಷೇತ್ರ, ಸಿ ಖರಾಬ ಗೌಠಾಣ, ಅರಣ್ಯ, ಖರಾಬ ಗುಡ್ಡ, ಕಾಯ್ದಿಟ್ಟ ಅರಣ್ಯ ಇಂತಹ ಪ್ರದೇಶದಲ್ಲಿನ ಮನೆಗಳನ್ನು ಸಕ್ರಮಗೊಳಿಸಲು ಸ್ಪಷ್ಟವಾದ ಸೂಚನೆಯಿಲ್ಲ ಎಂಬ ಕಾರಣಕ್ಕಾಗಿ ತಹಸೀಲ್ದಾರ್‌ರು ಅರ್ಜಿಗಳನ್ನು ತಿರಸ್ಕೃರಿಸಿದ್ದಾರೆ. ಒಟ್ಟಾರೆ ಅಕ್ರಮ-ಸಕ್ರಮ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗದೆ ಬಡವರ ಕನಸು ಇನ್ನೂ ಕನಸಾಗಿಯೇ ಇದೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.